ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಲಬುರಗಿ

ಕಲಬುರಗಿ: ಸ್ಟಾರ್‌ ಏರ್‌ʼಗೆ ಭರ್ಜರಿ ಸ್ಪಂದನೆ

ಕಲಬುರಗಿ: ಸ್ಟಾರ್‌ ಏರ್‌ʼಗೆ ಭರ್ಜರಿ ಸ್ಪಂದನೆ

ಕಳೆದ ಒಂದು ತಿಂಗಳಲ್ಲಿ ಕಲಬುರಗಿ-ಬೆಂಗಳೂರು ನಡುವೆ ಒಟ್ಟು 60 ವಿಮಾನ ಟ್ರಿಪ್‌ಗಳು ನಡೆದಿವೆ. ಬೆಂಗಳೂರಿನಿಂದ ಕಲಬುರಗಿಗೆ 2596 ಮಂದಿ ಆಗಮಿಸಿದ್ದರೆ, ಕಲಬುರಗಿಯಿಂದ ಬೆಂಗಳೂರಿಗೆ 2774 ಮಂದಿ ಪ್ರಯಾಣಿಸಿದ್ದಾರೆ. ಹಲವು ದಿನಗಳಲ್ಲಿ ವಿಮಾನಗಳು ಶೇ.100ರಷ್ಟು ಭರ್ತಿಯಾಗಿ ಸಂಚರಿಸಿರುವುದು ಈ ಮಾರ್ಗದ ಅಗತ್ಯವನ್ನು ಸಾಬೀತುಪಡಿಸಿದೆ.

Kalaburagi Jail Incident: 40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ

40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ

ಮಂಗಳವಾರ ನಸುಕಿನ ಜಾವ ಜೈಲಿನ ಕಬ್ಬಿಣದ ಕಂಬಿ ಕತ್ತರಿಸಿ, 20 ಅಡಿ ಎತ್ತರದ ಗೋಡೆ ಹಾರಿ ಎಸ್ಕೇಪ್ ಆಗಿದ್ದ ಮೂವರ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಶೂಟೌಟ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಪೋಕ್ಸೋ ಮತ್ತು ಕೊಲೆ ಪ್ರಕರಣದಂತಹ ಗಂಭೀರ ಅಪರಾಧ ಹಿನ್ನೆಲೆಯುಳ್ಳ ಮಸ್ತಾನ್ ಮತ್ತು ಸಾಗರ್ ಎಂಬ ಇಬ್ಬರು ಕೈದಿಗಳು ಇನ್ನೂ ಮುಕ್ತವಾಗಿ ತಿರುಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

Kalaburagi Central Jail: ಕಲಬುರಗಿ ಕೇಂದ್ರ ಕಾರಾಗೃಹದಿಂದ ಸಜಾ ಅಪರಾಧಿಗಳು ಎಸ್ಕೇಪ್ ಪ್ರಕರಣ: ಬಸ್‌ನಲ್ಲಿ ಪರಾರಿಯಾಗುತ್ತಿದ್ದ ಕೈದಿ ಹುಮನಾಬಾದ್‌ನಲ್ಲಿ ವಶಕ್ಕೆ!

ಬಸ್‌ನಲ್ಲಿ ಪರಾರಿಯಾಗುತ್ತಿದ್ದ ಕೈದಿ ಹುಮನಾಬಾದ್‌ನಲ್ಲಿ ವಶಕ್ಕೆ!

ಸೋಮವಾರ ಮಧ್ಯರಾತ್ರಿ ಕಲಬುರಗಿ ಜೈಲಿನಿಂದ ಮೂವರು ಕೈದಿಗಳು ನಾಪತ್ತೆಯಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ತೀವ್ರ ಶೋಧ ಕಾರ್ಯ ಕೈಗೊಂಡಿದ್ದರು. ಈ ವೇಳೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸಂತೋಷ್, ಕಲಬುರಗಿ ಕಡೆಯಿಂದ ಬೀದರ್ ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿರುವ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

Vishwavani Impact: ‘ವಿಶ್ವವಾಣಿ’ ವರದಿಗೆ ಎಚ್ಚೆತ್ತುಕೊಂಡ ಜೆಸ್ಕಾಂ: ಮಾಗಣಗೇರಿ ಗ್ರಾಮದ ಟ್ರಾನ್ಸ್ ಫಾರ್ಮರ್ ದುರಸ್ತಿ

