ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿ

ಹಾವೇರಿ ಜಿಲ್ಲೆಯಾದ್ಯಂತ ಶೇಕಡಾ 43ರಷ್ಟು ಮಳೆ ಕೊರತೆ; 2,058 ಕೆರೆಗಳಲ್ಲಿ 14 ಮಾತ್ರ ಭರ್ತಿ: ಕಂಗಾಲಾದ ರೈತರು

ಹಾವೇರಿ ಜಿಲ್ಲೆಯಾದ್ಯಂತ ಶೇಕಡಾ 43ರಷ್ಟು ಮಳೆ ಕೊರತೆ

Haveri News: ಹಾವೇರಿ ಜಿಲ್ಲೆಯಾದ್ಯಂತ ವಾಡಿಕೆಗಿಂತ ಶೇ. 43.15ರಷ್ಟು ಮಳೆ ಕೊರತೆ ದಾಖಲಾಗಿರುವುದು ಬರದ ಛಾಯೆ ಮತ್ತಷ್ಟು ಗಾಢವಾಗುವ ಮುನ್ಸೂಚನೆ ನೀಡಿದೆ. ಜಿಲ್ಲೆಯ 2,058 ಕೆರೆಗಳ ಪೈಕಿ ಕೇವಲ 14 ಕೆರೆಗಳು ಮಾತ್ರ ಸಂಪೂರ್ಣ ಭರ್ತಿಯಾಗಿದ್ದು, ಬಹುತೇಕ ಕೆರೆಗಳು ನೀರಿನ ಕೊರತೆಯಿಂದ ಬಳಲುತ್ತಿವೆ.

Haveri News: ಅಪಾಯಕಾರಿ ತಗ್ಗು-ಗುಂಡಿಯಿಂದ ಕೂಡಿರುವ ದೇವಗಿರಿ ರಸ್ತೆಯಿಂದ ಸ್ಥಳೀಯರಿಗೆ ಕಿರಿಕಿರಿ; ವಾಹನ ಸವಾರರೇ ಎಚ್ಚರ

ಅಪಾಯ ಆಹ್ವಾನಿಸುವ ಹಾವೇರಿ ಜಿಲ್ಲೆಯ ದೇವಗಿರಿ ರಸ್ತೆ

Haveri News: ಹಾವೇರಿಯಿಂದ ಸವಣೂರು ಕಡೆ ಸಾಗುವ ಪ್ರಮುಖ ರಸ್ತೆಯಲ್ಲಿ ದೇವಗಿರಿ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು, ಕೆಸರು ಹಾಗೂ ನೀರು ನಿಂತಿರುವ ದೃಶ್ಯ ಕಂಡುಬರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಾವೇರಿಯ ಮೆಡಿಕಲ್ ವಿದ್ಯಾರ್ಥಿನಿಯ ಬಾಳಿಗೆ ಬೆಳಕಾದ ಶ್ರೀ ಗುರು ರಾಘವೇಂದ್ರ ಸ್ವಾಮಿ; ಚೇತರಿಸಿಕೊಂಡ ಕೋಮಾದಲ್ಲಿದ್ದ ವಿದ್ಯಾರ್ಥಿನಿ

ಹಾವೇರಿಯ ಮೆಡಿಕಲ್ ವಿದ್ಯಾರ್ಥಿನಿಯ ಬಾಳಿಗೆ ಬೆಳಕಾದ ರಾಯರು

Haveri News: ಏಳು ತಿಂಗಳನಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಹಾವೇರಿಯ ಮೆಡಿಕಲ್ ವಿದ್ಯಾರ್ಥಿನಿಗೆ ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಕೃಪಾಶೀರ್ವಾದ ದೊರೆತಿದೆ. ಹೌದು, ಪಿಟ್ಸ್‌ ಬಂದು ನಡೆಯಲು ಬಾರದೆ‌ ಕೋಮಾದಲ್ಲಿದ್ದ ಮೆಡಿಕಲ್ ವಿದ್ಯಾರ್ಥಿನಿಯ ಬಾಳಲ್ಲಿ ಬೆಳಕು ಮೂಡಿದೆ.

