ಆರ್ಬಿಐಯಲ್ಲಿ ಖಾಲಿ ಇದೆ 650 ಅಸಿಸ್ಟಂಟ್ ಹುದ್ದೆ
Job Guide: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಬರೋಬ್ಬರಿ 650 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಉದ್ಯೋಗ ಸ್ಥಳ: ಬೆಂಗಳೂರು ಸೇರಿ ಭಾರತಾದ್ಯಂತ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮಾರ್ಚ್ 8.
ಬಿಎಸ್ಎಫ್, ಸಿಐಎಸ್ಎಫ್ ಸೇರಿ ವಿವಿಧ ಭದ್ರತಾ ಪಡೆಗಳಲ್ಲಿ ಒಟ್ಟು 25,487 ಕಾನ್ಸ್ಟೆಬಲ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದರಲ್ಲಿ 23,467 ಹುದ್ದೆಗಳು ಪುರುಷರಿಗೆ ಹಾಗೂ ಮಹಿಳೆಯರಿಗೆ 2020 ಹುದ್ದೆ ಮೀಸಲಿವೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಎಸ್ಎಸ್ಸಿ ಪ್ರಕಟಿಸಲಿದೆ.
Job Guide: ಕಾಮನ್ ಸರ್ವಿಸ್ ಸೆಂಟರ್ ದೇಶಾದ್ಯಂತ ಖಾಲಿ ಇರುವ 253 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಧಾರ್ ಸೂಪರ್ವೈಸರ್/ಆಪರೇಟರ್ ಹುದ್ದೆ ಇದಾಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ್ದರೆ ಅಪ್ಲೈ ಮಾಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್ 10.
Bank Jobs: ದೇಶಾದ್ಯಂತ ಬರೋಬ್ಬರಿ 2,273 ಸರ್ಕಲ್ ಬೇಸ್ಡ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 18 ಎಂದು ಹೇಳಲಾಗಿತ್ತು. ಇದೀಗ ಫೆಬ್ರವರಿ 25ರ ತನಕ ಅವಕಾಶ ನೀಡಲಾಗಿದೆ.
Bank of Baroda: ಪದವೀಧರರಿಗೆ ಗುಡ್ನ್ಯೂಸ್. ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸೀನಿಯರ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಕ್ರಡಿಟ್ ಅನಾಲಿಸ್ಟ್ ಸೇರಿದಂತೆ ಒಟ್ಟು 166 ಹುದ್ದೆಗಳಿವೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 26.
Government Recruitment: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
ಇನ್ಫೋಸಿಸ್ 2027ನೇ ಹಣಕಾಸು ವರ್ಷದಲ್ಲಿ ವಿಶೇಷ ನೇಮಕಾತಿ ಡ್ರೈವ್ ಮೂಲಕ 20,000 ಹೊಸ ಪದವೀಧರರನ್ನು ಉದ್ಯೋಗಕ್ಕೆ ಸೇರಿಸಿಕೊಳ್ಳುವುದಾಗಿ ಸಿಇಒ ಸಲೀಲ್ ಪರೇಖ್ ಘೋಷಿಸಿದ್ದಾರೆ. ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಶೇಕಡ 72ರಷ್ಟು ಜನರು 2026ರಲ್ಲಿ ಹೊಸ ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಆದರೆ ತಂತ್ರಜ್ಞಾನದ ವೇಗದ ಬದಲಾವಣೆಗೆ ತಕ್ಕಂತೆ ಬೇಕಾದ ಕೌಶಲ್ಯಗಳ ಕೊರತೆ (38%) ಮತ್ತು ಇಂದಿನ ಹೆಚ್ಚುತ್ತಿರುವ ಪೈಪೋಟಿಯ ನಡುವೆ ತಾವು ಹೇಗೆ ಎದ್ದು ಕಾಣಬಹುದು (37%) ಎಂಬುದರ ಬಗ್ಗೆ ಮೂರನೇ ಒಂದ ಕ್ಕಿಂತ ಹೆಚ್ಚು ಮಂದಿ ತಾವು ಸಿದ್ಧರಾಗಿಲ್ಲ ಎಂಬ ಭಾವನೆ ಹೊಂದಿದ್ದಾರೆ
KEA Recruitment Exam: ಕೃಷಿ ಮಾರುಕಟ್ಟೆ ಇಲಾಖೆ, ಬಿಡಿಎ, ಬಿಡಬ್ಲ್ಯುಎಸ್ಎಸ್ಬಿ, ಕೆಕೆಆರ್ಟಿಸಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಗ್ರೂಪ್-ಸಿ ಹುದ್ದೆಗಳಿಗೆ ಜ.25ರಂದು ನೇಮಕಾತಿ ಪರೀಕ್ಷೆ ನಡೆಯಲಿದೆ.
