ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹಾವೇರಿ

Basavaraj Bommai: ರಾಜ್ಯ ಸರ್ಕಾರದ ಅಧಿಕಾರ ದಾಹದಲ್ಲಿ ಜನತೆ ಅನಾಥ: ಬಸವರಾಜ ಬೊಮ್ಮಾಯಿ ಟೀಕೆ

ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆ: ಬೊಮ್ಮಾಯಿ

ರಾಜ್ಯದಲ್ಲಿ ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆಯಾಗಿದೆ. ಕುರ್ಚಿಯಲ್ಲಿ ಕೂಡಿಸಿದ ಯಜಮಾನರು ಜನರ ಬಗ್ಗೆ ಯೋಚನೆಯನ್ನೇ ಮಾಡುತ್ತಿಲ್ಲ. ಅಧಿಕಾರದ ದಾಹದಲ್ಲಿ ರಾಜ್ಯದ ಜನರನ್ನು ಅನಾಥ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿದ್ದಾರೆ.

Basavaraj Bommai: ರಾಜ್ಯ ಸರ್ಕಾರ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ

ಇದು ರಾಜ್ಯ ಸರ್ಕಾರ ಅಲ್ಲ, ಪೋಸ್ಟ್ ಆಫೀಸ್: ಬೊಮ್ಮಾಯಿ

State Congress Government: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೆಕ್ಕೆಜೋಳ ಖರೀದಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮ್ಯಾನ್‌ ಕೆಲಸ ಮಾಡುತ್ತಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.

Haveri News: ಡಿಸೆಂಬರ್‌ 5ರಂದು  ಹಾವೇರಿ ಜಿಲ್ಲಾ ವಕೀಲರ ಸಂಘದ ಚುನಾವಣೆ; ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು

ಡಿಸೆಂಬರ್‌ 5ರಂದು ಹಾವೇರಿ ಜಿಲ್ಲಾ ವಕೀಲರ ಸಂಘ ಚುನಾವಣೆ

Haveri District Bar Association election: ಹಾವೇರಿ ಜಿಲ್ಲಾ ವಕೀಲರ ಸಂಘದ 2025- 2027ನೇ ಸಾಲಿನ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ನ. 19 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಇದೀಗ ಅಂತಿಮವಾಗಿ ಕಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ- 3 ಉಪಾಧ್ಯಕ್ಷ ಸ್ಥಾನಕ್ಕೆ- 3, ಕಾರ್ಯದರ್ಶಿ ಸ್ಥಾನಕ್ಕೆ- 4, ಸಹ ಕಾರ್ಯದರ್ಶಿಗೆ - 3 ಖಜಾಂಚಿ- 3, ಆಡಳಿತ ಮಂಡಳಿ ಸ್ಥಾನಕ್ಕೆ 9 ಅಭ್ಯರ್ಥಿಗಳು ಸೇರಿ ಒಟ್ಟು 25 ಸ್ಪರ್ಧಿಗಳಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂಜಾನೆ ವೇಳೆ ದಟ್ಟ ಮಂಜು, ಮೈಕೊರೆವ ಚಳಿ ಕಂಡುಬರುತ್ತಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣ ಇಳಿಕೆಯಾಗಿದೆ. ಕಳೆದ ಎರಡು ವಾರದಿಂದ ಕಡಿಮೆಯಾಗಿದ್ದ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ನ.21 ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.

