ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹಾಸನ

Hasanamba Temple: ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ; ನಾಲ್ವರ ಅಮಾನತು

ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ

ವರ್ಷದಲ್ಲಿ ಒಂದು ಸಲ ಮಾತ್ರ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದೆ.

Hasanamba Temple: ಹಾಸನಾಂಬೆಯ ದರ್ಶನಕ್ಕೆ ಜನ ಸಾಗರ; ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ಹಾಸನಾಂಬೆ ದೇವಾಲಯದಲ್ಲಿ ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ (Hasanamba Temple) ಅ.09ರಿಂದ ತನ್ನ ದರ್ಶನ ಆರಂಭಿಸಿದ್ದಾಳೆ. ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ.

Hasanamba Devi Temple: ಇಂದಿನಿಂದ ಸಾರ್ವಜನಿಕರಿಗೆ ಶ್ರೀ ಹಾಸನಾಂಬಾ ದೇವಿ ದಿವ್ಯ ದರ್ಶನ, ವಸ್ತ್ರ ಸಂಹಿತೆ ಕಡ್ಡಾಯ

ಇಂದಿನಿಂದ ಸಾರ್ವಜನಿಕರಿಗೆ ಶ್ರೀ ಹಾಸನಾಂಬಾ ದೇವಿ ದಿವ್ಯ ದರ್ಶನ

Hassan: ಈ ವರ್ಷ ಬರುವ ಸಾರ್ವಜನಿಕರಿಗೆ ಹೆಲಿ ಟೂರಿಸಂ ಕೂಡ ಆಯೋಜಿಸಲಾಗಿದೆ. ದೇವಿಯ ದರ್ಶನಕ್ಕೆ ಬರುವ ಜನರಿಗೆ ದರ್ಶನದ ಜೊತೆಗೆ ಹಾಸನದ ನೆನಪು ಶಾಶ್ವತವಾಗಿ ಉಳಿಯುವಂತಹ ಅನುಭವವನ್ನು ಸವಿದು ಹೋಗುವಂತೆ ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ ಎಲ್ಲವನ್ನು ಆಯೋಜಿಸಲಾಗಿದೆ.

Hasanamba Jathra 2025: ಹಾಸನಾಂಬ ದರ್ಶನ ಆರಂಭ; ಶಾಸ್ತ್ರೋಕ್ತವಾಗಿ ತೆರೆದ ಗರ್ಭಗುಡಿ ಬಾಗಿಲು

ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬ ಗರ್ಭಗುಡಿ ಬಾಗಿಲು

ನಾಳೆಯಿಂದ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕೆ 1 ಸಾವಿರ ಹಾಗೂ 300 ರೂ. ದರದ ಟಿಕೆಟ್ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ಭಕ್ತರು ಟಿಕೆಟ್ ಪಡೆಯಬಹುದಾಗಿದೆ. ಅ. 23 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.

Hasanamba Devi Temple: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲ ತೆರೆಯಲು ಕ್ಷಣಗಣನೆ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲ ತೆರೆಯಲು ಕ್ಷಣಗಣನೆ

Hassan News: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು.

Hasanamba Utsav 2025: ನಾಳೆಯಿಂದ ಹಾಸನಾಂಬ ದರ್ಶನೋತ್ಸವ; ಈ ಬಾರಿ ವಿಐಪಿ ಸಂಸ್ಕೃತಿಗೆ ಬ್ರೇಕ್‌, ಏನೆಲ್ಲಾ ವ್ಯವಸ್ಥೆ?