D.S. Malagi: ಆದಿ ಜಾಂಬವ ಸಮಾಜದ ಹಿರಿಯ ಮುಖಂಡ ಡಿ.ಎಸ್. ಮಾಳಗಿ ನಿಧನ

ಆದಿ ಜಾಂಬವ ಸಮಾಜದ ಹಿರಿಯ ಮುಖಂಡ ಡಿ.ಎಸ್. ಮಾಳಗಿ ನಿಧನ

ಸವಣೂರು ತಾಲ್ಲೂಕಿನ ತೇವರಮೆಳ್ಳಿಹಳ್ಳಿ ಗ್ರಾಮದವರಾದ ಡಿ.ಎಸ್. ಮಾಳಗಿ ಅವರು ಆದಿ ಜಾಂಬವ ಹಾಗೂ ಶೋಷಿತ ಸಮುದಾಯದ ಹಕ್ಕುಗಳಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರು. ರಾಜ್ಯ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಗತಿಗೆ ಒತ್ತು ನೀಡಿದ್ದರು

ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ

Bus Accident: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. 18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ.

ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

Haveri News: ಹಾವೇರಿ ಜಿಲ್ಲೆಯ ಆರು ಮಂದಿ ಶಾಸಕರು ಒಂದೇ ಕುಟುಂಬದ ಸದಸ್ಯರಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯದ ನೂತನ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.

Karnataka Cabinet expansion: ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

Rudrappa Lamani: ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ.

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ

Haveri News: ಹಾವೇರಿ ಜಿಲ್ಲೆಯ ರೈತರಿಗೆ ಶನಿವಾರ ಸುರಿದ ಧಾರಾಕಾರ ಮಳೆ ಹೊಸ ಆಶಾಕಿರಣ ಮೂಡಿಸಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ವೇಳೆಗೆ ಸುರಿದ ಉತ್ತಮ ಮಳೆಯಿಂದ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳು ತಂಪಾದ ವಾತಾವರಣಕ್ಕೆ ಸಾಕ್ಷಿಯಾದವು.

ಕಳ್ಳತನವಾಗಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಎಸ್ಪಿ ಯಶೋಧಾ ವಂಟಗೋಡಿ

ಹಾವೇರಿಯಲ್ಲಿ ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ಹಸ್ತಾಂತರ

Haveri News: ಹಾವೇರಿ ಜಿಲ್ಲೆಯಲ್ಲಿ ದಾಖಲಾದ ವಿವಿಧ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನಗದು ಹಣ, ಮೊಬೈಲ್ ಫೋನ್‌ಗಳು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವುಗಳ ನಿಜವಾದ ವಾರಸುದಾರರಿಗೆ ಗುರುವಾರ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ಪರೇಡ್ ಮೂಲಕ ಹಸ್ತಾಂತರಿಸಲಾಯಿತು.

Haveri Roads: ಸಿಸಿ ಕ್ಯಾಮೆರಾಕ್ಕಿಂತ ಮೊದಲು ರಸ್ತೆ ಗುಂಡಿಗಳನ್ನು ಮುಚ್ಚಿ: ಹಾವೇರಿ ಸಾರ್ವಜನಿಕರ ಆಕ್ರೋಶ

