ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ! ಚಿಲ್ಡ್ರನ್ಸ್ ವೆಲ್ನೆಸ್ ಸಮ್ಮಿಟ್‌’ ಆಯೋಜನೆ

ಇಡೀ ದಿನದ ಸಮ್ಮಿಟ್‌ನಲ್ಲಿ "ಮಕ್ಕಳು ಮತ್ತು ಬೊಜ್ಜು: ಬೆಳೆಯುತ್ತಿರುವ ಕಾಳಜಿ ಮತ್ತು ಅದನ್ನು ನಿಭಾಯಿಸುವ ಮಾರ್ಗಗಳು". ಈ ಶೀರ್ಷಿಕೆಯಡಿ ಸಂವಾದ ನಡೆಯಲಿದ್ದು, ತಜ್ಞ ವೈದ್ಯರು ಈ ಬಗ್ಗೆ ಮಕ್ಕಳಿಗೆ ಹಾಗೂ ಅವರ ಕುಟುಂಬಗಳಿಗೆ ವಿಷಯದ ಮನವರಿಕೆ ಮಾಡಿಕೊಡಲಿದ್ದಾರೆ, ಈ ಸಮ್ಮಿಟ್‌ ನಲ್ಲಿ ಮಕ್ಕಳು, ಶಿಕ್ಷಣ ಸಂಸ್ಥೆಗಳು ಸಹ ನೋಂದಣಿ ಮಾಡಿಕೊಳ್ಳಲು ಅರ್ಹವಾಗಿದೆ.

ಬೆಂಗಳೂರು: ಇಂದಿನ ಮಕ್ಕಳಲ್ಲಿ ಅತಿಯಾಗಿ ಬೊಜ್ಜುತನಕ್ಕೆ ಹೆಚ್ಚುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “ಹ್ಯಾಪಿಯೆಸ್ಟ್‌ ಹೆಲ್ತ್‌” ಡಿ. 6 ರಂದು ಕೋರಮಂಗಲದ ಸೇಂಟ್‌ ಜಾನ್ಸ್‌ ಸಭಾಂಗಣದಲ್ಲಿ ಗೆಟ್ ಸೆಟ್, ಗ್ರೋ! ಚಿಲ್ಡ್ರನ್ಸ್ ವೆಲ್ನೆಸ್ ಸಮ್ಮಿಟ್‌’ ೩ನೇ ಆವೃತ್ತಿಯನ್ನು ಆಯೋಜಿ ಸಿದೆ.

ಇಡೀ ದಿನದ ಸಮ್ಮಿಟ್‌ನಲ್ಲಿ "ಮಕ್ಕಳು ಮತ್ತು ಬೊಜ್ಜು: ಬೆಳೆಯುತ್ತಿರುವ ಕಾಳಜಿ ಮತ್ತು ಅದನ್ನು ನಿಭಾಯಿಸುವ ಮಾರ್ಗಗಳು". ಈ ಶೀರ್ಷಿಕೆಯಡಿ ಸಂವಾದ ನಡೆಯಲಿದ್ದು, ತಜ್ಞ ವೈದ್ಯರು ಈ ಬಗ್ಗೆ ಮಕ್ಕಳಿಗೆ ಹಾಗೂ ಅವರ ಕುಟುಂಬಗಳಿಗೆ ವಿಷಯದ ಮನವರಿಕೆ ಮಾಡಿಕೊಡಲಿದ್ದಾರೆ, ಈ ಸಮ್ಮಿಟ್‌ ನಲ್ಲಿ ಮಕ್ಕಳು, ಶಿಕ್ಷಣ ಸಂಸ್ಥೆಗಳು ಸಹ ನೋಂದಣಿ ಮಾಡಿಕೊಳ್ಳಲು ಅರ್ಹವಾಗಿದೆ.

ಇದನ್ನೂ ಓದಿ: Bangalore Cabs KSP App: ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ; ಪೊಲೀಸರಿಂದ ಹೊಸ ಮಾರ್ಗ ಸೂಚಿ ಬಿಡುಗಡೆ

ಹ್ಯಾಪಿಯೆಸ್ಟ್ ಹೆಲ್ತ್‌ನ ಜ್ಞಾನ ಸಹ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘು ಕೃಷ್ಣನ್ ಮಾತ ನಾಡಿ, "ಭಾರತದ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಸ್ಥೂಲಕಾಯತೆ ಹೆಚ್ಚುತ್ತಿರುವ ಕಳಕಳಕಾರಿ ಸಂಗತಿ, ಇಂದು ಸಿಗುತ್ತಿರುವ ಜಂಕ್‌ ಫುಡ್‌ನ ಹಾವಳಿಯಿಂದ ಸಾಕಷ್ಟು ಮಕ್ಕಳು ಪೌಷ್ಠಿಕಯುಕ್ತ ಆಹಾರ ಸೇವಿಸದೇ ಜಂಕ್‌ ಫುಡ್‌ನತ್ತ ವಾಲುತ್ತಿದ್ದಾರೆ, ಇದರಿಂದ ಸಣ್ಣ ವಯಸ್ಸಿನಲ್ಲಿಯೇ ಬೊಜ್ಜು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ.

Happiest health

ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯ ಮಹತ್ವ ಅರ್ಥ ಮಾಡಿಸದೇ ಹೋದರೆ, ಅಪಾಯ ತಪ್ಪಿದ್ದಲ್ಲ. ಹೀಗಾಗಿ ಈ ಸಮ್ಮಿಟ್‌ ಆಯೋಜಿಸಲಾಗಿದೆ ಎಂದು ಹೇಳಿದರು. ಹ್ಯಾಪಿಯೆಸ್ಟ್ ಹೆಲ್ತ್‌ನ ಜ್ಞಾನ ವಿಭಾಗದ ಸಹ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಜೋಶಿ, ಈಗಾಗಲೇ ಈ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಸಮ್ಮಿಟ್‌ ಆಯೋಜಿಸಿದ್ದು, ಯಶಸ್ವಿಯಾಗಿವೆ. ಇದೀಗ ಮೂರನೇ ಸಮ್ಮಿಟ್‌ ಆಯೋಜಿಸಿದ್ದು, ಮಕ್ಕಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಒಬೇಸಿಯ ಸಮಸ್ಯೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಇಡೀ ದಿನ ಸಮ್ಮಿಟ್‌ನಲ್ಲಿ ಮಕ್ಕಳಿಗೆ ಮನರಂಜನಾ ಕಾರ್ಯಕ್ರಮದ ಜೊತೆಜೊತೆಗೆ ಕಲಿಗೂ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.