ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಹಾಸನ
Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲಿನಲ್ಲಿತ್ತು 2000 ಅಶ್ಲೀಲ ಫೋಟೋ, ವಿಡಿಯೋ: ಸಿಕ್ಕಿದ್ದು ಹೇಗೆ?

ಪ್ರಜ್ವಲ್‌ ರೇವಣ್ಣ ಮೊಬೈಲಲ್ಲಿತ್ತು 2000 ಅಶ್ಲೀಲ ಫೋಟೊ, ವಿಡಿಯೊ!

Prajwal Revanna Case: 2018ರಿಂದ ಪ್ರಜ್ವಲ್‌ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಪ್ರಜ್ವಲ್‌ ಕ್ಷೇತ್ರ ಸಂಚಾರ ಮಾಡುತ್ತಿದ್ದಾಗ ಕಾರಿನಲ್ಲೇ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿದ್ದರು. ನಾನು ಅವರತ್ತ ನೋಡಿದರೆ ಮೊಬೈಲ್‌ ತಿರುಗಿಸಿಕೊಳ್ಳುತ್ತಿದ್ದರು ಎಂದು ಕಾರ್ತಿಕ್‌ ಸಾಕ್ಷ್ಯ ಹೇಳಿದ್ದಾನೆ.

Road Accident: ಮಳೆ ಅನಾಹುತ, ದಾರಿ ಕಾಣದೆ ಕಾರು ಪಲ್ಟಿಯಾಗಿ ಇಬ್ಬರು ಸಾವು

ಮಳೆ ಅನಾಹುತ, ದಾರಿ ಕಾಣದೆ ಕಾರು ಪಲ್ಟಿಯಾಗಿ ಇಬ್ಬರು ಸಾವು

ಬೆಂಗಳೂರು ಮೂಲದ ಟ್ರಾವೆಲ್ಸ್ ಒಂದರ ಮೂಲಕ ಬಾಡಿಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು (Road Accident News) ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Karnataka Rains: ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ, ಸಂಚಾರಕ್ಕೆ ಅಡಚಣೆ; ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಬಿದ್ದು ನಾಲ್ವರಿಗೆ ಗಾಯ

ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ; ಸಂಚಾರಕ್ಕೆ ಅಡಚಣೆ

Karnataka Rains:: ಕರ್ನಾಟಕದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೇ ಅಂತ್ಯದವರೆಗೆ ಕರ್ನಾಟಕದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.

Hassan News: ಕರಿಮಣಿ ಮಾಲಿಕ ನೀನಲ್ಲ ಎಂದು ಹೊರನಡೆದ ವಧು ನಲ್ಲನ ಜೊತೆ ವಿವಾಹ

ಕರಿಮಣಿ ಮಾಲಿಕ ನೀನಲ್ಲ ಎಂದು ಹೊರನಡೆದ ವಧು ನಲ್ಲನ ಜೊತೆ ವಿವಾಹ

ರಘು ಎಂಬಾತನನ್ನು ಪಲ್ಲವಿ ಪ್ರೀತಿಸುತ್ತಿರುವ ವಿಚಾರ ಗೊತ್ತಾಗಿತ್ತು. ಇದೀಗ, ಪಲ್ಲವಿ ತಾನು ಇಷ್ಟಪಟ್ಟ ಹುಡುಗನ ಜೊತೆಗೆನೇ ವಿವಾಹವಾಗಿದ್ದಾರೆ. ಮದುವೆ ಅರ್ಧದಲ್ಲೇ ನಿಂತುಹೋಗಿದ್ದ ಕಲ್ಯಾಣ ಮಂಟಪದ ಆವರಣದಲ್ಲೇ ಈ ದೇವಾಲಯ ಇದ್ದು, ಗಣಪತಿ ದೇವಾಲಯದ ಆವರಣದಲ್ಲಿ ಸರಳ ವಿವಾಹ ನಡೆದಿದೆ.

Hassan News: ತಾಳಿ‌ ಕಟ್ಟುವ ವೇಳೆ ಫೋನ್‌ ಕಾಲ್‌; ಮದುವೆ ಬೇಡ ಎಂದು ಹೊರನಡೆದ ವಧು!

ತಾಳಿ‌ ಕಟ್ಟುವ ವೇಳೆ ಮದುವೆ ಬೇಡ ಎಂದು ಹೊರನಡೆದ ವಧು!

