ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಹಾವೇರಿ
Basavaraj Bommai: ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

Basavaraj Bommai: ಹಾವೇರಿಯ ಶ್ರೀ‌ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಇಂದು ಏರ್ಪಡಿಸಿದ್ದ ವಂದೇ ಭಾರತ್‌ ರೈಲು ನಿಲುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.‌ ಸೋಮಣ್ಣ ಅವರೊಂದಿಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

Karnataka Police: ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ‌ಅವರು ಸೇರಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಮೆಡಲ್ ಲಭಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಒಳಾಡಳಿತ ಇಲಾಖೆಯ ಸರಕಾರದ ಅಪರ‌ ಮುಖ್ಯ ಕಾರ್ಯದರ್ಶಿಗಳು, ಸಿಎಂ ಪದಕ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Ration Rice smuggling: ಹಾವೇರಿಯಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹಲ್ಲೆ

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹಲ್ಲೆ

Ration Rice smuggling: ಹಾವೇರಿ ಶಹರದ ಅಕ್ಕಿ ಪೇಟೆಯಲ್ಲಿ ಪಡಿತರ ಅಕ್ಕಿ ಇರುವ ಬಗ್ಗೆ ಮಾಧ್ಯಮದವರಿಗೆ ಮಾಹಿತಿ‌ ಬಂದ ಹಿನ್ನೆಲೆಯಲ್ಲಿ ವರದಿ ಮಾಡಲು ಹೋದಾಗ ಹಲ್ಲೆ ಯತ್ನ ನಡೆದಿದೆ. ಮಾಧ್ಯಮದವರ ಮೇಲೆ ಸಚಿನ್‌ ಕಬ್ಬೂರ್ ಎಂಬಾತ ಹಲ್ಲೆಗೆ ಯತ್ನಿಸಿದ್ದು, ಕ್ಯಾಮೆರಾವನ್ನು ಒಡೆದು ಹಾಕಿದ್ದಾನೆ.

Haveri News: ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Swathi murder Case: ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Swathi murder Case: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

Theft case: 40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

Theft case: ಹಾವೇರಿ ಜಿಲ್ಲೆಯ ತವರ‌ಮಳ್ಳಿಹಳ್ಳಿಯ ರೈತ ಶಂಕ್ರಪ್ಪ ದೊಡ್ಡಮನಿ ಅವರು ದಾಸ್ತಾನು ಮಾಡಿದ್ದ40 ಸಾವಿರ ಮೌಲ್ಯದ ಧಾನ್ಯ ಕಳವಾಗಿತ್ತು. ಈ ಬಗ್ಗೆ ಶಂಕ್ರಪ್ಪ ಸವಣೂರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿ, ಧಾನ್ಯ ವಶಕ್ಕೆ ಪಡೆದಿದ್ದಾರೆ.

Fasal Bima Yojana: ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಬೊಮ್ಮಾಯಿ ಪತ್ರ

Fasal Bima Yojana: ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸಂಸದ ಬಸವರಾಜ ಬೊಮ್ಮಾಯಿ ಕೋರಿದ್ದಾರೆ

Haveri Murder Case: ಹಾವೇರಿಯಲ್ಲಿ ಲವ್‌ ಜಿಹಾದ್‌ಗೆ ಹಿಂದು ಯುವತಿ ಬಲಿ?; ಕೊಲೆಗೈದು ನದಿಗೆ ಬಿಸಾಡಿದ ಕಿರಾತಕರು

ಹಾವೇರಿಯಲ್ಲಿ ಲವ್‌ ಜಿಹಾದ್‌ಗೆ ಹಿಂದು ಯುವತಿ ಬಲಿ?

Haveri Murder Case: ಹಾವೇರಿ ಜಿಲ್ಲೆಯ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೊದಲಿಗೆ ಅಪರಿಚಿತ ಶವ ಎಂದು ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂದು ತಿಳಿದುಬಂದಿದ್ದು, ಇದರಿಂದ ಲವ್‌ ಜಿಹಾದ್‌ ಆರೋಪ ಕೇಳಿಬಂದಿದೆ.