ಸಿಸಿ ಕ್ಯಾಮೆರಾಕ್ಕಿಂತ ಮೊದಲು ರಸ್ತೆ ಗುಂಡಿಗಳನ್ನು ಮುಚ್ಚಿ

Haveri News: ಹಾವೇರಿ ನಗರದಲ್ಲಿ ರಸ್ತೆಗಳ ದುಸ್ಥಿತಿಗೆ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ತೀರಾ ಹದಗೆಟ್ಟ ರಸ್ತೆಗಳಿಂದಾಗಿ ಸಂಚಾರ ದುಸ್ತರವಾಗಿದ್ದು, ಅಪಘಾತಗಳ ಭೀತಿ ಹೆಚ್ಚಾಗಿದೆ. ಹಾಳಾದ ರಸ್ತೆಗಳನ್ನು ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕೇಂದ್ರದ ಜನರು ಆಗ್ರಹಿಸಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಗುರುಪೂರ್ಣಿಮೆ ಆಚರಣೆ; ಮಠಗಳಲ್ಲಿ ವಿಶೇಷ ಪೂಜೆ, ಗುರು ವಂದನೆ

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

Haveri News: ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ಮಠಗಳಲ್ಲಿ ವಿಶೇಷ ಪೂಜೆ, ಪಾದಪೂಜೆ, ಗುರು ವಂದನೆ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡಿ: ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಮನವಿ

ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ

Haveri News: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಅವರು, ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಮಾಜಿ ಶಾಸಕ ಶೇಖ್ ಮುಸ್ತಾನವಲಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಹಾವೇರಿಯಲ್ಲಿ ಸಾಲ ವಸೂಲಿ ಹೆಸರಲ್ಲಿ ಬಡಜನರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಾಲಗಾರರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

Haveri News: ಖಾಸಗಿ ಫೈನಾನ್ಸ್‌ ಸಂಸ್ಥೆಗಳ ಸಾಲ ವಸೂಲಾತಿ ವಿಧಾನಗಳ ಕುರಿತು ಹಾವೇರಿ ಜಿಲ್ಲಾಡಳಿತ ಸಮಗ್ರ ಪರಿಶೀಲನೆ ನಡೆಸಬೇಕು. ಜಿಲ್ಲೆಯಲ್ಲಿರುವ ಹಣಕಾಸು ಸಂಸ್ಥೆಗಳು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Haveri Hostels: ಹಾವೇರಿ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ; ಸಿಬ್ಬಂದಿಗೆ ಅಡುಗೆಗಿಂತ ಅಧಿಕಾರಿಗಳ ಮನೆ ಕೆಲಸವೇ ಹೆಚ್ಚು!

ಹಾವೇರಿ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ; ಅಧಿಕಾರಿಗಳ ನಿರ್ಲಕ್ಷ್ಯ

ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕರಿಗೆ ನಿಗದಿತ ಕರ್ತವ್ಯದ ಅವಧಿಗಿಂತ ಹೆಚ್ಚಿನ ಸಮಯ ಕೆಲಸ ಮಾಡಿಸಲಾಗುತ್ತಿದೆ ಎಂಬ ಆರೋಪವಿದೆ. ಈ ಆರೋಪಗಳ ಕುರಿತು ಸಂಬಂಧಿಸಿದ ಇಲಾಖೆಗಳು ಪಾರದರ್ಶಕ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ; ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ನೀಡಲು ರೈತ ಸಂಘ ಆಗ್ರಹ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಬೆಳೆ ವೈಫಲ್ಯ ಮತ್ತು ಸಾಲ ಬಾಧೆಯಿಂದ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಜರುಗಿದೆ. ಮೃತ ಕುಟುಂಬಕ್ಕೆ ₹50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

Haveri Rain Deficit: ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಹಾವೇರಿ ಜಿಲ್ಲೆಯ ರೈತರು

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಹಾವೇರಿ ಜಿಲ್ಲೆಯ ರೈತರು

Haveri News: ಕಳೆದ ಐದು ದಿನಗಳಿಂದ ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾದ್ಯಂತ ತೀವ್ರ ಬಿಸಿಲು ಆವರಿಸಿದ್ದು, ಬಂಪರ್ ಬೆಳೆ ಕನಸು ಕಂಡಿದ್ದ ಸಾವಿರಾರು ರೈತರಲ್ಲಿ ಆತಂಕ ಮನೆಮಾಡಿದೆ. ಕೆಲವೇ ದಿನಗಳ ಹಿಂದೆ ಧಾರಾಕಾರ ಮಳೆಯಿಂದ ಹಸಿರು ಹೊದಿಕೆ ಹೊದ್ದಿದ್ದ ಜಿಲ್ಲೆಯ ಕೃಷಿ ಭೂಮಿ ಈಗ ಮತ್ತೆ ಬಿರು ಬಿಸಿಲಿನ ಹೊಡೆತಕ್ಕೆ ತತ್ತರಿಸಿದೆ.

