ಮದುವೆಗೆ ಕನ್ಯೆ ಸಿಗದೆ ಖಿನ್ನತೆ, ಯುವಕ ಆತ್ಮಹತ್ಯೆ
Self Harming: ಗ್ರಾಮದಲ್ಲಿ ತಮ್ಮ ವಯಸ್ಸಿನ ಇತರ ಯುವಕರೆಲ್ಲರೂ ಮದುವೆಯಾಗಿದ್ದು, ತನಗೆ ಮಾತ್ರ ಹುಡುಗಿ ಸಿಗದಿರುವ ಕಾರಣಕ್ಕೆ ಅವಿನಾಶ್ ಮಾನಸಿಕವಾಗಿ ಕುಗ್ಗಿದ್ದರು. ಈ ನೋವಿನಲ್ಲಿ ಆತ ನೇಣಿಗೆ ಶರಣಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.