ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕಲಬುರಗಿ
Dr. Sharanabasappa Appa: ಕಲಬುರಗಿಯಲ್ಲಿ ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ

ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ

Dr. Sharanabasappa Appa: ಅಂತ್ಯ ಸಂಸ್ಕಾರಕ್ಕೂ ಮುನ್ನ ಶರಣಬಸಪ್ಪ ಅಪ್ಪ ಅವರಿಗೆ ಸರ್ಕಾರದಿಂದ ಗೌರವ ಸಲ್ಲಿಸಲಾಯಿತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಶಿವಾನುಭವ ಮಂಟಪದ ಮುಂದೆ ಪೊಲೀಸರಿಂದ ಗೌರವ ಸಲ್ಲಿಕೆಯಾಯಿತು. ವಿವಿಧ ಗಣ್ಯರು ಸೇರಿ ಸಾವಿರಾರು ಭಕ್ತರರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

Dr Sharanabasappa Appa: ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ; ಅಂತ್ಯಕ್ರಿಯೆ ಯಾವಾಗ?

ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಕಲಬುರಗಿಯ ಮಹಾದಾಸೋಹಿ ಡಾ. ಶರಣಬಸಪ್ಪ ಅಪ್ಪ (Sharanabasappa Appa) ಲಿಂಗೈಕ್ಯರಾಗಿದ್ದಾರೆ. ಪೂಜ್ಯ ಡಾ. ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದ ದಾಸೋಹ ಮಹಾಮನೇಯ 8ನೇ ಪಿಠಾಧಿಪತಿ ಆಗಿದ್ದರು. ಅಂತಿಮ ವಿಧಿವಿಧಾನದ ಬಳಿಕ 9ನೇ ಪೀಠಾಧಿಪತಿಗೆ ಅಧಿಕಾರ ಹಸ್ತಾಂತರವಾಗಲಿದೆ.

Dr. Sharanabasappa Appa:  ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಸಿಎಂ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಇಹಲೋಕ ತ್ಯಜಿಸಿದ್ದಾರೆ.

Sharanabasappa Appa: ಶೈಕ್ಷಣಿಕ ಕ್ರಾಂತಿಯ ಹರಿಕಾರ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

Kalaburagi News: ಕಲಬುರಗಿಯ ಶರಣ ಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಗುರುವಾರ (ಆಗಸ್ಟ್‌ 14) ಲಿಂಗೈಕ್ಯರಾದರು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Raksha Bandhan: ತಂಗಿಯ ಆಸೆ; 41 ಕಿ.ಮೀ ನಡೆದುಕೊಂಡೇ ಹೋಗಿ ರಾಖಿ ಕಟ್ಟಿಸಿಕೊಂಡ ಅಣ್ಣ!

ತಂಗಿಯ ಆಸೆ; 41 ಕಿ.ಮೀ ನಡೆದುಕೊಂಡೇ ಹೋಗಿ ರಾಖಿ ಕಟ್ಟಿಸಿಕೊಂಡ ಅಣ್ಣ!

Kalaburagi News: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಿಂದ ಆಲಮೇಲದಲ್ಲಿರುವ ತಂಗಿ ಮನೆಗೆ ಸಹೋದರ ನಡೆದುಕೊಂಡು ಹೋಗಿ ರಾಖಿ ಕಟ್ಟಿಸಿಕೊಂಡಿದ್ದಾನೆ. ನಡೆದುಕೊಂಡು ಬಂದು ರಾಖಿ ಕಟ್ಟಿಸಿಕೊಳ್ಳಬೇಕು ಎಂದು ಭಾಗೀಶ್ ತಂಗಿ ಆಸೆ ಪಟ್ಟಿದ್ದರಿಂದ ಯುವಕ ತಂಗಿಯ ಆಸೆ ಪೂರೈಸಿದ್ದಾನೆ.

