ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿ

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ಹಾವೇರಿ ಮೂಲದ ನೌಕಾಪಡೆ ಯೋಧ ಸಾವು

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ನೌಕಾಪಡೆ ಯೋಧ ಸಾವು

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದ ಯೋಧ ಯಶೋಧರ ವಡ್ಡರ ಅವರು ತರಬೇತಿ ವೇಳೆ ಬಂದೂಕು ಮಿಸ್‌ ಫೈರಿಂಗ್‌ ಆಗಿ ಮೃತಪಟ್ಟಿದ್ದಾರೆ. ಕೊಚ್ಚಿ ನೌಕಾಪಡೆಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಂಗಳೂರು ಮೂಲಕ ಹಾವೇರಿಗೆ ಪಾರ್ಥಿವ ಶರೀರದ ರವಾನೆ ಮಾಡಲಾಗಿದೆ.

Cloud Seeding in Haveri: ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ; ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಮುಂದಾದ 6 ಶಾಸಕರು

ಮಳೆ ಕೊರತೆ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸಿದ್ಧತೆ

Haveri Rain Deficit: ಮೋಡ ಬಿತ್ತನೆ ಬಗ್ಗೆ ರಾಣೆಬೆನ್ನೂರು ಶಾಸಕ ಪ್ರಕಾಶ್‌ ಕೋಳಿವಾಡ ಮಾಹಿತಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಆರು ಶಾಸಕರು ಮಾತನಾಡಿಕೊಂಡು, ಜಿಲ್ಲೆಯ ಏಂಟು ತಾಲೂಕಿನಲ್ಲಿ ಮೋಡ ಬಿತ್ತನೆ ಮಾಡಲು ತೀರ್ಮಾನಿಸಿದ್ದೇವೆ. ಜು.7ರಂದು ಮಂಗಳವಾರ ಮೋಡ ಬಿತ್ತನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಭೀಕರ ಕೊಲೆ; ಹಾವೇರಿಯಲ್ಲಿ ಮತ್ತೊಮ್ಮೆ ಹರಿದ ನೆತ್ತರು

ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಭೀಕರ ಕೊಲೆ

Haveri News: ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಕೊಲೆ ನಡೆದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಅಂಗಡಿ ಮಾಲಕ ಶಿವಾಜಿರಾವ್‌ ಭೈರೋಜಿಯವರ (60) ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ಹಾವೇರಿಯ ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ: ಪ್ರಕರಣ ದಾಖಲು

ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ

Haveri News: ಹಾವೇರಿ ತಾಲೂಕಿನ ಗುತ್ತಲ ವ್ಯಾಪ್ತಿಯಲ್ಲಿ ಹರಿಯುವ ತುಂಗಭದ್ರಾ‌ ತೀರದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿರುವ ಹಾವೇರಿಯ ಗಣಿ ಮತ್ತು ಭೂ ವಿಜ್ಞಾನ ಹಿರಿಯ ಅಧಿಕಾರಿಗಳು, 80 ಟನ್ ಮರಳು ಹಾಗೂ ಎರಡು ತೆಪ್ಪಗಳು ಸೇರಿದಂತೆ ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಜರುಗಿದೆ.

Haveri Clash: ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ರೈತನ ಕೈ ಕಟ್‌; ಎರಡು ಕೋಮುಗಳ ನಡುವೆ ಮಾರಾಮಾರಿ, 8 ಮಂದಿಗೆ ಗಾಯ

ಹಾವೇರಿಯಲ್ಲಿ ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ರೈತನ ಕೈ ಕಟ್‌

ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಹೋರಿ ಓಡಿಸುವ ಕಾರ್ಯಕ್ರಮವಿತ್ತು. ಅದರಂತೆ ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಗ್ರಾಮದ ಮಸೀದಿ ಬಳಿ ಹಿಂದೂ ಯುವಕರು ಪಟಾಕಿ ಸಿಡಿಸಿದ್ದರು. ಇದಕ್ಕೆ ಆಕ್ಷೇಪ ಅನ್ಯ ಸಮುದಾಯದ ಗುಂಪು ವ್ಯಕ್ತಪಡಿಸಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.