Hassan News: ಮುಹೂರ್ತದ ವೇಳೆ ಪ್ರಿಯಕರನಿಂದ ಯುವತಿಗೆ ದೂರವಾಣಿ ಕರೆ ಬಂದಿದ್ದು, ತಕ್ಷಣವೇ ಮದುವೆ ಬೇಡ ಎಂದು ಯುವತಿ ನಿರಾಕರಿಸಿದ್ದಾಳೆ. ಯುವತಿ ಹಠ ಮಾಡಿದ್ದಕ್ಕೆ ವರ ಕೂಡ ನನಗೂ ಈ ಮದುವೆ ಬೇಡ ಎಂದು ಕಣ್ಣೀರಿಡುತ್ತಾ ಹೋಗಿದ್ದಾನೆ.

Heart Failure: ದಿಡೀರ್‌ ಹೃದಯವೈಫಲ್ಯ: 19 ವರ್ಷದೊಳಗಿನ ಇಬ್ಬರ ಸಾವು

ದಿಡೀರ್‌ ಹೃದಯವೈಫಲ್ಯ: 19 ವರ್ಷದೊಳಗಿನ ಇಬ್ಬರ ಸಾವು

ಯಾವ ಹೃದಯದ ಸಮಸ್ಯೆಯೂ ಕಾಣಿಸಿಕೊಳ್ಳದ ಯುವಕ ಯುವತಿಯರಲ್ಲಿ ಇದ್ದಕ್ಕಿದ್ದಂತೆ ಹೃದಯ ವೈಫಲ್ಯದಿಂದ (Heart Failure) ಸಾವನ್ನು ಅಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಹಾಸನದಲ್ಲಿ ಒಬ್ಬ ಯುವತಿ, ಬೆಂಗಳೂರಿನಲ್ಲಿ ಯುವಕ ಹೀಗೆ ಮೃತಪಟ್ಟಿದ್ದಾರೆ.

Madenuru Manu: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಅರೆಸ್ಟ್

ಹಾಸನದಲ್ಲಿ ನಟ ಮಡೆನೂರು ಮನು ಅರೆಸ್ಟ್

Madenuru Manu: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಹಾಸನದಲ್ಲಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

Murder Case: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!

Murder Case: 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ.

Kidnap case: ತಂದೆಯ ಎದುರೇ ಮಗಳ ಕಿಡ್ನ್ಯಾಪ್‌; ರಕ್ಷಿಸಲು ಹೋದ ತಂದೆಯನ್ನು 200 ಮೀಟರ್ ಎಳೆದೊಯ್ದ ಕಾರು!

ಹಾಸನದಲ್ಲಿ ತಂದೆಯ ಎದುರೇ ಮಗಳ ಕಿಡ್ನ್ಯಾಪ್‌!

Kidnap case: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ತಂದೆ ಜತೆ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಕಿಡ್ನ್ಯಾಪ್‌ ಮಾಡಲಾಗಿದೆ. ಮಗಳನ್ನು ರಕ್ಷಿಸಲು ಹೋದ ತಂದೆಯನ್ನು ಕಾರು ಸುಮಾರು 200 ಮೀಟರ್ ಎಳೆದೊಯ್ದಿದೆ.

Accidental death: ಟ್ರ್ಯಾಕ್ಟರ್‌ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ ಸಾವು

ಟ್ರ್ಯಾಕ್ಟರ್‌ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ ಸಾವು

ಜಗದೀಶ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಜಗದೀಶ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಸಚಿವ ಹೆಚ್ ಎಂ ರೇವಣ್ಣ ಆಪ್ತರಾಗಿದ್ದರು.

Elephant attack: ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಸಾವು; ಶಾಸಕ ಸಿಮೆಂಟ್‌ ಮಂಜು ಸಂತಾಪ

ಕಾಡಾನೆ ದಾಳಿಗೆ ವ್ಯಕ್ತಿ ಸಾವು; ಶಾಸಕ ಸಿಮೆಂಟ್‌ ಮಂಜು ಸಂತಾಪ

Elephant attack: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೈಕೆರೆವ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮೃತಪಟ್ಟಿರುವ ಷಣ್ಮುಖ ಅವರ ಸಾವಿಗೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಸಂತಾಪ ವ್ಯಕ್ತಪಡಿಸಿದ್ದು, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Prajwal Revanna case: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಅತ್ಯಾಚಾರ ಕೇಸ್‌ ವಿಚಾರಣೆ ನಾಳೆ ಆರಂಭ

ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಕೇಸ್‌ ವಿಚಾರಣೆ ನಾಳೆ ಆರಂಭ

ಜನತಾ ದಳ (ಜಾತ್ಯತೀತ- JDS) ಪಕ್ಷದ ಮಾಜಿ ನಾಯಕ ರೇವಣ್ಣ (35) ಅವರು ಹಾಸನದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಕೆಲಸದವಳ ಮೇಲೆ ತಮ್ಮ ಪ್ರಾಬಲ್ಯ ಮತ್ತು ಅಧಿಕಾರವನ್ನು ಬಳಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿರುವ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನುಪ್ರಾರಂಭಿಸಲು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

A T Ramaswamy: ಬಿಜೆಪಿಗೆ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ

ಬಿಜೆಪಿಗೆ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ

A T Ramaswamy: ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ ಎಂದು ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

2nd PUC Result 2025: ದ್ವಿತೀಯ ಪಿಯುಸಿಯಲ್ಲಿ ಶೇ. 79 ಅಂಕ ಬಂದ್ರೂ ಕಡಿಮೆಯಾಯ್ತು ಎಂದು ವಿದ್ಯಾರ್ಥಿ ಆತ್ಮಹತ್ಯೆ!

ದ್ವಿತೀಯ ಪಿಯುಸಿಯಲ್ಲಿ ಶೇ. 79 ಅಂಕ ಬಂದ್ರೂ ವಿದ್ಯಾರ್ಥಿ ಆತ್ಮಹತ್ಯೆ!

2nd PUC Result 2025: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಘಟನೆ ನಡೆದಿದೆ. ಎಸ್​ಎಸ್​ಎಲ್​ಸಿಯಲ್ಲಿ ವಿದ್ಯಾರ್ಥಿ ಶೇ. 98 ಅಂಕ ಪಡೆದಿದ್ದ. ಆದರೆ, ದ್ವಿತೀಯ ಪಿಯುಸಿಯಲ್ಲಿ ಶೇ. 79 ಅಂಕ ಬಂದಿದೆ. ಇದರಿಂದ ತಾನು ನಿರೀಕ್ಷಿಸಿದಷ್ಟು ಮಾರ್ಕ್ಸ್‌ ಬರಲಿಲ್ಲ ಎಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.

BY Vijayendra: ಬೆಲೆ ಏರಿಕೆಯಿಂದ ಜನರ ಸಹನೆಯ ಕಟ್ಟೆ ಒಡೆಯುವ ಪರಿಸ್ಥಿತಿ- ವಿಜಯೇಂದ್ರ

ಬೆಲೆ ಏರಿಕೆಯಿಂದ ಜನರ ಸಹನೆಯ ಕಟ್ಟೆ ಒಡೆಯುವ ಪರಿಸ್ಥಿತಿ-ವಿಜಯೇಂದ್ರ

BY Vijayendra: ಬೆಲೆ ಏರಿಕೆಯಿಂದ ಜನರು ಪರದಾಡುವ ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರ ಸರ್ಕಾರ ನಿರ್ಮಿಸಿದ್ದು, ಇದು ದುರದೃಷ್ಟಕರ. ಭ್ರಷ್ಟಾಚಾರ ಮಿತಿ ಮೀರಿ ಹೋಗಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕವೇ ನಂಬರ್ ಒನ್ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Viral Video: ಫಾರೆಸ್ಟ್‌ ಆಫೀಸರ್‌ಗಳನ್ನೇ ಅಟ್ಟಾಡಿಸಿದ ಕಾಡಾನೆ; ಅಷ್ಟಕ್ಕೂ ಆಗಿದ್ದೇನು? ವಿಡಿಯೊ ಇದೆ

ಕೃಷಿ ಭೂಮಿಗೆ ನುಗ್ಗಿದ ಆನೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಡಿದ್ದೇನು?

ಕಾಡಾನೆಯೊಂದು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬೆನ್ನಟ್ಟಿದ ಘಟನೆ ಹಾಸನದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ಭಯಾನಕ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.

Shiradi Ghat: ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ: ಎಷ್ಟು ದಿನ, ವಿವರ ಇಲ್ಲಿದೆ

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ: ಎಷ್ಟು ದಿನ, ವಿವರ ಇಲ್ಲಿದೆ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಉದ್ದೇಶಿಸಿತ್ತು ಇದೀಗ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.