Kalaburagi News: ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್; ಮೇಯರ್ ಆಗಿ ವರ್ಷಾ ಜಾನೆ, ಉಪಮೇಯರ್ ಆಗಿ ತೃಪ್ತಿ ಅಲ್ಲದ್ ಆಯ್ಕೆ

ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್

Kalaburagi News: ಕಲಬುರಗಿ ಮಹಾನಗರ ಪಾಲಿಕೆ 23ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗದ್ದುಗೆಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ವರ್ಷಾ ಜಾನೇ ಮೇಯರ್ ಆಗಿ, ತೃಪ್ತಿ ಅಲ್ಲದ್ (ಲಾಖೆ) ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kalaburagi News: ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರು ಸಾವು

ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರು ಸಾವು

Alcohol Addiction: ಕುಡಿತದ ಚಟ ಬಿಡಿಸುತ್ತೇನೆ ಎಂದು ಸಾಯಪ್ಪ ಮುತ್ಯಾ ಎಂಬಾತ ಮದ್ಯ ವ್ಯಸನಿಗಳ ಮೂಗಿನಲ್ಲಿ ನಾಟಿ ಔಷಧಿ ಹಾಕಿದ್ದರು. ಸಾಯಪ್ಪ ಮುತ್ಯಾ ನೀಡಿದ ಔಷಧಿಯಿಂದ ಲಕ್ಷ್ಮೀ ಹಾಗೂ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

Love Jihad: ಮುಸ್ಲಿಂ ಹುಡುಗನ ಜೊತೆ ಜೈನ ಹುಡುಗಿ ನಾಪತ್ತೆ, ʼಲವ್‌ ಜಿಹಾದ್‌ʼ ಎಂದು ದೂರು

ಮುಸ್ಲಿಂ ಹುಡುಗನ ಜೊತೆ ಜೈನ ಹುಡುಗಿ ನಾಪತ್ತೆ, ʼಲವ್‌ ಜಿಹಾದ್‌ʼ ದೂರು

Kalaburagi News: ಮುಸ್ಲಿಂ ಯುವಕ ಮಶಾಕ್ ಎಂಬಾತನ ವಿರುದ್ಧ ಲವ್ ಜಿಹಾದ್‌ ಆರೋಪ ಕೇಳಿ ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೊಬ್ಬುರ ಗ್ರಾಮದ ಯುವತಿಯನ್ನು ಅದೇ ಗ್ರಾಮದ ಡ್ರೈವರ್ ಮಶಾಕ್ ಎಂಬಾತ ಪ್ರೀತಿ- ಪ್ರೇಮದ ಹೆಸರಲ್ಲಿ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

KSRTC Strike: ಸಾರಿಗೆ ಮುಷ್ಕರ: ಕಲಬುರಗಿಯಲ್ಲಿ ಜನರಿಗೆ ತಟ್ಟಿದ ಬಿಸಿ; ವಿದ್ಯಾರ್ಥಿಗಳು, ನೌಕರರ ಪರದಾಟ

ಸಾರಿಗೆ ಮುಷ್ಕರ: ಕಲಬುರಗಿಯಲ್ಲಿ ಜನರಿಗೆ ತಟ್ಟಿದ ಬಿಸಿ; ಪ್ರಯಾಣಿಕರ ಪರದಾಟ

Kalaburagi: ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳಗಿನ ಜಾವದಿಂದಲೇ ಎಂದಿನಂತೆ ಪ್ರಯಾಣಿಕರು ಆಗಮಿಸಿದರು. ಆದರೆ, ನಮ್ಮ ಬೇಡಿಕೆ ಈಡೇರುವವರೆಗೂ ನಾವು ಬಸ್ ಹತ್ತುವುದಿಲ್ಲ ಎಂದು ನೌಕರರು ಪಟ್ಟು ಹಿಡಿದರು. ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮನವೊಲಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

Self Harming: ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ

ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ

Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Physical Abuse: ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ; ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

Kalaburagi News: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪರಿಚಯಸ್ಥ ಸಿಬ್ಬಂದಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Kalaburgi News: ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ; ಕುಟುಂಸ್ಥರ ಆಕ್ರೋಶ

ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ

ರಾಜ್ಯದಲ್ಲಿ ಈ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿತ್ತು. ಇದೀಗ ಕಲಬುರ್ಗಿಯಲ್ಲಿ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

Kalaburagi News: ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

Kalaburagi News: ಉಸಿರಾಟದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Viral News: ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

Kalaburagi: ಈಕೆ ಪರೀಕ್ಷೆ ಬರೆಯುವುದಕ್ಕಾಗಿ, ಉಕ್ಕಿ ಹರಿಯುತ್ತಿದ್ದ ನದಿಯನ್ನೇ ಪ್ರಾಣದ ಹಂಗು ತೊರೆದು ದಾಟಿ ಹೋಗಿದ್ದಾಳೆ. ಆಕೆಗೆ ಆಕೆಯ ತಂದೆ ನೆರವಾಗಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್‌ (Viral news) ಆಗಿವೆ.

