ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬೊಮ್ಮಾಯಿ
State Congress Government: ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ, ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.