Murder Case: ಹಾವೇರಿಯಲ್ಲಿ ಯುವತಿಯ ಹತ್ಯೆ; ಆರೋಪಿ ನಯಾಜ್‌ ಅರೆಸ್ಟ್‌

ಹಾವೇರಿಯಲ್ಲಿ ಯುವತಿಯ ಬರ್ಬರ ಹತ್ಯೆ; ನಯಾಜ್ ಅರೆಸ್ಟ್

Murder Case: ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಎಂಬ ಯುವತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ ಆರೋಪಿ ನಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Theft case: ಹಾಡಹಗಲೇ ಕಾರಲ್ಲಿದ್ದ 33 ಲಕ್ಷ‌ ಕದ್ದಿದ್ದ ಖದೀಮ ಅರೆಸ್ಟ್

ಹಾಡಹಗಲೇ ಕಾರಲ್ಲಿದ್ದ 33 ಲಕ್ಷ‌ ಕದ್ದಿದ್ದ ಖದೀಮ ಅರೆಸ್ಟ್

Theft case: ಹಾವೇರಿ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಉದ್ಯಮಿಯೊಬ್ಬರ ಕಾರಿನಲ್ಲಿದ್ದ 33 ಲಕ್ಷ ರೂ.ಗಳನ್ನು ದೋಚಿ ಮೂವರು ಕಳ್ಳರು ಪರಾರಿಯಾಗಿದ್ದರು. ಈ ಪೈಕಿ ಒಬ್ಬ ಆರೋಪಿಯನ್ನು ಆಂಧ್ರದಲ್ಲಿ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Robbery Case: ಹಾವೇರಿ: ಶಾಸಕರ ಮನೆ ಎದುರೇ ಕಾರಿನ ಗ್ಲಾಸ್ ಒಡೆದು  33 ಲಕ್ಷ ರೂ. ಕಳವು

ಶಾಸಕರ ಮನೆ ಎದುರೇ ಕಾರಿನ ಗ್ಲಾಸ್ ಒಡೆದು 33 ಲಕ್ಷ ರೂ. ಕಳವು

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 33 ಲಕ್ಷ ರೂ. ದೋಚಿಕೊಂಡು ಹೋದ ಘಟನೆ ಗುರುವಾರ ಸಂಜೆ ಬಸವೇಶ್ವರ ನಗರದ ಎ ಬ್ಲಾಕ್‌ನ 9ನೇ ಕ್ರಾಸ್‌ನಲ್ಲಿ ನಡೆದಿದೆ. ಉದ್ದಿಮೆದಾರ ಸಂತೋಷ ಈರಯ್ಯ ಹೀರೆಮಠ ಅವರಿಗೆ ಸೇರಿದ ಕಾರಿನಿಂದ ಈ ಕಳವು ನಡೆದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Self Harming: ಒಂದು ಸೆಮಿಸ್ಟರ್‌ ಫೇಲ್‌ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಎಕ್ಸಾಂ ಫೇಲ್‌ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Self Harming: ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ, ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Haveri News: ಬಸ್ ಡಿಕ್ಕಿಯಾಗಿ ಹಾವೇರಿ ಪೊಲೀಸ್‌ ಶ್ವಾನ ʼಕನಕʼ ಸಾವು: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬಸ್ ಡಿಕ್ಕಿಯಾಗಿ ಹಾವೇರಿ ಪೊಲೀಸ್‌ ಶ್ವಾನ ʼಕನಕʼ ಸಾವು

Haveri News: ಹಂಪಿ ಉತ್ಸವದ ಭದ್ರತೆ ಕರ್ತವ್ಯದಲ್ಲಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಕನಕ ಶ್ವಾನ ಮೃತಪಟ್ಟಿದೆ. ಕನಕನನ್ನು ಕಳೆದುಕೊಂಡ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಸಕಲ ಸರ್ಕಾರಿ ಗೌರವಗಳೊಂದಿದೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

Fraud Case: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ, ಲಕ್ಷಾಂತರ ರೂ. ವಂಚನೆ: ಆರೋಪಿ ಬಂಧನ

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ, ವಂಚನೆ: ಆರೋಪಿ ಬಂಧನ

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭ ಕೊಡುವುದಾಗಿ ನಂಬಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು, ಯಾವುದೇ ಲಾಭವನ್ನು ಕೊಡದೇ ವಂಚಿಸಿ, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹಾವೇರಿ ಸಿಇಎನ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.

Drowned: ಕೆರೆಗೆ ಕೈಕಾಲು ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು

ಕೆರೆಗೆ ಕೈಕಾಲು ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು

ಈ ಇಬ್ಬರು ಗ್ರಾಮದ ಕಾರ್ಯಕ್ರಮವೊಂದಕ್ಕೆ ತೆರಳಿ, ಬಹಿರ್ದೆಸೆ ಮುಗಿಸಿ, ಕೆರೆಗೆ ಕೈಕಾಲು ತೊಳೆಯಲು ದೊಡ್ಡಕೆರೆಗೆ ಹೋಗಿದ್ದರು. ಈ ವೇಳೆಯಲ್ಲಿ ಕಾಲುಜಾರಿ ಕೆರೆಗೆ ಬಿದ್ದ ಒಬ್ಬನನ್ನು ರಕ್ಷಣೆ ಮಾಡಲು ಹೋಗಿ, ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mylara Lingeshwara Karnika: ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರದಲ್ಲಿ ಕಾರ್ಣಿಕ ನುಡಿದ ಗೊರವಯ್ಯ

ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರ ಲಿಂಗೇಶ್ವರ ಕಾರ್ಣಿಕ

Mylara Lingeshwara Karnika: ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15 ಅಡಿ ಎತ್ತರದ ಬಿಲ್ಲನ್ನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, ತುಂಬಿದಕೊಡ ತುಳುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾನೆ.

Mylara Karnika: ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್!

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್!

12 ಅಡಿ ಎತ್ತರದ ಬಿಲ್ಲೇರಿದ ಗೊರವಯ್ಯ ಹನುಮಗೌಡ ಗುರೇಗೌಡರು ದೈವವಾಣಿ ನುಡಿದಿದ್ದು, 'ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್' ಎಂದು ನುಡಿದಿದ್ದಾರೆ. ಮೈಲಾರ ಕಾರ್ಣಿಕ ಶುಭ ಸೂಚನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Road Accident: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಎತ್ತಿನ ಗಾಡಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಬಳಿ ಸಂಭವಿಸಿದೆ. ಎತ್ತುಗಳಿಗೂ ಗಾಯಗಳಾಗಿವೆ. ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HD Kumaraswamy: ಕೇಂದ್ರದೊಂದಿಗೆ ಸಂಘರ್ಷದಿಂದ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಲ್ಲ: ಎಚ್.ಡಿ.ಕುಮಾರಸ್ವಾಮಿ

ಸಂಘರ್ಷದಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲ್ಲ: ಎಚ್.ಡಿ.ಕುಮಾರಸ್ವಾಮಿ

HD Kumaraswamy: ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಬದ್ಧವಾಗಿದೆ. ನಾನು ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯ ಎಲ್ಲಾ ಸಚಿವರು ಕೆಲಸ ಮಾಡಲು ತಯಾರಿದ್ದಾರೆ. ಆದರೆ, ದಿನಕ್ಕೊಂದು ತಂಟೆ-ತಕರಾರು ಮಾಡಿಕೊಂಡು ರಾಜ್ಯ ಸರ್ಕಾರ ಅಮೂಲ್ಯ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Haveri News: ʼರೀ ಡಾಬಾ ಬಂತು, ಊಟ ಮಾಡ್ರಿʼ ಎಂದ ಪತ್ನಿ; ಆಂಬ್ಯುಲೆನ್ಸ್‌ನಲ್ಲೇ ಎದ್ದು ಕೂತ ಸತ್ತ ಗಂಡ!

ಆಂಬ್ಯುಲೆನ್ಸ್‌ನಲ್ಲಿ ಹೋಗುತ್ತಿದ್ದಾಗ ದಿಢೀರನೆ ಎದ್ದು ಕೂತ ಸತ್ತ ವ್ಯಕ್ತಿ!

Haveri News: ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಇಂತಹದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಅಂತ್ಯಸಂಸ್ಕಾರಕ್ಕೆಂದು ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ಊರಿಗೆ ಸಾಗಿಸುವಾಗ ಅಚ್ಚರಿ ರೀತಿಯಲ್ಲಿ ಸತ್ತ ವ್ಯಕ್ತಿ ದಿಢೀರನೆ ಎದ್ದು ಕುಳಿತಿದ್ದಾರೆ. ಹೀಗಾಗಿ ಆತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಪಾಸಣೆ ಮಾಡಿ, ಚಿಕಿತ್ಸೆ ನೀಡುತ್ತಿದ್ದಾರೆ.

Haveri News: ದೇಗುಲ ಕಳಸಾರೋಹಣ ವೇಳೆ ಕ್ರೇನ್‌ ಬಕೆಟ್‌ ಮುರಿದು ವ್ಯಕ್ತಿ ಸಾವು, ಮತ್ತೊಬ್ಬ ಗಂಭೀರ

ದೇಗುಲ ಕಳಸಾರೋಹಣ ವೇಳೆ ಕ್ರೇನ್‌ ಬಕೆಟ್‌ ಮುರಿದು ವ್ಯಕ್ತಿ ಸಾವು

Haveri News: ದೇವಸ್ಥಾನದ ಗೋಪುರದ ಮೇಲೆ ಕಳಸ ಹಿಡಲು ಕ್ರೇನ್ ಮೂಲಕ ಹತ್ತಿರ ಹೋಗುತ್ತಿದ್ದಂತೆ ಕ್ರೇನ್‌ ಬಕೆಟ್‌ ಕಳಚಿ ಬಿದ್ದು ದುರಂತ ಸಂಭವಿಸಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hanumantha Lamani: ಚಿಕ್ಕಪ್ಪ ನಿಧನ; ಬಿಗ್ ಬಾಸ್ ವಿನ್ನರ್ ಹನುಮಂತನ ಮನೆಯಲ್ಲಿ ನೀರವ ಮೌನ

ಚಿಕ್ಕಪ್ಪ ನಿಧನ; ಬಿಗ್ ಬಾಸ್ ವಿನ್ನರ್ ಹನುಮಂತನ ಮನೆಯಲ್ಲಿ ನೀರವ ಮೌನ

Haveri News:

Shiggaon Accident: ಶಿಗ್ಗಾಂವಿ ಬಳಿ ಭೀಕರ ಅಪಘಾತ; ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ದಾರುಣ ಸಾವು

Shiggaon Accident: ಶಿಗ್ಗಾಂವಿ ಬಳಿ ಭೀಕರ ಅಪಘಾತ; ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ದಾರುಣ ಸಾವು

Shiggaon Accident: ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ದುರಂತ ನಡೆದಿದೆ. ಇದರಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

Haveri News: ಕುಳೇನೂರು; ಕಬ್ಬಿನ ಹೊಲದಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ!

Haveri News: ಕುಳೇನೂರು; ಕಬ್ಬಿನ ಹೊಲದಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ!

ಹಾವೇರಿ ತಾಲೂಕಿನ ಕುಳೇನೂರು ಗ್ರಾಮದ ಕಬ್ಬಿನ ಹೊಲದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಎರಡು ಪುಟ್ಟ ಚಿರತೆಮರಿಗಳು ಪ್ರತ್ಯಕ್ಷವಾಗಿದ್ದು, ಹೊಲದ ಮಾಲೀಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಹಾವೇರಿ (Haveri News) ತಾಲೂಕಿನ ಕುಳೇನೂರು ಗ್ರಾಮದಲ್ಲಿ ‌ ಭಾನುವಾರ ನಡೆದಿದೆ.