ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಹಾವೇರಿ ಜಿಲ್ಲೆಯ ರೈತರು
Haveri News: ಕಳೆದ ಐದು ದಿನಗಳಿಂದ ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾದ್ಯಂತ ತೀವ್ರ ಬಿಸಿಲು ಆವರಿಸಿದ್ದು, ಬಂಪರ್ ಬೆಳೆ ಕನಸು ಕಂಡಿದ್ದ ಸಾವಿರಾರು ರೈತರಲ್ಲಿ ಆತಂಕ ಮನೆಮಾಡಿದೆ. ಕೆಲವೇ ದಿನಗಳ ಹಿಂದೆ ಧಾರಾಕಾರ ಮಳೆಯಿಂದ ಹಸಿರು ಹೊದಿಕೆ ಹೊದ್ದಿದ್ದ ಜಿಲ್ಲೆಯ ಕೃಷಿ ಭೂಮಿ ಈಗ ಮತ್ತೆ ಬಿರು ಬಿಸಿಲಿನ ಹೊಡೆತಕ್ಕೆ ತತ್ತರಿಸಿದೆ.