KEA Exam Answer Key released: ರಾಜ್ಯದ ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ.
ಭಾರತದಲ್ಲಿ 84%¹ ವೃತ್ತಿಪರರು ತಾವು ಹೊಸ ಉದ್ಯೋಗ ಹುಡುಕಲು ಸಿದ್ಧರಿಲ್ಲ ಎಂದು ಭಾವಿಸು ತ್ತಾರೆ. ಆದರೂ 72%² ಮಂದಿ 2026ರಲ್ಲಿ ಹೊಸ ಹುದ್ದೆಗಾಗಿ ಹುಡುಕಾಟ ನಡೆಸಿರುವುದಾಗಿ ಹೇಳು ತ್ತಾರೆ ಎಂದು ಲಿಂಕ್ಡ್ ಇನ್ ತನ್ನ ನೂತನ ವರದಿಯಲ್ಲಿ ತಿಳಿಸಿದೆ. ಈ ಬದಲಾವಣೆಯು ನೇಮಕಾತಿ ಪ್ರಕ್ರಿಯೆ ಯಲ್ಲಿ ಎಐ ಬಳಕೆ ಹೆಚ್ಚಳ, ಇಂದಿನ ಉದ್ಯೋಗಗಳಿಗೆ ಬೇಕಾದ ಕೌಶಲ್ಯಗಳಲ್ಲಿ ಆಗಿರುವ ಬದಲಾವಣೆ ಮತ್ತು ಹೆಚ್ಚು ಸ್ಪರ್ಧಾತ್ಮಕವಾದ, ಬಹಳ ಎಚ್ಚರಿಕೆಯಿಂದ ಆರಿಸಿಕೊಳ್ಳುವ ಉದ್ಯೋಗ ಮಾರುಕಟ್ಟೆಯ ಕಾರಣಗಳಿಂದ ಆಗಿದೆ.
Ayatollah Khamenei: ಇರಾನ್ನಲ್ಲಿ ಅಯತೊಲ್ಲಾ ಅಲ್ ಖಮೇನಿ ಆಡಳಿತದ ವಿರುದ್ಧ ಜನರ ಆಕ್ರೋಶ ದಿನೇ ದಿನೆ ಹೆಚ್ಚುತ್ತಿದ್ದು, ಪ್ರತಿಭಟನೆ, ಅಶಾಂತಿ ಮತ್ತು ರಾಜಕೀಯ ಬಿಕ್ಕಟ್ಟು ತೀವ್ರಗೊಳ್ಳುತ್ತಿವೆ. ಪರಿಸ್ಥಿತಿ ಇನ್ನೂ ಬಿಗಡಾಯಿಸುತ್ತಿದೆ. ಪ್ರತಿಭಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದು, 2,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ನೀವು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ 10ನೇ ತರಗತಿ ಉತ್ತೀರ್ಣರಾಗಿದ್ದು, ಆಕರ್ಷಕ ಸಂಬಳದ ಉದ್ಯೋಗಾವಕಾಶಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಸುವರ್ಣವಾಕಾಶ. ವಿಜಯಪುರ ಸೈನಿಕ ವಸತಿ ಶಾಲೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ, ಸ್ಕ್ರೀನಿಂಗ್ ಟೆಸ್ಟ್ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16.
ಭಾರತದ ಪ್ರಮುಖ PSU ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಒಟ್ಟು 501 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ನೀವು ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಆಗಿ, ಬ್ಯಾಂಕಿಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅಪ್ರೆಂಟಿಸ್ ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆ ಕುರಿತಾದ ಹೆಚ್ಚಿನ ಮಾಹಿತಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 2025, ಆಗಿದೆ.
23 ಅಂಗನವಾಡಿ ಕಾರ್ಯಕರ್ತೆ ಮತ್ತು 204 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ನಡೆಯಲು ಅಧಿಸೂಚನೆ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಉದ್ಯೋಗಾವಕಾಶವಿದೆ.