ನಾಲಿಗೆ ಬಿಗಿ ಹಿಡಿದು ಮಾತನಾಡಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕಿಡಿ
ಇತ್ತೀಚಿಗೆ ಎಂಎಲ್ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು, ಈ ಹಿಂದೆ 17 ಜನ ಕಾಂಗ್ರೆಸ್ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು ಎಂದು ಹೇಳಿದ್ದರು. ಇದಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.