MLA Rudrappa Lamani: ರಾಜಕೀಯ ವಿರೋಧಿಗಳಿಂದ ಅಪಪ್ರಚಾರ; ಕ್ಷೇತ್ರದ ಜನರಲ್ಲಿ ಯಾವುದೇ ವಿರೋಧವಿಲ್ಲ ಎಂದ ಶಾಸಕ ರುದ್ರಪ್ಪ ಲಮಾಣಿ

ನನ್ನ ವಿರುದ್ಧ ರಾಜಕೀಯ ವಿರೋಧಿಗಳಿಂದ ಅಪಪ್ರಚಾರ: ರುದ್ರಪ್ಪ ಲಮಾಣಿ

Haveri News: ನನ್ನ ಅಭಿವೃದ್ಧಿ ಕೆಲಸಗಳಿಂದ ವಿಚಲಿತರಾದ ರಾಜಕೀಯ ವಿರೋಧಿಗಳು ಹಾಗೂ ವಿಪಕ್ಷ ಈ ರೀತಿಯ ಅಪಪ್ರಚಾರಗಳಿಂದ ನಾನು ವಿಚಲಿತನಾಗುವುದಿಲ್ಲ. ಸದಾ ನಾನು ಕ್ಷೇತ್ರದ ಜನರೊಂದಿಗೆ ಇದ್ದುಕೊಂಡು ಅವರ ನೋವು- ನಲಿವು, ಕಷ್ಟದಲ್ಲಿ ಭಾಗಿಯಾಗಿ ನಿರಂತರ ಕೆಲಸ ಕಾರ್ಯಗಳನ್ನು ಮುಂದುವರಿಸಿದ್ದೇನೆ. ಕಿಡಿಗೇಡಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಕ್ಷೇತ್ರದ ಜನರಿಗೆ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಮನವಿ ಮಾಡಿದ್ದಾರೆ.

Haveri News: ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಘೋರ ಘಟನೆ; ಶೌಚಾಲಯಕ್ಕೆ ನಡೆದು ಹೋಗುವಾಗಲೇ ಹೆರಿಗೆ; ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ

ಶೌಚಾಲಯಕ್ಕೆ ನಡೆದು ಹೋಗುವಾಗಲೇ ಹೆರಿಗೆ; ನೆಲಕ್ಕೆ ಬಿದ್ದು ಮಗು ಸಾವು

Child Dies in Haveri District Hospital: ಆಸ್ಪತ್ರೆಗೆ ಹೋದಾಗ ಸಿಬ್ಬಂದಿ ಸರಿಯಾಗಿ ಆರೈಕೆ ಮಾಡದೆ ಬೇಜವಬ್ದಾರಿ ತೋರಿದ್ದಾರೆ. ಕೊನೆಗೆ ಬೆಡ್‌ ಕೂಡ ನೀಡದ ಹಿನ್ನೆಲೆಯಲ್ಲಿ ಗರ್ಭಿಣಿ ನೆಲದ ಮೇಲೆಯೇ ಕೂತಿದ್ದಾರೆ. ಶೌಚಾಲಯಕ್ಕೆ ಕರೆದುಕೊಂಡು ಹೋಗುವಾಗ ಹೆರಿಗೆಯಾಗಿ ಆಗ ತಾನೇ ಜನಿಸಿದ ಹಸಗೂಸು ಮೃತಪಟ್ಟಿದೆ.

Haveri News: ನ.18ಕ್ಕೆ ಹಾವೇರಿಯಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾವೇಶ

ನ.18ಕ್ಕೆ ಹಾವೇರಿಯಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾವೇಶ

All India Cooperative Week in Haveri: ಸಪ್ತಾಹದ ಏಳು ದಿನಗಳಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲ ವರ್ಗದ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರಿ ಸಂಘಗಳು ಸಪ್ತಾಹ ಆಚರಣೆಯನ್ನು ಅರ್ಥಪೂರ್ಣವಾಗಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಬೆಳಗಾವಿ ಡಿವಿಜನ್ ಸಹಕಾರ ಇಲಾಖೆಯ ಜಂಟಿ ನಿಬಂಧಕ ಕಲ್ಲಪ್ಪ ಓಬಣ್ಣಗೋಳ ಮಾಹಿತಿ ನೀಡಿದ್ದಾರೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು (Karnataka Weather Forecast) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Basavaraj Bommai: ಕರ್ನಾಟಕಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ: ಬೊಮ್ಮಾಯಿ

ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬೊಮ್ಮಾಯಿ

State Congress Government: ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ, ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

CM Siddaramaiah: ಕಾಗಿನೆಲೆ ಅಭಿವೃದ್ಧಿಗೆ 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದ ಸಿಎಂ ಸಿದ್ದರಾಮಯ್ಯ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ: ಸಿಎಂ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ ವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Karnataka Weather: ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ರಾಜ್ಯದ ಎಲ್ಲೆಲ್ಲಿ ನಾಳೆ ಮಳೆಯಾಗಲಿದೆ ಎಂಬ ಕುರಿತ ಹವಾಮಾನ ವರದಿ ಇಲ್ಲಿದೆ.

Physical Abuse: ಇನ್‌ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ; ನಾಲ್ವರು ಅಂದರ್

ಇನ್‌ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ

Haveri News: ಬಾಲಕಿಯನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಹಾಗೂ ಅವರಿಗೆ ಸಹಾಯ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ನೀಡಿದ ಮೇರೆಗೆ ಹಾನಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Haveri News: ದೀಪಾವಳಿ ಹಬ್ಬದ ನಡುವೆ ದುರಂತ, ಕೊಬ್ಬರಿ ಹೋರಿ ತಿವಿತಕ್ಕೆ ಮೂವರು ಬಲಿ

ದೀಪಾವಳಿ ಹಬ್ಬದ ನಡುವೆ ದುರಂತ, ಕೊಬ್ಬರಿ ಹೋರಿ ತಿವಿತಕ್ಕೆ ಮೂವರು ಬಲಿ

Deepavali Festival: ದೀಪಾವಳಿ ಹಬ್ಬದ ಸಂದರ್ಭ ಕೆಲವರ ಪಾಲಿಗೆ ಸೂತಕವಾಗಿದೆ. ಹೋರಿ ಹಬ್ಬದ ವೇಳೆ ಹೋರಿ ತವಿತದಿಂದ ಮೂವರು ಮೃತಪಟ್ಟಿದ್ದಾರೆ. ಹೋರಿ‌ ಓಟದ ವೇಳೆ ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಕುರಿತು ಪ್ರಕರಣಗಳು ಹಾವೇರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Haveri News: ಹಾವೇರಿಯ ರಾಘವೇಂದ್ರ ಮಠದಲ್ಲಿ 10.67 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು

ಹಾವೇರಿಯ ರಾಘವೇಂದ್ರ ಮಠದಲ್ಲಿ 10.67 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Theft Case: ಕಳ್ಳರು ಮಠದ ಬಾಗಿಲು ಬೀಗ ಮುರಿದು ಒಳಗೆ ನುಗ್ಗಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳತನಕ್ಕೆ ಸಂಬಂಧಿಸಿ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗಾಗಿ ಪೊಲೀಸ್ ಇಲಾಖೆ ಕಾರ್ಯನ್ಮೋಖವಾಗಿದೆ.

Self Harming: ಕುಟುಂಬ ಕಲಹ; ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

ಕುಟುಂಬ ಕಲಹ; ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

Haveri News: ಹಾವೇರಿ ತಾಲೂಕಿನ ವರದಾಹಳ್ಳಿಯಲ್ಲಿ ಭಾನುವಾರ ಘಟನೆ ನಡೆದಿದೆ. ಗಂಡನ ಮನೆಯಲ್ಲಿ ದಿನನಿತ್ಯ ಆಗುತ್ತಿದ್ದ ಭಿನ್ನಾಭಿಪ್ರಾಯ, ಕಲಹದಿಂದ ನೊಂದ ಮಹಿಳೆಯೊಬ್ಬರು, ಮಗಳ ಜತೆ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bribery Case: ಆರ್‌ಟಿಸಿ ದುರಸ್ತಿಗೆ 12 ಸಾವಿರ ಲಂಚ ಸ್ವೀಕಾರ; ಶಿರಸ್ತೇದಾರ ಸೇರಿ ಮೂವರ ಬಂಧನ