S L Bhyrappa: ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಗಣ್ಯರ ಸಮ್ಮುಖದಲ್ಲಿ ಸಮ್ಮಾನ

ಎಸ್‌.ಎಲ್‌.ಭೈರಪ್ಪ ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಸಮ್ಮಾನ

S L Bhyrappa: ಹುಟ್ಟೂರಾದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಗಣ್ಯರ ಸಮ್ಮುಖದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರಿಗೆ ಸನ್ಮಾನ ನಡೆಯಿತು. ಸಮಾರಂಭದ ಅಂಗವಾಗಿ ಬೆಳಗ್ಗೆೆ ಚಿಕ್ಕೋನಹಳ್ಳಿ ಗೇಟ್ ಬಳಿಯಿಂದ ಸಂತೇಶಿವರ ಗ್ರಾಮದವರೆಗೆ ಬೆಳ್ಳಿ ಸಾರೋಟಿನಲ್ಲಿ ಎಸ್‌.ಎಲ್‌.ಭೈರಪ್ಪ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.

S L Bhyrappa: ಪ್ರತಿ ಗ್ರಾಮದಲ್ಲಿ ಎಸ್.ಎಲ್.ಭೈರಪ್ಪರಂಥವರು ಹುಟ್ಟಿದರೆ, ನಾಡು ಶ್ರೀಮಂತವಾಗುತ್ತದೆ: ಬೊಮ್ಮಾಯಿ

ಪ್ರತಿ ಗ್ರಾಮದಲ್ಲಿ ಎಸ್.ಎಲ್.ಭೈರಪ್ಪರಂಥವರು ಹುಟ್ಟಬೇಕು: ಬೊಮ್ಮಾಯಿ

S L Bhyrappa: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಹುಟ್ಟೂರಾದ ಚನ್ನರಾಯಪಟ್ಟಣದ ಸಂತೆಶಿವರ ಗ್ರಾಮದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಬೈರಪ್ಪನವರು ಬದುಕನ್ನು ಅನುಭವಿಸಿ ಬರಹ ಬರೆದಿದ್ದಾರೆ. ಬರಹದಿಂದ ಬದುಕನ್ನು ಶ್ರೀಮಂತಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Building collapse: ಬೇಲೂರಿನಲ್ಲಿ ಪಾಳು ಬಿದ್ದ ಕಟ್ಟಡ ಕುಸಿದು ಮೂವರ ಸಾವು

ಬೇಲೂರಿನಲ್ಲಿ ಪಾಳು ಬಿದ್ದ ಕಟ್ಟಡ ಕುಸಿದು ಮೂವರ ಸಾವು

Building collapse: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

SL Bhyrappa: ನಾಳೆ ಸಂತೇಶಿವರದಲ್ಲಿ ಕಾದಂಬರಿಕಾರ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಕೃತಜ್ಞತಾರ್ಪಣೆ

ನಾಳೆ ಸಂತೇಶಿವರದಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಗೌರವ

ಭೈರಪ್ಪ ಅವರ ಪ್ರಯತ್ನದ ಫಲವಾಗಿ ಯೋಜನೆ ಸಫಲಗೊಂಡು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ಪೂರೈಕೆಯಾಗಿದೆ. ಸುತ್ತಲ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಿಂದಾಗಿ ಸಾವಿರಾರು ಕೊಳವೆ ಬಾವಿಗಳು ಮರುಪೂರಣಗೊಂಡು ರೈತ ಸಮುದಾಯಕ್ಕೆ ಖುಷಿ ನೆಮ್ಮದಿ ದೊರೆತಿದೆ. ಇದರಿಂದ ಹರ್ಷಗೊಂಡ ಊರಿನ ಜನ ಭೈರಪ್ಪನವರನ್ನು ಸನ್ಮಾನಿಸುತ್ತಿದ್ದಾರೆ.

ಪತ್ರಿಕಾ ವೃತ್ತಿ ನಿತ್ಯ ಬೆಳಗ್ಗೆ ಆರಂಭವಾಗುವುದೇ ಪತ್ರಿಕಾ ವಿತರಕರಿಂದ: ಕೆ.ವಿ.ಪ್ರಭಾಕರ್

ಪತ್ರಿಕಾ ವೃತ್ತಿ ನಿತ್ಯ ಬೆಳಗ್ಗೆ ಆರಂಭವಾಗುವುದೇ ಪತ್ರಿಕಾ ವಿತರಕರಿಂದ

ಚನ್ನರಾಯಪಟ್ಟಣದಲ್ಲಿ ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ.

Elephant Attack: ಬೇಲೂರಿನಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ

ಬೇಲೂರಿನಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ

ಮೃತ ಅನಿಲ್​ ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್‌ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Road Accident: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದವರ ಮೇಲೆ ಹರಿದ ಬಸ್‌, ಇಬ್ಬರು ಬಲಿ

ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದವರ ಮೇಲೆ ಹರಿದ ಬಸ್‌, ಇಬ್ಬರು ಬಲಿ

ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಂಡ್ಯ (Mandya news) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು.