ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿ

ʼʼಸಚಿವ ಸ್ಥಾನ ಸಿಗುವ ಭರವಸೆ ನನಗಿದೆʼʼ: ರುದ್ರಪ್ಪ ಲಮಾಣಿ

ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದ ರುದ್ರಪ್ಪ ಲಮಾಣಿ

Rudrappa Lamani: ಈ ಹಿಂದೆಯೇ ನಾನು ಸಚಿವನಾಗಬೇಕಿತ್ತು.‌ ಕಾರಣಾಂತರಗಳಿಂದ ಸಚಿವ ಸ್ಥಾನ ಸಿಗದೇ ಹೋದರೂ ನನ್ನನ್ನು ವಿಧಾನಸಭೆಯ ಉಸಭಾಪತಿಯನ್ನಾಗಿ‌ ಮಾಡಿದರು. ಅದೃಷ್ಟದಿಂದ ನನಗೆ ಈಗ ಸಭಾಧ್ಯಕ್ಷ ಸ್ಥಾನ ದೊರೆತಿದೆ. ಹೈಕಮಾಂಡ್‌ ತೀರ್ಮಾನದಂತೆ ಸಚಿವ ಸ್ಥಾನ ಸಿಗುವ ಭರವಸೆ ನನಗಿದೆ ಎಂದು ನೂತನ ವಿಧಾನಸಭೆಯ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜ ವಿತರಣೆಗೆ ರೈತರ ಆಗ್ರಹ Video

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬೀಜ ವಿತರಣೆಗೆ ಆಗ್ರಹ

Haveri News: ಕೇಂದ್ರ ಸರ್ಕಾರ ನೀಡುವ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜವನ್ನು ರೈತರು ಉತ್ಪಾದನೆ ಮಾಡಿಕೊಳ್ಳಲಿ. ಇದರಿಂದ ಬೀಜದ ಕೊರತೆ ನೀಗಿಸಲು ಸಾಧ್ಯ ಎಂಬ ಮಹತ್ತರ ಯೋಜನೆ ಘೋಷಿಸಲಾಗಿದೆ. ಆದರೆ ಹಾವೇರಿ ಜಿಲ್ಲಾಡಳಿತ ಸರಿಯಾಗಿ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ರೈತರಿಗೆ ನಾಮಕಾವವಸ್ಥೆ ಬೀಜ ವಿತರಣೆ ಮಾಡಿ, ಬಳಿಕ ಬೀಜ ಖಾಲಿಯಾಗಿದೆ ಎಂದು ಹೇಳಿಕೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ರೈತರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

IPL 2026 Final: ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ; ಹರಿದುಬಂದ RCB ಅಭಿಮಾನಿಗಳು

ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ ವ್ಯವಸ್ಥೆ

RCB vs GT: ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್‌ ಮ್ಯಾಚ್‌ ವೀಕ್ಷಣೆಗೆ ಹಾವೇರಿ ಜಿಲ್ಲಾ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

Haveri News: ಅಕ್ರಮ ಸಂಬಂಧ ಶಂಕೆ; ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ

ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಂದ ತಮ್ಮ

Haveri Murder Case: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭೀಕರ ಹತ್ಯೆ ನಡೆದಿದೆ. ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಅಕ್ಕನನ್ನೇ ಸಹೋದರ ಕೊಲೆ ಮಾಡಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡಿಕೊಂಡಿದ್ದ ಮಹಿಳೆಯನ್ನು ಸಹೋದರ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

Haveri News: ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ, 310 ಗ್ರಾಂ ಚಿನ್ನ, 26 ಕೆ.ಜಿ ಬೆಳ್ಳಿ ವಶಕ್ಕೆ

ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ

ಹಾವೇರಿ ಹಾಗೂ ಧಾರವಾಡ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತರಾಜ್ಯ ಕಳ್ಳರಿಂದ ಸುಮಾರು 1.15 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 31 ತೊಲ (310 ಗ್ರಾಂ) ಚಿನ್ನ, 26 ಕೆ.ಜಿ ಬೆಳ್ಳಿ ಸೇರಿದೆ.

ಹಾವೇರಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ; ಲಾಕರ್‌ ಸಮೇತ ಕಳ್ಳರು ಎಸ್ಕೇಪ್‌!

ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ

Haveri Jewellery shop theft: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

Pravasi Prapancha: ರಾಣೇಬೆನ್ನೂರು ಪ್ರವಾಸೋದ್ಯಮ; ಸಫಾರಿಯಿಂದ ಪರಂಪರೆಯವರೆಗೆ ಪಯಣ

ರಾಣೇಬೆನ್ನೂರು: ಸಫಾರಿಯಿಂದ ಪರಂಪರೆಯವರೆಗೆ ಪಯಣ

Ranebennuru: ರಾಣೇಬೆನ್ನೂರು ವನ್ಯಜೀವಿ, ಪರಂಪರೆ, ಆಧ್ಯಾತ್ಮಿಕ, ಪರಿಸರ ಮತ್ತು ಸಾಹಸ ಪ್ರವಾಸೋದ್ಯಮದ ವಿಶಿಷ್ಟ ಸಮ್ಮಿಲನವನ್ನು ಹೊಂದಿದೆ. ಕೃಷ್ಣಮೃಗ ಅಭಯಾರಣ್ಯ, ಬೆಟ್ಟದ ಮಲ್ಲಪ್ಪನ ಗುಡ್ಡ, ಮುಕ್ತೇಶ್ವರ ದೇವಾಲಯ ಮತ್ತು ಐರಾಣಿ ಕೋಟೆಗಳು ಒಟ್ಟಾಗಿ ಅಭಿವೃದ್ಧಿಯ ಅಪಾರ ಸಾಮರ್ಥ್ಯವಿರುವ ಬಲಿಷ್ಠ ಪ್ರವಾಸೋದ್ಯಮ ವಲಯವನ್ನು ಸೃಷ್ಟಿಸುತ್ತವೆ.

ಬ್ಯಾಡಗಿ ಮೆಣಸಿನಕಾಯಿ ಖರೀದಿಯಲ್ಲಿ ವಂಚನೆ; ರೈತನಿಗೆ 50 ಲಕ್ಷ ರೂ. ಪಂಗನಾಮ ಹಾಕಿದ ವ್ಯಕ್ತಿ!

ಒಣ ಮೆಣಸಿನಕಾಯಿ ಖರೀದಿಸಿ ಹಣ ಕೊಡದೆ ರೈತನಿಗೆ 50 ಲಕ್ಷ ರೂ. ಪಂಗನಾಮ!

ಬ್ಯಾಡಗಿ ಒಣ ಮೆನಸಿನಕಾಯಿ ಮಾರುಕಟ್ಟೆಯ ತಿಪ್ಪೇಸ್ವಾಮಿ ಟೇಡರ್ಸನ ಮಾಲೀಕ ನಾಗಪ್ಪ ಹಡಗಲಿ ರೈತನಿಂದ 127 ಕ್ವಿಂಟಾಲ್ ಒಣ ಮೆಣನಸಿನಕಾಯಿ ಖರೀದಿಸಿ ಹಣ ಕೊಡದೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಣ ಕೇಳಿದ್ದಕ್ಕೆ ಆರೋಪಿ ರೈತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ ಬಳಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಪಲ್ಲಕ್ಕಿ ಬಸ್; 17 ಮಂದಿ ಪ್ರಾಣಾಪಾಯದಿಂದ ಪಾರು!

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ಬೆಂಗಳೂರಿ-ನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ.

ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಕುರ್ಚಿ ಇರುತ್ತದೋ ಇಲ್ಲವೋ ಗೊತ್ತಿಲ್ಲ: ಬೊಮ್ಮಾಯಿ Video

ಮೇ 4ರ ನಂತರ ಸಿದ್ದರಾಮಯ್ಯ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೂ ಸಿಎಂ ಆಗುವ ಆಸೆ ಇದೆ. ಹಲವರಿಗೂ ಆಸೆ ಇದೆ ಎಂದು ಹೇಳಿದ್ದಾರೆ. ಆದರೆ ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೌರಿಂಗ್ ಆಸ್ಪತ್ರೆ ದುರಂತ: ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ ಎಂದ ಬೊಮ್ಮಾಯಿ Video

ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ಮಳೆ ಬಂದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ ಆದರೂ ಯಾವುದೇ ತಯಾರಿ ಕೂಡ ಮಾಡಿಕೊಂಡಿಲ್ಲ. ಒಂದು ರೀತಿಯಲ್ಲಿ ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್‌ ಜಿಹಾದ್‌ ಆರೋಪ

ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಲವ್‌ ಜಿಹಾದ್‌ ಆರೋಪ

Haveri love jihad case: ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಯುವತಿ ನಾಪತ್ತೆಯಾಗಿದ್ದಾಳೆ. ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಕಾಣೆಯಾಗಿದ್ದರಿಂದ ಪೋಷಕರು ಕಂಗಾಲಾಗಿದ್ದಾರೆ. ಆದರೆ, ಯವತಿಯು ಮುಸ್ಲಿಂ ಯುವಕನ ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದು ಲವ್‌ ಜಿಹಾದ್‌ ಎಂದು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