ಆರ್‌ಟಿಸಿ ದುರಸ್ತಿಗೆ 12 ಸಾವಿರ ಲಂಚ ಸ್ವೀಕಾರ; ಮೂವರ ಬಂಧನ

Hangal News: ಆರ್‌ಟಿಸಿ ದುರಸ್ತಿಗೆ 12 ಸಾವಿರ ಲಂಚ ಸ್ವೀಕಾರ ಪಡೆಯುತ್ತಿದ್ದ ಹಾನಗಲ್ ತಹಸೀಲ್ದಾರ್‌ ಕಚೇರಿಯ ಶಿರಸ್ತೇದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗುಳಪ್ಪ ಮನಗುಳಿ, ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನು ಲೋಕಾಯುಕ್ತ ಪೊಲೀಸ್ ದಸ್ತಗಿರಿ ಮಾಡಿದ್ದಾರೆ.

Google AI Hub: ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಗೂಗಲ್ ಹೂಡಿಕೆ ಕೈತಪ್ಪಿದೆ: ಬೊಮ್ಮಾಯಿ

ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಗೂಗಲ್ ಹೂಡಿಕೆ ಕೈತಪ್ಪಿದೆ

Basavaraj Bommai: ಪ್ರತಿಷ್ಠಿತ ಸಂಸ್ಥೆ ಅಮೆರಿಕದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು, ಅದು ಬಾರದಿರುವುದು ದುರ್ದೈವದ ಸಂಗತಿ. ಕಾರಣ ರಾಜ್ಯ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

B Sriramulu: ಸಿದ್ದರಾಮಯ್ಯ ಸಿಎಂ ಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ; ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯ

ಸಿದ್ದರಾಮಯ್ಯಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ: ಶ್ರೀರಾಮುಲು

ʼʼಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆಯೋ ಅಥವಾ ಜನವರಿಯಲ್ಲಿ ಸಂಕ್ರಾಂತಿ ಬರುತ್ತದೆಯೋ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಖಾಲಿಯಾಗುತ್ತದೆ. ಅದು ಗ್ಯಾರಂಟಿ'ʼ-ಇದು ಶ್ರೀರಾಮುಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪರಿ.

Leopard Attack: ಹಾವೇರಿಯಲ್ಲಿ ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ- ಓರ್ವ ಸಾವು!

ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು!

Haveri News: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ಜರುಗಿದೆ.

ST tag for Kurubas: ಕುರುಬರಿಗೆ ಎಸ್‌ಟಿ ಮೀಸಲಾತಿ; ನಾವು ಸಂವಿಧಾನಬದ್ಧ ಹಕ್ಕು ಪಡೆಯುತ್ತಿದ್ದೇವೆ ಎಂದ ನಿರಂಜನಾನಂದಪುರಿ ಶ್ರೀ

ನಾವು ಸಂವಿಧಾನಬದ್ಧ ಹಕ್ಕು ಪಡೆಯುತ್ತಿದ್ದೇವೆ: ನಿರಂಜನಾನಂದಪುರಿ ಶ್ರೀ

Niranjanaanandapuri Swamiji: ಕುರುಬರಿಗೆ ಎಸ್‌ಟಿ ಮೀಸಲಾತಿ ನೀಡುವುದಕ್ಕೆ ನಾಯಕ (ವಾಲ್ಮೀಕಿ) ಸಮುದಾಯವು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ಕುರುಬ ಸಮುದಾಯದವರು ಯಾವುದೇ ಜಾತಿಯ ಹಕ್ಕು ಕಿತ್ತುಕೊಳ್ಳದೇ ಸಂವಿಧಾನಿಕ ಹಕ್ಕನ್ನು ಪಡೆದುಕೊಳ್ಳುತ್ತಿದೆ. ಊಹಾಪೋಹಗಳ ಹೇಳಿಕೆ ಕೊಡುವುದು ಸಮಂಜಸವಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