S Janaki: ಸರ್ಕಾರ ಎಸ್. ಜಾನಕಿ ನೆನಪಿಗಾಗಿ ಸ್ಮಾರಕ ನಿರ್ಮಾಣ ಮಾಡಲಿ: ಬಸವರಾಜ ಬೊಮ್ಮಾಯಿ

ಸರ್ಕಾರ ಎಸ್. ಜಾನಕಿ ಅವರ ಸ್ಮಾರಕ ನಿರ್ಮಾಣ ಮಾಡಲಿ: ಬೊಮ್ಮಾಯಿ

ಎಸ್. ಜಾನಕಿ ಅವರಿಗೆ ಮೈಸೂರಿನ ಬಗ್ಗೆ ಅಪಾರವಾದ ಒಲವಿತ್ತು. ತಮ್ಮ ಕೊನೆಯ ದಿನಗಳನ್ನು ಮೈಸೂರಿನಲ್ಲೇ ಕಳೆಯಬೇಕೆಂಬ ಇಚ್ಛೆ ಹೊಂದಿದ್ದರು. ಕರ್ನಾಟಕದ ಜನತೆಯ ಹೃದಯದಲ್ಲಿ ಅವರು ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ರಾಜ್ಯ ಸರ್ಕಾರ ಮೈಸೂರಿನಲ್ಲಿ ಎಸ್.‌ ಜಾನಕಿ ಅವರ ನೆನಪಿಗಾಗಿ ಒಂದು ಸುಸಜ್ಜಿತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ; ಡಿಕೆಶಿ ಹುಡುಕುತ್ತಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಲೇವಡಿ

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ: ಪ್ರಲ್ಹಾದ್‌ ಜೋಶಿ

Pralhad Joshi: ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ 40 ದಿನ ಕಳೆದರೂ ಪೂರ್ಣ ಸಚಿವ ಸಂಪುಟ ರಚನೆ ಮಾಡಲಾಗಿಲ್ಲ. ರಾಹುಲ್‌ ಗಾಂಧಿಗಾಗಿ ಕಾಯುತ್ತಿದ್ದಾರೆ. ಆದರೆ, ಅವರು ನೋಡಿದರೆ ಕಾಣೆಯಾಗಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ.

ಆಡಳಿತದ ನಿರ್ಲಕ್ಷ್ಯಕ್ಕೆ ಕುಸಿದ ಕುಮದ್ವತಿ ನದಿ ದಂಡೆ

ಆಡಳಿತದ ನಿರ್ಲಕ್ಷ್ಯಕ್ಕೆ ಕುಸಿದ ಕುಮದ್ವತಿ ನದಿ ದಂಡೆ

ಇತಿಹಾಸವನ್ನು ಅಳಿಸಿ ಹಾಕುವುದು ಸುಲಭ. ಆದರೆ ಅದನ್ನು ಮತ್ತೆ ಕಟ್ಟುವುದು ಅಸಾಧ್ಯ. ರಟ್ಟಿಹಳ್ಳಿ ಯ ಹೃದಯ ಭಾಗದಲ್ಲಿ ಹರಿಯುವ ಕುಮದ್ವತಿ ನದಿ ಇದಕ್ಕೆ ಜೀವಂತ ಸಾಕ್ಷಿ. ಶತಮಾನಗಳ ಇತಿಹಾಸ ಹೊತ್ತ ಕದಂಬೇಶ್ವರ ದೇವಾಲಯದ ಪಕ್ಕದಲ್ಲಿರುವ ಕಲ್ಲಿನ ಮೆಟ್ಟಿಲುಗಳು ಕುಸಿದು ಬೀಳುತ್ತಿದ್ದು, ಈ ಪ್ರದೇಶದ ಪರಂಪರೆ ನಿಧಾನವಾಗಿ ಕಣ್ಮರೆಯಾಗುತ್ತಿದೆ.

