ಹಾನಗಲ್ ಕುಮಾರೇಶ್ವರ ಮಠಕ್ಕೆ ಬಾಂಬ್ ಬೆದರಿಕೆ ಕರೆ
Hangal News: ಹಾನಗಲ್ ಪಟ್ಟಣದ ಕುಮಾರೇಶ್ವರ ಮಠ ಸೇರಿ ಕಾರು, ಬಸ್, ಶಾಲೆಗಳು ಸೇರಿ ವಿವಿಧೆಡೆ ಆರ್ಡಿಎಕ್ಸ್ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಸ್ಪಿ ಯಶೋಧಾ ವಂಟಗೋಡಿ ಪ್ರತಿಕ್ರಿಯೆ ನೀಡಿದ್ದು, ಹಾನಗಲ್ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಕರೆ ಮಾಡಿರುವ ನಂಬರ್ ಟ್ರೇಸ್ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.