MLA Yasir Ahmed Khan Pathan: ಜಮೀನು ಅತಿಕ್ರಮಣ ಆರೋಪ; ಶಿಗ್ಗಾವಿ ಶಾಸಕ ಪಠಾಣ್‌ ವಿರುದ್ಧ ಎಫ್‌ಐಆ‌ರ್

ಜಮೀನು ಅತಿಕ್ರಮಣ ಆರೋಪ; ಶಿಗ್ಗಾವಿ ಶಾಸಕ ಪಠಾಣ್‌ ವಿರುದ್ಧ ಎಫ್‌ಐಆ‌ರ್

Haveri News: ಶಾಸಕ ಯಾಸೀರ್‌ ಅಹ್ಮದ್ ಖಾನ್ ಪಠಾಣ್, ಮುಖಬುಲ್ ಅಹ್ಮದ್‌ಖಾನ್ ಪಠಾಣ್‌ ಅವರು ವ್ಯಕ್ತಿಯೊಬ್ಬರ ಜಮೀನಿನಲ್ಲಿ ಅತಿಕ್ರಮ ಪ್ರವೇಶ ಮಾಡಿ, ಮಾವಿನ ಗಿಡಗಳನ್ನು ನಾಶಪಡಿಸಿ ಕಳ್ಳತನ ಮಾಡಿಸಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ. ಹೀಗಾಗಿ ಎಫ್‌ಐಆರ್‌ ದಾಖಲಾಗಿದೆ.

Bomb threat: ಹಾನಗಲ್ ಕುಮಾರೇಶ್ವರ ಮಠಕ್ಕೆ ಬಾಂಬ್‌ ಬೆದರಿಕೆ; ಬಾಂಬ್‌ ನಿಷ್ಕ್ರಿಯ ದಳ, ಡಾಗ್‌ ಸ್ಕ್ವಾಡ್‌ನಿಂದ ತಪಾಸಣೆ

ಹಾನಗಲ್ ಕುಮಾರೇಶ್ವರ ಮಠಕ್ಕೆ ಬಾಂಬ್‌ ಬೆದರಿಕೆ ಕರೆ

Hangal News: ಹಾನಗಲ್‌ ಪಟ್ಟಣದ ಕುಮಾರೇಶ್ವರ ಮಠ ಸೇರಿ ಕಾರು, ಬಸ್, ಶಾಲೆಗಳು ಸೇರಿ ವಿವಿಧೆಡೆ ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಸ್‌ಪಿ ಯಶೋಧಾ ವಂಟಗೋಡಿ ಪ್ರತಿಕ್ರಿಯೆ ನೀಡಿದ್ದು, ಹಾನಗಲ್‌ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಕರೆ ಮಾಡಿರುವ ನಂಬರ್ ಟ್ರೇಸ್ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನೀಟ್‌ ಪಾಸ್‌ ಆಗಿ ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು; ಗ್ರಾಮಸ್ಥರಲ್ಲಿ ಹರ್ಷ

ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು!

Haveri News: ಹಾವೇರಿ ತಾಲೂಕಿನ ಶಾಕಾರ ಗ್ರಾಮದ ವಿದ್ಯಾರ್ಥಿಗಳಾದ ಜಗದೀಶ ದೇವೇಂದ್ರಪ್ಪ ಬೆಂಡಿಗೇರಿ ಮತ್ತು ವರ್ಷಾ ರೇಣುಕಾ ಕಮ್ಮಾರ್ ಅವರು ಬಡತನವನ್ನು ಮೆಟ್ಟಿನಿಂತು, ಸತತ ಪರಿಶ್ರಮದಿಂದ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸರ್ಕಾರಿ ಎಂಬಿಬಿಎಸ್ ಸೀಟ್ ಪಡೆದುಕೊಂಡಿದ್ದಾರೆ.

Loading...