ಕುಸಿಯುತ್ತಿವೆ ರಟ್ಟಿಹಳ್ಳಿಯ ಕುಮದ್ವತಿ ನದಿ ದಡದಲ್ಲಿನ ಐತಿಹಾಸಿಕ ಕಲ್ಲಿನ ಮೆಟ್ಟಿಲುಗಳು

ಕುಸಿಯುತ್ತಿವೆ ರಟ್ಟಿಹಳ್ಳಿಯ ಕುಮದ್ವತಿ ನದಿ ದಡದಲ್ಲಿನ ಕಲ್ಲಿನ ಮೆಟ್ಟಿಲುಗಳು

Kumudvathi River: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಜೀವನಾಡಿಯಾಗಿರುವ ಕುಮದ್ವತಿ ನದಿ (ಪಾಟಾಣಿಗಿ ಹೊಳೆ) ದಡದಲ್ಲಿನ ಐತಿಹಾಸಿಕ ಕಲ್ಲಿನ ಮೆಟ್ಟಿಲುಗಳು ಕುಸಿದು ಬೀಳುತ್ತಿವೆ. ನಿರ್ವಹಣೆಯ ಕೊರತೆ, ಕಾಲದ ಹೊಡೆತ ಮತ್ತು ನಿರ್ಲಕ್ಷ್ಯದಿಂದ ಮೆಟ್ಟಿಲುಗಳು ಸಂಪೂರ್ಣ ಶಿಥಿಲಗೊಂಡಿವೆ. ಈ ಕುರಿತ ಲೇಖನ ಇಲ್ಲಿದೆ.

Haveri Rain: ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ಬರದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಸಂತಸ

ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ರೈತರಲ್ಲಿ ಸಂತಸ

Haveri News: ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಸವಣೂರು, ಶಿಗ್ಗಾಂವಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅನ್ನದಾತರಲ್ಲಿ ಸಂತಸ ಮೂಡಿಸಿದೆ.

Haveri News: ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ

Haveri News: ಹಾವೇರಿ ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನೀತಾ ಗರಡಿ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

​ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬೃಹತ್‌ ಪ್ರತಿಭಟನೆ: ಬೊಮ್ಮಾಯಿ

ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬಿಜೆಪಿ ಪ್ರತಿಭಟನೆ

Basavaraj Bommai: ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ, ಕೋಮು ಸೌಹಾರ್ದತೆ ಕೆಡಿಸುವ ಸಂಚು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ ಬರುವ ಜುಲೈ 16ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಧಿಕಾರಿಗಳು ಜನರ ಪರ ಕಾರ್ಯ ನಿರ್ವಹಿಸಿದರೆ ನಾಡು ಸುಭಿಕ್ಷ: ಬೊಮ್ಮಾಯಿ

ಅಧಿಕಾರಿಗಳು ಜನರ ಪರ ಕಾರ್ಯ ನಿರ್ವಹಿಸಿದರೆ ನಾಡು ಸುಭಿಕ್ಷ: ಬೊಮ್ಮಾಯಿ

ಹಾವೇರಿ ತಾಲೂಕಿನ ಯತ್ತಿನಹಳ್ಳಿ ಬಳಿ ಇರುವ ಸಾಯಿ ಪರಮೇಶ್ವರ ಗ್ರ್ಯಾಂಡ್ ಕನ್ವೆನ್ಷನ್ ಹಾಲ್‌ನಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಹಾವೇರಿ, ಗದಗ, ಧಾರವಾಡ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ.

Loading...