Kalaburagi News: ಸೋಶಿಯಲ್‌ ಮೀಡಿಯಾದಲ್ಲಿ ಫೋಟೊ ವೈರಲ್‌; ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಯುವಕನ ಕಿರುಕುಳ; ಡ್ಯಾಂ ಹಿನ್ನೀರಿಗೆ ಜಿಗಿದು ಯುವತಿ ಆತ್ಮಹತ್ಯೆ!

Kalaburagi News: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಘಟನೆ ನಡೆದಿದೆ. ಯುವತಿ ಜತೆಗಿರುವ ಫೋಟೊಗಳನ್ನು ಯುವಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ. ಇದರಿಂದ ಯುವತಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Kalaburagi News: ಸಿಬ್ಬಂದಿಯಿಂದ ಶಾಲೆಯಲ್ಲೇ ಮಸಾಜ್‌ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ; ಅಮಾನತಿಗೆ ಆಗ್ರಹ

ಸಿಬ್ಬಂದಿಯಿಂದ ಮಸಾಜ್‌ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ!

Kalaburagi News: ಕಲಬುರಗಿಯ ಯಡ್ರಾಮಿ ಪಟ್ಟಣದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಸ್ವೀಪರ್ ಆಗಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಕೈಯಲ್ಲಿ ಪ್ರತಿನಿತ್ಯ ಮಸಾಜ್ ಮಾಡಿಸಿಕೊಂಡು ಕಾಲಹರಣ ಮಾಡುತ್ತಿರುವ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

Theft case: ಕಲಬುರಗಿಯಲ್ಲಿ ಹಾಡಹಗಲೇ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್ ಕದ್ದ ಕಳ್ಳರು!

ಕಲಬುರಗಿಯಲ್ಲಿ ಹಾಡಹಗಲೇ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್ ಕದ್ದ ಕಳ್ಳರು!

Theft case: ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬಳಿಯ ನಾಗಾರ್ಜುನ ಬಾರ್ ಬಳಿ ಕಳ್ಳತನ ನಡೆದಿದೆ. ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿದೆ. ಕಳ್ಳರ ಕೈ ಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalaburagi News: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 25 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಾಲೆಯಲ್ಲಿ ಬಿಸಿಯೂಟ ಸೇವಿಸಿ 25 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Kalaburagi News: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಾರಡಗಿ ಎಸ್‌.ಎ. ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ ವಾಂತಿ, ಭೇದಿಯಾಗಿ ಅಸ್ವಸ್ಥರಾದ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Drugs Case: ಡ್ರಗ್ಸ್ ಸಾಗಾಟ ಆರೋಪ; ಕಾಂಗ್ರೆಸ್ ಮುಖಂಡನ ಬಂಧನ

ಮಾದಕ ವಸ್ತುಗಳ ಸಾಗಾಟ; ಕಾಂಗ್ರೆಸ್ ಮುಖಂಡನ ಬಂಧನ

ಮಾದಕದ್ರವ್ಯ ಸಾಗಾಣೆ ಆರೋಪದಲ್ಲಿ (Drugs Case) ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ (Lingaraj Kanni) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲ್ ಇತ್ತು ಎನ್ನಲಾಗಿದೆ.

