ಪೇದೆ ರಾಜಶೇಖರ್ ವಿರುದ್ಧ ಎರಡು ಪ್ರಕರಣ ದಾಖಲು
ರಾಜಶೇಖರ್ ಈ ಹಿಂದೆ ಗೃಹಿಣಿಯ ಮನೆಗೆ ತೆರಳಿ ಕಿರುಕುಳ ನೀಡಿದ್ದಾನೆ ಎಂಬ ದೂರು ಠಾಣೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳು ಶಿಸ್ತು ಕ್ರಮ ಕೈಗೊಂಡು ಕೆಲ ದಿನಗಳ ಹಿಂದೆ ಆತನನ್ನು ಚಿಂಚೋಳಿ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದರು. ಗೃಹಿಣಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಆಕ್ರೋಶಗೊಂಡು ಪಿಎಸ್ಐ ಅವರ ಕಾರಿಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗುತ್ತಿದೆ.