ಹಾವೇರಿ ಜಿಲ್ಲೆಯಲ್ಲಿ ನಕಲಿ ವೈದ್ಯನ ಹಾವಳಿ; ಕ್ರಮಕ್ಕೆ ಆಗ್ರಹ
Haveri News: ವೈದ್ಯಕೀಯ ಶಿಕ್ಷಣ ಹಾಗೂ ಅರ್ಹತೆ ಇಲ್ಲದ ವ್ಯಕ್ತಿಯೊಬ್ಬ ಗ್ರಾಮೀಣ ಭಾಗದಲ್ಲಿ ಕ್ಲಿನಿಕ್ ನಡೆಸಿ, ಜನರಿಗೆ ಚಿಕಿತ್ಸೆ ನೀಡುತ್ತಿದ್ದಾನೆ ಎಂದು ಆರೋಪಿಸಿ, ಸುವರ್ಣ ಕರ್ನಾಟಕ ಕಿಸಾನ್ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಮಾಜ ಸೇವಕ ಶಿವಕುಮಾರ ತಳವಾರ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.