Kalaburagi Robbery case: ಕಲಬುರಗಿ ಚಿನ್ನದ ಅಂಗಡಿ ದರೋಡೆ ಪ್ರಕರಣ; ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆ

ಚಿನ್ನದ ಅಂಗಡಿ ದರೋಡೆ ಕೇಸ್‌; ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆ

Kalaburagi Robbery case: ಕಲಬುರಗಿಯಲ್ಲಿ ದರೋಡೆಗೂ ಮೊದಲು ನಾಲ್ಕು ಜನರ ಗ್ಯಾಂಗ್ ಆಟೋ‌ ಮೂಲಕ ಸರಾಫ್ ಬಜಾರ್‌ವರೆಗೆ ಆಗಮಿಸಿ, ದರೋಡೆ ಬಳಿಕ ಬ್ರಹ್ಮಪೂರ್ ಪೊಲೀಸ್ ಠಾಣೆವರೆಗೆ ಬಿಂದಾಸಾಗಿ ನಡೆದುಕೊಂಡೇ ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Kalaburagi Robbery case: ಕಲಬುರಗಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 3 ಕೆಜಿ ಚಿನ್ನಾಭರಣ ದರೋಡೆ; ಮಾಲೀಕನ ತಲೆಗೆ ಗನ್‌ ಇಟ್ಟು ಕೃತ್ಯ!

ಕಲಬುರಗಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 3 ಕೆಜಿ ಚಿನ್ನಾಭರಣ ದರೋಡೆ

Kalaburagi Robbery case: ನಾಲ್ವರು ದುಷ್ಕರ್ಮಿಗಳಿಂದ ಚಿನ್ನಾಭರಣ ದರೋಡೆ ನಡೆದಿದೆ. ತಲೆಗೆ ಕ್ಯಾಪ್​​, ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Kalaburagi Stampede: ಗುರುಪೂರ್ಣಿಮೆ ಪ್ರಯುಕ್ತ ಕಲಬುರಗಿ ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ನೂಕು ನುಗ್ಗಲು; ಕಾಲ್ತುಳಿತಕ್ಕೆ ಮಹಿಳೆ ಬಲಿ?

ಕಲಬುರಗಿ ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ; ಮಹಿಳೆ ಬಲಿ?

Kalaburagi News: ಗುರು ಪೂರ್ಣಿಮೆ ಪವಿತ್ರ ದಿನ (ಜು. 10) ಗಾಣಗಾಪುರದ ದತ್ತಾತ್ರೇಯ ದೇವರ ದರ್ಶನ ಪಡೆಯಲು ಆಗಮಿಸಿದ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಮೂಲದ ಕಲಾವತಿ (50) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

Self Harming: ತಾಯಿಯನ್ನು ಬಿಟ್ಟು ವಸತಿ ನಿಲಯದಲ್ಲಿ ಇರಲಾರದೆ ಆತ್ಮಹತ್ಯೆಗೆ ಶರಣಾದ ಬಾಲಕ; ಕಲಬುರಗಿಯಲ್ಲೊಂದು ಹೃದಯ ವಿದ್ರಾವಕ ಘಟನೆ

ವಸತಿ ನಿಲಯದಲ್ಲಿ ಇರಲಾರದೆ ಆತ್ಮಹತ್ಯೆಗೆ ಶರಣಾದ ಬಾಲಕ

ತನ್ನ ಇಚ್ಛೆಗೆ ವಿರುದ್ಧವಾಗಿ ವಸತಿ ನಿಲಯಕ್ಕೆ ಸೇರಿಸಿದ್ದರಿಂದ ಮನನೊಂದು ಬಾಲ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಂದಿರಾ ಗಾಂಧಿ ರೆಸಿಡೆನ್ಶಿಯಲ್‌ ಶಾಲೆಯಲ್ಲಿ 7ನೇ ತರಗತಿಯ ಅಡ್ಮಿಶನ್ ಮಾಡಿಸಿದ್ದಕ್ಕೆ ವಿದ್ಯಾರ್ಥಿ ನಾರಾಯಣ ರಾಠೋಡ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Kalaburagi News: ಸಿಸಿ ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಕಮಿಷನ್‌ಗೆ ಬೇಡಿಕೆ; ಇಬ್ಬರು ಅಧಿಕಾರಿಗಳ ಅಮಾನತು

ಕಾಮಗಾರಿ ಬಿಲ್ ನೀಡಲು ಕಮಿಷನ್‌ಗೆ ಬೇಡಿಕೆ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

Kalaburagi News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಸಿಸಿ ರಸ್ತೆಯ ಕಾಮಗಾರಿಯ ಬಿಲ್ ಮಾಡಲು ಕಮಿಷನ್ ಬೇಡಿಕೆಯಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Loading...