Karnataka SSLC Result: 623 ಅಂಕ ಗಳಿಸಿ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಿವೇದಿತಾ

ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕ ಗಳಿಸಿದ ಹಾವೇರಿ ಜಿಲ್ಲೆಯ ನಿವೇದಿತಾ

Haveri News: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ರಲ್ಲಿ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

Haveri News: ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ಕಿಡಿಗೇಡಿಗಳು; ಕ್ರಮಕ್ಕೆ ಆಗ್ರಹ

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ಕಿಡಿಗೇಡಿಗಳು!

Mahatma Gandhi Bust destroyed: ಹಾವೇರಿ ನಗರದ ಹೃದಯಭಾಗದಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿದ್ದ ಗಾಂಧೀಜಿ ಅವರ ಪುತ್ಥಳಿಯನ್ನು ಧ್ವಂಸಗೊಳಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೇವರನ್ನು ನಂಬಿ, ಆದ್ರೆ ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

ದೇವರನ್ನು ನಂಬಿ, ಆದ್ರೆ ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಕರೆ

ರಾಣೆಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

Women's Reservation Bill: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Fake Govt Job Scam: ಹಾವೇರಿಯಲ್ಲಿ ಸರ್ಕಾರಿ ಉದ್ಯೋಗದ ಆಮಿಷ ತೋರಿ 25 ನಿರುದ್ಯೋಗಿಗಳಿಗೆ ಕೋಟ್ಯಂತರ ರೂ. ವಂಚನೆ

ಸರ್ಕಾರಿ ಉದ್ಯೋಗದ ಆಮಿಷ ತೋರಿ ಕೋಟ್ಯಂತರ ರೂ. ವಂಚನೆ

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಆಮಿಷ ತೋರಿ 25ರಿಂದ 30 ನಿರುದ್ಯೋಗಿಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಪ್ರತಿಯೊಬ್ಬರಿಂದ ನಾಲ್ಕೈದು ಲಕ್ಷ ಪಡೆದು, 1 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ಖದೀಮರು ಮೋಸ ಮಾಡಿದ್ದಾರೆ. ಈ ಬಗ್ಗೆ ಮೋಸ ಹೋದ ಅಭ್ಯರ್ಥಿಗಳು ದೂರು ದಾಖಲಿಸಿದ್ದಾರೆ.

ಬೈಲಾದ ಪ್ರಕಾರವೇ ವಚನಾನಂದ ಶ್ರೀ ಉಚ್ಚಾಟನೆ: ಹರಿಹರ ಪಂಚಮಸಾಲಿ ಪೀಠದ ಟ್ರಸ್ಟ್‌ ಸ್ಪಷ್ಟನೆ

ಐಷಾರಾಮಿ ಜೀವನವೇ ವಚನಾನಂದ ಸ್ವಾಮೀಜಿಗೆ ಮುಳುವಾಯ್ತಾ?

Vachanananda Swamiji: ವಚನಾನಂದ ಸ್ವಾಮೀಜಿ ಅವರನ್ನು ಹರಿಹರ ಪಂಚಮಸಾಲಿ ಗುರುಪೀಠದಿಂದ ಉಚ್ಚಾಟನೆ ಮಾಡಿರುವ ಘಟನೆ ಸದ್ಯ ಭಾರಿ ಸಂಚಲನ ಮೂಡಿಸಿದೆ. ಇದೀಗ ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಮಹೇಶ ಹಾವೇರಿ ಸ್ಪಷ್ಟನೆ ನೀಡಿ ಬೈಲಾ ಪ್ರಕಾರವೇ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಕ್ರಮಕ್ಕೆ ಬೇಸರ; ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮದ ಮನೆಗಳು ಬರುತ್ತವೆ ಎಂದು ಜನರ ಮೇಲೆ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲು ಮಾಡಿದ ಹಿನ್ನೆಲೆಯಲ್ಲಿ ಭಾವೋದ್ವೇಗಗೊಂಡು ಉಪಸಭಾಪತಿ ರುದ್ರಪ್ಪ ಲಮಾಣಿ ಕಣ್ಣೀರಿಟ್ಟಿದ್ದಾರೆ. ಒಕ್ಕಲೆಬ್ಬಿಸಿದರೆ ಸಾವಿರಾರು ಬಡವರು ಎಲ್ಲಿಗೆ ಹೋಗಬೇಕು‌ ಎಂದು ಅವರು ಪ್ರಶ್ನಿಸಿದ್ದಾರೆ.

