ಚಿತ್ರದುರ್ಗ: ಟೋಲ್ ಗೇಟ್ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ.
ಗುರುವಾರ ಗುಯಿಲಾಳು ಟೋಲ್ ಗೇಟ್ನಲ್ಲಿ ಗ್ಯಾಸ್ ಟ್ಯಾಂಕರ್ ನಿಂತಿತ್ತು. ವೇಗವಾಗಿ ಬಂದ ಕಾರು ಹಿಂಬದಿಯಿಂದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಾರಿನಿಂದ ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.