Haveri Drought: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮುಂದಾದ ಅನ್ನದಾತ; ಬರಗಾಲ ಘೋಷಣೆಗೆ ಆಗ್ರಹ

ಮಳೆ ಇಲ್ಲದೆ ಬೆಳೆ ನಾಶಕ್ಕೆ ಮುಂದಾದ ಅನ್ನದಾತ; ಬರಗಾಲ ಘೋಷಣೆಗೆ ಆಗ್ರಹ

Rain Deficit in Haveri: ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೆ ಒಣಗುತ್ತಿವೆ. ವಾಡಿಕೆಯಷ್ಟೂ ಮಳೆಯಿಲ್ಲದೆ ಸಾವಿರಾರು ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗುವ ಭೀತಿ ಎದುರಾಗಿದೆ.

Bomb threat: ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಸಂದೇಶ; ಆತಂಕದ ಸ್ಥಿತಿ ನಿರ್ಮಾಣ

ಹಾವೇರಿ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಆತಂಕಗೊಂಡ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಒಮ್ಮೆಲೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

BC Patil: ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಿಮ್ಮಂತವರಿಂದಲೇ ಬಿಜೆಪಿ ಹಾಳಾಗಿದೆ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರು, ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು ಎಂದು ಹೇಳಿದ್ದರು. ಇದಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ.

Yashodha Vantagodi: ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಆಯ್ಕೆ

ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

DG-IGP Commendation Disc: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಕರ್ತವ್ಯನಿಷ್ಠೆ, ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಒಟ್ಟು 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಅತ್ಯುನ್ನತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ.

Yoga Day 2026: ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಲಿ: ಹಾವೇರಿ ಡಿಸಿ ಡಾ. ವಿಜಯಮಹಾಂತೇಶ್ ದಾನಮ್ಮನವರ

ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಲಿ: ಹಾವೇರಿ ಡಿಸಿ

International yoga day 2026: ಹಾವೇರಿಯ ರಜನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ವಿವಿಧ ಇಲಾಖೆಗಳು, ಸಂಸ್ಥೆಗಳ ಸಹಯೋದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರು ಭಾಗವಹಿಸಿ ಮಾತನಾಡಿದ್ದಾರೆ.

ಸರ್ಕಾರಿ ವೈದ್ಯನ ನಿರ್ಲಕ್ಷ್ಯದಿಂದ ಸಾವು ಬದುಕಿನ ನಡುವೆ ಬಾಣಂತಿ ಹೋರಾಟ; ಹಾವೇರಿಯಲ್ಲಿ ದೂರು ದಾಖಲು

ಹೆರಿಗೆ ಬಳಿಕ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ; ವೈದ್ಯನ ವಿರುದ್ಧ ದೂರು

Haveri News: ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯ ಡಾ. ಪ್ರದೀಪ ಬಿ ಅವರ ವಿರುದ್ಧ ಹಾವೇರಿ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆರಿಗೆ ನಂತರ ಸೂಕ್ತ ಚಿಕಿತ್ಸೆ ನೀಡದ ಕಾರಣ ಮಹಿಳೆ ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ. ಈ ಬಗ್ಗೆ ಪತಿ ದೂರು ನೀಡಿದ್ದಾರೆ.

Haveri News: ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

Haveri News: ಹಾವೇರಿ ತಾಲೂಕಿನ ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟು ಹೋಗಿವೆ. ಕಳೆದ ಬಾರಿಯ ಮಳೆಯಿಂದಾಗಿ ರಸ್ತೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Haveri Rains: ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ, ಮನೆಗಳಿಗೆ ನೀರು ನುಗ್ಗಿ ಹಾನಿ

ಹಾವೇರಿಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ

Haveri News: ಹಾವೇರಿ ಜಿಲ್ಲೆಯ ಹಲವೆಡೆ ಶನಿವಾರ ಭಾರಿ ಮಳೆಯಾಗಿದೆ. ಅಗಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಡ್ಡಲಾಗಿ ಹರಿಯುವ ಹಳ್ಳವು ಭಾರೀ ಮಳೆಗೆ ತುಂಬಿ ಹರಿದ ಹಿನ್ನೆಲೆ ವಾಹನ ಸಂಚಾರಕ್ಕೆ ಸ್ಥಗಿತಗೊಂಡಿತ್ತು. ಇನ್ನು ಗ್ರಾಮದಲ್ಲಿ ಮನೆಗಳಿಗೆ‌ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ʼʼಸಚಿವ ಸ್ಥಾನ ಸಿಗುವ ಭರವಸೆ ನನಗಿದೆʼʼ: ರುದ್ರಪ್ಪ ಲಮಾಣಿ

ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದ ರುದ್ರಪ್ಪ ಲಮಾಣಿ

Rudrappa Lamani: ಈ ಹಿಂದೆಯೇ ನಾನು ಸಚಿವನಾಗಬೇಕಿತ್ತು.‌ ಕಾರಣಾಂತರಗಳಿಂದ ಸಚಿವ ಸ್ಥಾನ ಸಿಗದೇ ಹೋದರೂ ನನ್ನನ್ನು ವಿಧಾನಸಭೆಯ ಉಸಭಾಪತಿಯನ್ನಾಗಿ‌ ಮಾಡಿದರು. ಅದೃಷ್ಟದಿಂದ ನನಗೆ ಈಗ ಸಭಾಧ್ಯಕ್ಷ ಸ್ಥಾನ ದೊರೆತಿದೆ. ಹೈಕಮಾಂಡ್‌ ತೀರ್ಮಾನದಂತೆ ಸಚಿವ ಸ್ಥಾನ ಸಿಗುವ ಭರವಸೆ ನನಗಿದೆ ಎಂದು ನೂತನ ವಿಧಾನಸಭೆಯ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜ ವಿತರಣೆಗೆ ರೈತರ ಆಗ್ರಹ Video

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬೀಜ ವಿತರಣೆಗೆ ಆಗ್ರಹ

Haveri News: ಕೇಂದ್ರ ಸರ್ಕಾರ ನೀಡುವ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜವನ್ನು ರೈತರು ಉತ್ಪಾದನೆ ಮಾಡಿಕೊಳ್ಳಲಿ. ಇದರಿಂದ ಬೀಜದ ಕೊರತೆ ನೀಗಿಸಲು ಸಾಧ್ಯ ಎಂಬ ಮಹತ್ತರ ಯೋಜನೆ ಘೋಷಿಸಲಾಗಿದೆ. ಆದರೆ ಹಾವೇರಿ ಜಿಲ್ಲಾಡಳಿತ ಸರಿಯಾಗಿ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ರೈತರಿಗೆ ನಾಮಕಾವವಸ್ಥೆ ಬೀಜ ವಿತರಣೆ ಮಾಡಿ, ಬಳಿಕ ಬೀಜ ಖಾಲಿಯಾಗಿದೆ ಎಂದು ಹೇಳಿಕೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ರೈತರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

IPL 2026 Final: ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ; ಹರಿದುಬಂದ RCB ಅಭಿಮಾನಿಗಳು

ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ ವ್ಯವಸ್ಥೆ

RCB vs GT: ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್‌ ಮ್ಯಾಚ್‌ ವೀಕ್ಷಣೆಗೆ ಹಾವೇರಿ ಜಿಲ್ಲಾ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

Haveri News: ಅಕ್ರಮ ಸಂಬಂಧ ಶಂಕೆ; ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ

ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಂದ ತಮ್ಮ

Haveri Murder Case: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭೀಕರ ಹತ್ಯೆ ನಡೆದಿದೆ. ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಅಕ್ಕನನ್ನೇ ಸಹೋದರ ಕೊಲೆ ಮಾಡಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡಿಕೊಂಡಿದ್ದ ಮಹಿಳೆಯನ್ನು ಸಹೋದರ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

Haveri News: ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ, 310 ಗ್ರಾಂ ಚಿನ್ನ, 26 ಕೆ.ಜಿ ಬೆಳ್ಳಿ ವಶಕ್ಕೆ

ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ

ಹಾವೇರಿ ಹಾಗೂ ಧಾರವಾಡ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತರಾಜ್ಯ ಕಳ್ಳರಿಂದ ಸುಮಾರು 1.15 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 31 ತೊಲ (310 ಗ್ರಾಂ) ಚಿನ್ನ, 26 ಕೆ.ಜಿ ಬೆಳ್ಳಿ ಸೇರಿದೆ.

ಹಾವೇರಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ; ಲಾಕರ್‌ ಸಮೇತ ಕಳ್ಳರು ಎಸ್ಕೇಪ್‌!

ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ

Haveri Jewellery shop theft: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

Pravasi Prapancha: ರಾಣೇಬೆನ್ನೂರು ಪ್ರವಾಸೋದ್ಯಮ; ಸಫಾರಿಯಿಂದ ಪರಂಪರೆಯವರೆಗೆ ಪಯಣ

ರಾಣೇಬೆನ್ನೂರು: ಸಫಾರಿಯಿಂದ ಪರಂಪರೆಯವರೆಗೆ ಪಯಣ

Ranebennuru: ರಾಣೇಬೆನ್ನೂರು ವನ್ಯಜೀವಿ, ಪರಂಪರೆ, ಆಧ್ಯಾತ್ಮಿಕ, ಪರಿಸರ ಮತ್ತು ಸಾಹಸ ಪ್ರವಾಸೋದ್ಯಮದ ವಿಶಿಷ್ಟ ಸಮ್ಮಿಲನವನ್ನು ಹೊಂದಿದೆ. ಕೃಷ್ಣಮೃಗ ಅಭಯಾರಣ್ಯ, ಬೆಟ್ಟದ ಮಲ್ಲಪ್ಪನ ಗುಡ್ಡ, ಮುಕ್ತೇಶ್ವರ ದೇವಾಲಯ ಮತ್ತು ಐರಾಣಿ ಕೋಟೆಗಳು ಒಟ್ಟಾಗಿ ಅಭಿವೃದ್ಧಿಯ ಅಪಾರ ಸಾಮರ್ಥ್ಯವಿರುವ ಬಲಿಷ್ಠ ಪ್ರವಾಸೋದ್ಯಮ ವಲಯವನ್ನು ಸೃಷ್ಟಿಸುತ್ತವೆ.

ಬ್ಯಾಡಗಿ ಮೆಣಸಿನಕಾಯಿ ಖರೀದಿಯಲ್ಲಿ ವಂಚನೆ; ರೈತನಿಗೆ 50 ಲಕ್ಷ ರೂ. ಪಂಗನಾಮ ಹಾಕಿದ ವ್ಯಕ್ತಿ!

ಒಣ ಮೆಣಸಿನಕಾಯಿ ಖರೀದಿಸಿ ಹಣ ಕೊಡದೆ ರೈತನಿಗೆ 50 ಲಕ್ಷ ರೂ. ಪಂಗನಾಮ!

ಬ್ಯಾಡಗಿ ಒಣ ಮೆನಸಿನಕಾಯಿ ಮಾರುಕಟ್ಟೆಯ ತಿಪ್ಪೇಸ್ವಾಮಿ ಟೇಡರ್ಸನ ಮಾಲೀಕ ನಾಗಪ್ಪ ಹಡಗಲಿ ರೈತನಿಂದ 127 ಕ್ವಿಂಟಾಲ್ ಒಣ ಮೆಣನಸಿನಕಾಯಿ ಖರೀದಿಸಿ ಹಣ ಕೊಡದೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಣ ಕೇಳಿದ್ದಕ್ಕೆ ಆರೋಪಿ ರೈತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ ಬಳಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಪಲ್ಲಕ್ಕಿ ಬಸ್; 17 ಮಂದಿ ಪ್ರಾಣಾಪಾಯದಿಂದ ಪಾರು!

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ಬೆಂಗಳೂರಿ-ನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ.

ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಕುರ್ಚಿ ಇರುತ್ತದೋ ಇಲ್ಲವೋ ಗೊತ್ತಿಲ್ಲ: ಬೊಮ್ಮಾಯಿ Video

ಮೇ 4ರ ನಂತರ ಸಿದ್ದರಾಮಯ್ಯ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೂ ಸಿಎಂ ಆಗುವ ಆಸೆ ಇದೆ. ಹಲವರಿಗೂ ಆಸೆ ಇದೆ ಎಂದು ಹೇಳಿದ್ದಾರೆ. ಆದರೆ ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೌರಿಂಗ್ ಆಸ್ಪತ್ರೆ ದುರಂತ: ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ ಎಂದ ಬೊಮ್ಮಾಯಿ Video

ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ಮಳೆ ಬಂದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ ಆದರೂ ಯಾವುದೇ ತಯಾರಿ ಕೂಡ ಮಾಡಿಕೊಂಡಿಲ್ಲ. ಒಂದು ರೀತಿಯಲ್ಲಿ ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Loading...