Road Accident: ಪ್ರವಾಸಕ್ಕೆ ಬಂದವರ ಮೇಲೆ ಹರಿದ ಇನ್ನೋವಾ, ಹಾರಿಹೋಯ್ತು ಯುವಕನ ಪ್ರಾಣ

ಪ್ರವಾಸಕ್ಕೆ ಬಂದವರ ಮೇಲೆ ಹರಿದ ಇನ್ನೋವಾ, ಹಾರಿಹೋಯ್ತು ಯುವಕನ ಪ್ರಾಣ

ದಾವಣೆಗೆರೆಯ ಮೂಲದ 10 ಮಂದಿ ಸ್ನೇಹಿತರು ರಾತ್ರಿ 2 ಗಂಟೆಗೆ ಟಿಟಿ ವಾಹನ ಮೂಲಕ ಕಾರವಾರದ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಬೆಳಗಿನ ಜಾವ 6 ಗಂಟೆಗೆ ಹಾವೇರಿಯ ತಡಸ್ ಬಳಿ ಟೀ ಶಾಪ್ ಬಳಿ ವಾಹನ ನಿಲ್ಲಿಸಿದ್ದಾರೆ. ಚಹಾ ಕುಡಿಯುತ್ತಾ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅತೀ ವೇಗವಾಗಿ ಬಂದ ಇನ್ನೋವಾ ಕಾರು ಟಿಟಿ ವಾಹನಕ್ಕೆ ಡಿಕ್ಕಿಯಾಗಿದೆ.

Haveri University Convocation: ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ

Haveri News: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದ್ದಾರೆ. ಕರ್ನಾಟಕದ ಭೂಮಿ ಯಾವಾಗಲೂ ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದಿಂದ ಸಮೃದ್ಧವಾಗಿದೆ. ಇದು ಅನೇಕ ಮಹಾನ್ ಸಂತರು, ವಿದ್ವಾಂಸರು ಮತ್ತು ಚಿಂತಕರು ಹುಟ್ಟಿ ಸಮಾಜವನ್ನು ರೂಪಿಸಿದ ಭೂಮಿ. ಹಾವೇರಿಯಂತಹ ಪ್ರದೇಶದಲ್ಲಿ ಈ ವಿಶ್ವವಿದ್ಯಾಲಯದ ಸ್ಥಾಪನೆಯು ಈ ಪ್ರದೇಶದಲ್ಲಿ ಶಿಕ್ಷಣವನ್ನು ವಿಸ್ತರಿಸುವುದಲ್ಲದೆ, ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಬಸವರಾಜ ಬೊಮ್ಮಾಯಿ ನಕಾರ

Basavaraj Bommai: ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ತಿಳಿಸಿರುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Rudrappa Lamani: ಸರ್ಕಾರಿ ಬಸ್ಸಿಗೆ ಗುದ್ದಿದ ರುದ್ರಪ್ಪ ಲಮಾಣಿ ಎಸ್ಕಾರ್ಟ್‌ ವಾಹನ

ಸರ್ಕಾರಿ ಬಸ್ಸಿಗೆ ಗುದ್ದಿದ ರುದ್ರಪ್ಪ ಲಮಾಣಿ ಎಸ್ಕಾರ್ಟ್‌ ವಾಹನ

ಎಸ್ಕಾರ್ಟ್ ವಾಹನದ (Escort Vehicle) ಚಾಲಕ ಚನ್ನಬಸಪ್ಪ ಅರ್ಚಕ್ ವಿರುದ್ಧ ದೂರು ದಾಖಲಾಗಿದೆ. ಅತೀವೇಗದ ಚಾಲನೆಯಿಂದ ಬಸ್‌ನ ಹಿಂಬದಿಗೆ ಗುದ್ದಿದ್ದಾನೆ ಎನ್ನಲಾಗಿದೆ. ಎಸ್ಕಾರ್ಟ್ ವಾಹನದ ಮುಂದಿನ ಭಾಗ ಮತ್ತು ಬಸ್‌ನ ಹಿಂದಿನ ಭಾಗ ಸಂಪೂರ್ಣ ಹಾನಿಯಾಗಿದೆ.

ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ! Video

ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್‌ ಹರಿದು 2 ವರ್ಷದ ಮಗು ಸಾವು

Haveri Bus stand Accident: ಹಾವೇರಿಯ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಬಸ್‌ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಈ ಸಂಬಂಧ ಹಾವೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...