ನಾಳೆಯಿಂದ ಹಾಸನಾಂಬ ದರ್ಶನೋತ್ಸವ; ಈ ಬಾರಿ ವಿಐಪಿ ಸಂಸ್ಕೃತಿಗೆ ಬ್ರೇಕ್‌

Hasanamba Jathra 2025: ಈ ಬಾರಿ‌ ಹಾಸನಾಂಬೆ ದರ್ಶನಕ್ಕೆ ದರ್ಶನಕ್ಕೆ ಸಂಬಂಧಿಸಿ ಕೆಲ ಬದಲಾವಣೆ ಮಾಡಲಾಗಿದೆ. ಭಕ್ತರಿಗೆ ಜಿಲ್ಲಾಡಳಿತ ಡ್ರೆಸ್ ಕೋಡ್ ನಿಗದಿಪಡಿಸಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದು ದೇವಿ ದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Hasanamba Jathra 2025: ನಾಳೆಯಿಂದ ಹಾಸನಾಂಬ ಜಾತ್ರೆ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ನಾಳೆಯಿಂದ ಹಾಸನಾಂಬ ಜಾತ್ರೆ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

Hasanamba Utsav 2025: ಹಾಸನಾಂಬ ದರ್ಶನೋತ್ಸವಕ್ಕೆ ಈ ಬಾರಿ 25 ಲಕ್ಷಕ್ಕೂ ಹೆಚ್ಚು ಮಂದಿ ಬರುವ ನಿರೀಕ್ಷೆ ಇದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ದೇವಿ ದರ್ಶನಕ್ಕೆ 80 ವರ್ಷಕ್ಕಿಂತ ಮೇಲಿನವರು ಹಾಗೂ ಅಂಗವಿಕಲರಿಗೆ ನೇರದರ್ಶನ ವ್ಯವಸ್ಥೆ ಮಾಡಲಾಗಿದೆ. ಗಂಟೆಗೆ 6 ಸಾವಿರ ಮಂದಿಯಂತೆ ಪ್ರತಿದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

Coldrif cough syrup: ಕಾಫ್‌ ಸಿರಪ್‌ ದುರಂತ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಕಾಫ್‌ ಸಿರಪ್‌ ದುರಂತ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ

Dinesh Gundu Rao: ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಪ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Hasanamba Temple: ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬ ದೇವಾಲಯ ಗರ್ಭಗುಡಿ ಮುಂದಿನ ವಾರ ಓಪನ್‌, ದರ್ಶನೋತ್ಸವಕ್ಕೆ ಕ್ಷಣಗಣನೆ

ಹಾಸನಾಂಬ ದೇವಾಲಯ ಗರ್ಭಗುಡಿ ಮುಂದಿನ ವಾರ ಓಪನ್‌, ದರ್ಶನೋತ್ಸವಕ್ಕೆ ಕ್ಷಣಗಣನೆ

Hassan news: ಅಕ್ಟೋಬರ್ 9, 2025 ರಂದು ಮಧ್ಯಾಹ್ನ 12:30ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಜಿಲ್ಲಾಡಳಿತವು ಬಿರುಸಿನ ಸಿದ್ಧತೆಯಲ್ಲಿ ತೊಡಗಿದೆ. ಈ ವರ್ಷದ ಜಾತ್ರಾ ಮಹೋತ್ಸವವು ಅಕ್ಟೋಬರ್ 9 ರಿಂದ 23 ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಅಕ್ಟೋಬರ್ 10 ರಿಂದ 22 ರವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ.

Hassan blast case: ಹಾಸನ ನಿಗೂಢ ಸ್ಫೋಟ: ಗಾಯಗೊಂಡಿದ್ದ ದಂಪತಿ ಸಾವು

ಹಾಸನ ನಿಗೂಢ ಸ್ಫೋಟ: ಗಾಯಗೊಂಡಿದ್ದ ದಂಪತಿ ಸಾವು

blast case: ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಹೀಗಾಗಿ ಮತ್ತಷ್ಟು ಅನಾಹುತದ ಸಾಧ್ಯತೆ ತಪ್ಪಿದೆ. ಆಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಸಿಲಿಂಡರ್‌ ಸ್ಫೋಟ, ಜಿಲೆಟಿನ್‌ ಸ್ಫೋಟ, ಡಿಟೋನೇಟರ್‌ ಸ್ಫೋಟದ ಸಾಧ್ಯತೆಗಳನ್ನು ತರ್ಕಿಸಲಾಗಿದೆ.

Hassan blast: ಹಾಸನದಲ್ಲಿ ನಿಗೂಢ ಸ್ಫೋಟ, ದಂಪತಿ ತೀವ್ರ ಗಾಯ, ಮಕ್ಕಳು ಪಾರು

ಹಾಸನದಲ್ಲಿ ನಿಗೂಢ ಸ್ಫೋಟ, ದಂಪತಿ ತೀವ್ರ ಗಾಯ, ಮಕ್ಕಳು ಪಾರು

Blast: ಸ್ಫೋಟದ ತೀವ್ರತೆಗೆ ಇಡೀ ಮನೆಯೇ ಧ್ವಂಸವಾಗಿದೆ. ಮನೆಯ ಹೊರಗಡೆ ಈ ಸ್ಫೋಟ ಆಗಿದ್ದು, ಮನೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಕಾಂಪೌಂಡ್‌ ಕುಸಿದುಬಿದ್ದಿದೆ. ಸ್ಫೋಟದ ತೀವ್ರತೆ ನೋಡಿದರೆ ಇದು ಜಿಲೆಟಿನ್‌ ಅಥವಾ ಡಿಟೋನೇಟರ್‌ ಇರಬಹುದೇ ಎಂಬ ಅನುಮಾನ ಮೂಡಿದೆ. ಇಬ್ಬರು ಗಾಯಗೊಂಡಿದ್ದಾರೆ.

Lathi Charge: 1 ಸಾವಿರಕ್ಕೆ 20 ಶರ್ಟ್‌ ಆಫರ್‌, ನೂಕುನುಗ್ಗಲು, ಪೊಲೀಸರಿಂದ ಲಾಠಿ ಚಾರ್ಜ್!‌

1 ಸಾವಿರಕ್ಕೆ 20 ಶರ್ಟ್‌ ಆಫರ್‌, ನೂಕುನುಗ್ಗಲು, ಪೊಲೀಸರಿಂದ ಲಾಠಿ ಚಾರ್ಜ್!‌

Hassan: ಜನರು ಹೆಚ್ಚಾಗುತ್ತಿದ್ದಂತೆ ನೂಕುನುಗ್ಗಲು ಜೋರಾಗಿದೆ. ಅದು ಗೊಂದಲಕ್ಕೆ ಕಾರಣವಾಗಿ, ಸ್ಥಳೀಯರಿಗೆ ತೊಂದರೆಯಾಯಿತು. ಅಂಗಡಿಯ ಮುಂದಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ತೊಡಕು ಉಂಟಾಯಿತು. ಪರಿಸ್ಥಿತಿ ಗಂಭೀರಗೊಂಡಾಗ, ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಜನಸಮೂಹವನ್ನು ನಿಯಂತ್ರಿಸಲು ಪ್ರಯತ್ನಿಸಿದರು.

Hassan News: 1 ಸಾವಿರಕ್ಕೆ 20 ಶರ್ಟ್‌ ಆಫರ್‌; ಖರೀದಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಲಾಠಿ ಚಾರ್ಜ್‌!

1 ಸಾವಿರಕ್ಕೆ 20 ಶರ್ಟ್‌ ಆಫರ್‌; ಬಟ್ಟೆ ಖರೀದಿಗೆ ಮುಗಿಬಿದ್ದ ಜನ!

Arun Adda Mens Wear: ಹಾಸನದಲ್ಲಿ ಅರುಣ್ ಅಡ್ಡ ಮೆನ್ಸ್ ವೇರ್‌ ಅಂಗಡಿಯಲ್ಲಿ 1 ಸಾವಿರ ರೂ.ಗೆ 20 ಶರ್ಟ್‌ ಆಫರ್‌ ನೀಡಿದ್ದರು. ಹೀಗಾಗಿ ಬಟ್ಟೆ ಖರೀದಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅಲ್ಲದೆ ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಲಾಠಿ ಚಾರ್ಜ್ ನಡೆಸಿದ ಪರಿಣಾಮ ಯುವಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

Mantra Mangalya: ನ.13ರಂದು ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ, ಗುರುವಂದನಾ ಕಾರ್ಯಕ್ರಮ

ನ.13ರಂದು ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ, ಗುರುವಂದನಾ ಕಾರ್ಯಕ್ರಮ

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಲೀಲಾಖ್ಯ ಮತ್ತು ಕನ್ನಡ ಮಠದಲ್ಲಿ ನ.13ರಂದು ಗುರುವಾರ ಬೆಳಗ್ಗೆ 10.30ಕ್ಕೆ ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.

S.L. Bhyrappa: ನನ್ನ ಸಾಧನೆಗೆ ತಾಯಿಯೇ ಸ್ಫೂರ್ತಿ; ಹುಟ್ಟೂರ ಸನ್ಮಾನದಲ್ಲಿ ಮನಬಿಚ್ಚಿ ಮಾತನಾಡಿದ್ದ ಭೈರಪ್ಪ

ನನ್ನ ಸಾಧನೆಗೆ ತಾಯಿಯೇ ಸ್ಫೂರ್ತಿ ಎಂದಿದ್ದ ಎಸ್‌.ಎಲ್‌. ಭೈರಪ್ಪ

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ಇನ್ನಿಲ್ಲ. 1931ರ ಜುಲೈ 20ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಈ ವರ್ಷದ ಮಾರ್ಚ್ 9ರಂದು ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಸನ್ಮಾನ ನಡೆದಿತ್ತು. ಈ ವೇಳೆ ಅವರು ಮಾತನಾಡಿ ನನ್ನ ಸಾದನೆಗೆ ತಾಯಿಯೇ ಸ್ಫೂರ್ತಿ ಎಂದು ಹೇಳಿದ್ದರು.

Hassan news: ಹಾಸನ ಹಿಮ್ಸ್‌ ಆಸ್ಪತ್ರೆಯಲ್ಲಿ ಹಿಂಸೆ, ವೈದ್ಯರ ಎಡವಟ್ಟಿನಿಂದ ಎಡಗಾಲಿನ ಬದಲು ಬಲಗಾಲಿಗೆ ಶಸ್ತ್ರಚಿಕಿತ್ಸೆ

ಹಿಮ್ಸ್‌ ಆಸ್ಪತ್ರೆಯಲ್ಲಿ ಎಡಗಾಲಿನ ಬದಲು ಬಲಗಾಲು ಕುಯ್ದ ವೈದ್ಯರು

HIMS: ಗಾಯಗೊಂಡಿರುವ ಪೇಷೆಂಟ್‌ ಜ್ಯೋತಿ, ಚಿಕ್ಕಮಂಗಳೂರು ಜಿಲ್ಲೆಯ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿದ್ದಾರೆ. ಎರಡುವರೆ ವರ್ಷದ ಹಿಂದೆ ಜ್ಯೋತಿ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಪೆಟ್ಟಾಗಿ ನಡೆಯಲು ಸಾಧ್ಯವಾಗದೆ ಇದ್ದುದರಿಂದ ವೈದ್ಯರು ಎಡಗಾಲಿಗೆ ರಾಡ್‌ ಅಳವಡಿಸಿದ್ದರು.

Hassan News: ಹಾಸನದಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮಹಿಳೆ ಅರೆಸ್ಟ್!

ಹಾಸನದಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮಹಿಳೆ ಅರೆಸ್ಟ್!

Ganesha Idol Insulted: ಬೇಲೂರಿನಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಘಟನೆಗೆ ಹಿಂದೂಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮುಸುಕುಧಾರಿ ಮಹಿಳೆ ದೇವಾಲಯಕ್ಕೆ ಹೋಗುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪ್ರಕರಣಕ್ಕೆಸಂಬಂಧಿಸಿ ಹಾಸನದ ಗುಡ್ಡೇನಹಳ್ಳಿಯ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Beluru News: ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳು; ಭಕ್ತರಿಂದ ಆಕ್ರೋಶ

ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳು

ಮಂಡ್ಯದಲ್ಲಿ ಇತ್ತೀಚೆಗೆ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆ ಮಾಸುವ ಮುನ್ನವೇ ಭಕ್ತರ ಭಾವನೆಗೆ ದಕ್ಕೆ ತರುವಂತ ಘಟನೆಯೊಂದು ನಡೆದಿದೆ. ಗಣೇಶನ ವಿಗ್ರಹಕ್ಕೆ (Ganesha Idol) ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

Murder Case: ಕೆಲಸ ನೀಡಿದ ಮಹಿಳೆಯನ್ನೇ ಕಲ್ಲಿನಿಂದ ಜಜ್ಜಿ ಸಾಯಿಸಿದ ಅಪ್ರಾಪ್ತ!

ಕೆಲಸ ನೀಡಿದ ಮಹಿಳೆಯನ್ನೇ ಕಲ್ಲಿನಿಂದ ಜಜ್ಜಿ ಸಾಯಿಸಿದ ಅಪ್ರಾಪ್ತ!

Hassan Crime: ಈಕೆಯನ್ನು ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮ ಅವರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ. ಸೆ.15ರಂದು ಬಾಲಕ ಮೀನಾಕ್ಷಮ್ಮ ಜೊತೆಗೆ ಜಗಳ ತೆಗೆದಿದ್ದಾನೆ. ನಂತರ ಆಕೆಯ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

Hassan Tragedy: ಹಾಸನ ದುರಂತ; ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗ್ತಿದ್ದಂತೆ ಟ್ರಕ್‌ ಚಾಲಕ ಅರೆಸ್ಟ್‌

ಹಾಸನ ದುರಂತ; ಟ್ರಕ್‌ ಚಾಲಕ ಅರೆಸ್ಟ್‌

ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Hassan tragedy: ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆದಂತಾಗಿದೆ.

Hassan Tragedy: ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; ತಲಾ 1 ಲಕ್ಷ ಪರಿಹಾರ ಘೋಷಿಸಿದ ಎಚ್.ಡಿ ದೇವೇಗೌಡ

ಹಾಸನ ದುರಂತ; ಮೃತರ ಸಂಖ್ಯೆ 10ಕ್ಕೆ ಏರಿಕೆ, ಜೆಡಿಎಸ್‌ನಿಂದ ಪರಿಹಾರ

H. D. Deve Gowda: ಹಾಸನ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಮಾಜಿ ಸಿಎಂ ಎಚ್‌.ಡಿ.ದೇವೇಗೌಡ ಅವರು ಘೋಷಿಸಿದ್ದು,

CM Siddaramaiah: ಹಾಸನ ಅಪಘಾತ ಪ್ರಕರಣ: ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ- ಸಿಎಂ ಸಿದ್ದರಾಮಯ್ಯ

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ- ಸಿಎಂ ಸಿದ್ದರಾಮಯ್ಯ

CM Siddaramaiah: ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Hassan tragedy: ಟ್ರಕ್‌ ಚಾಲಕನ ನಿರ್ಲಕ್ಷ್ಯವೇ ಹಾಸನ ದುರಂತಕ್ಕೆ ಕಾರಣ: ಕೃಷ್ಣ ಬೈರೇಗೌಡ

ಟ್ರಕ್‌ ಚಾಲಕನ ನಿರ್ಲಕ್ಷ್ಯವೇ ಹಾಸನ ದುರಂತಕ್ಕೆ ಕಾರಣ: ಕೃಷ್ಣ ಬೈರೇಗೌಡ

Krishna Byregowda: ಟ್ರಕ್‌ ಚಾಲಕನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Loading...