ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!
ರಿತ್ತಿ ಕುಟುಂಬದ ಸದಸ್ಯರಿಗೆ, ನಿಧಿ ಪತ್ತೆಯಾದ ಬಳಿಕ ಆ ಜಾಗದಲ್ಲಿ ಅನಾಹುತಗಳು ಸಂಭವಿಸುವ ಭಯ ಕಾಡುತ್ತಿದೆ. “ಆ ಜಾಗದಿಂದ ದೊಡ್ಡ ಸರ್ಪ ಎದ್ದಿದೆ. ಒಂದಲ್ಲ ಒಂದು ದಿನ ಕಚ್ಚಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನಮಗೆ ಒಬ್ಬನೇ ಮಗ ಇದ್ದಾನೆ. ಅವನ ಭವಿಷ್ಯ ನಮಗೆ ಮುಖ್ಯ. ಹೀಗಾಗಿ ಆ ಜಾಗ ನಮಗೆ ಬೇಡ” ಎಂದು ಕುಟುಂಬಸ್ಥರು ಹೇಳಿದ್ದಾರೆ.