‘ವಿಶ್ವವಾಣಿ’ ವರದಿಗೆ ಎಚ್ಚೆತ್ತುಕೊಂಡ ಜೆಸ್ಕಾಂ

ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ತೀವ್ರ ಪರದಾಟ ಸೃಷ್ಟಿಯಾಗಿತ್ತು. ಅಲ್ಲದೆ ಕೃಷಿ ಪಂಪ್‌ಸೆಟ್‌ಗಳು ಸ್ಥಗಿತ ಗೊಂಡಿದ್ದರಿಂದ ಕೈಗೆ ಬಂದ ಬೆಳೆಗಳು ಒಣಗುವ ಸ್ಥಿತಿ ತಲುಪಿದ್ದವು. ರೈತರು ಮತ್ತು ಗ್ರಾಮಸ್ಥರ ಈ ದಾರುಣ ಸ್ಥಿತಿಯ ಕುರಿತು ‘ವಿಶ್ವವಾಣಿ’ ಪತ್ರಿಕೆಯಲ್ಲಿ ಶನಿವಾರ ‘ಮಾಗಣಗೇರಿ ಯಲ್ಲಿ ವಿದ್ಯುತ್ ವ್ಯತ್ಯಯ, ಕ್ರಮಕ್ಕೆ ಒತ್ತಾಯ’ ಎಂದು ಸವಿಸ್ತಾರವಾದ ವಿಶೇಷ ವರದಿ ಪ್ರಕಟ ವಾಗಿತ್ತು.

Bidadi Township: ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ ಆಗ್ರಹ

BY Vijayendra: ರಾಜ್ಯದ ಮುಖ್ಯಮಂತ್ರಿಗಳಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಕರ್ತವ್ಯ ಅವರ ಮೇಲಿದೆ. ದಬ್ಬಾಳಿಕೆ ಮಾಡಲು ನೀವು ರಾಜ್ಯದ ಮುಖ್ಯಮಂತ್ರಿಗಳಾಗಿಲ್ಲ. ಈಗಲೂ ಕಾಲ ಮಿಂಚಿಲ್ಲ. ಜನರು ಈಗಾಗಲೇ ಬಿಡದಿ ವಿಚಾರದಲ್ಲಿ ಬೀದಿಗೆ ಇಳಿದಿದ್ದಾರೆ. ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

Kalaburagi Breaking: ಕಲಬುರಗಿ ಜೈಲಿನಿಂದ ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರಿನಲ್ಲೇ ಭದ್ರತಾ ವೈಫಲ್ಯ?

ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರಿನಲ್ಲೇ ಭದ್ರತಾ ವೈಫಲ್ಯ?

ನಗರದ ಹೊರವಲಯದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಜೈಲಿನಲ್ಲಿ ಬಿಗಿ ಭದ್ರತೆಯಿದ್ದರೂ, ಕೈದಿಗಳು ಎಸ್ಕೇಪ್ ಆಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿಟ್ಟಿದೆ. ಸ್ವತಃ ಗೃಹ ಸಚಿವರ ತವರಿನಲ್ಲೇ ಇಂತಹ ದೊಡ್ಡ ಲೋಪ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ನ ಮೌನ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಗುರುತಿಸಿದರೆ ಚಿಕಿತ್ಸೆಯಲ್ಲಿ ಯಶಸ್ಸಿನ ಸಾಧ್ಯತೆ ಹೆಚ್ಚು

ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ನ ಮೌನ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಎಂಬುದು ಬಾಯಿ, ಗಂಟಲು, ಧ್ವನಿಪೆಟ್ಟಿಗೆ (Voice Box), ಮೂಗಿನ ಒಳಭಾಗ, ಸೈನಸ್, ಲಾಲಾರಸ ಗ್ರಂಥಿಗಳು ಹಾಗೂ ತಲೆ ಮತ್ತು ಕುತ್ತಿಗೆ ಭಾಗದ ಇತರ ಅಂಗಾಂಶಗಳಲ್ಲಿ ಉಂಟಾಗುವ ವಿವಿಧ ಕ್ಯಾನ್ಸರ್‌ಗಳನ್ನು ಒಳಗೊಂಡಿರುವ ವಿಶಾಲ ಪದವಾಗಿದೆ. ಈ ಕ್ಯಾನ್ಸರ್‌ಗಳಲ್ಲಿ ಬಹುತೇಕವು ಆರಂಭಿಕ ಹಂತದಲ್ಲಿಯೇ ಪತ್ತೆಯಾದರೆ ಯಶಸ್ವಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.

ಬತ್ತಿದ ಜಲಮೂಲಗಳು: ರೈತರಲ್ಲಿ ಹೆಚ್ಚಿದ ಆತಂಕ

ಬತ್ತಿದ ಜಲಮೂಲಗಳು: ರೈತರಲ್ಲಿ ಹೆಚ್ಚಿದ ಆತಂಕ

ಬೀದರ್ ಜಿಲ್ಲೆಯ ಪ್ರಮುಖ ಕಾರಂಜಾ ಜಲಾಶಯದಲ್ಲಿ ನೀರಿನ ಮಟ್ಟ ಶೇ.59.50ಕ್ಕೆ ಕುಸಿದಿದ್ದು, ಚುಳಕಿನಾಲಾದಲ್ಲಿ ಶೇ.57.04 ರಷ್ಟಿದೆ. ಅಪ್ಪರ್ ಮುಲ್ಲಾಮಾರಿ ಜಲಾಶಯವು ಶೇ.27.64 ರಷ್ಟಕ್ಕೆ ಕುಸಿದಿರುವುದು ಆ ಭಾಗದ ರೈತರ ಕೃಷಿ ಆಧಾರಿತ ಜೀವನಕ್ಕೆ ದೊಡ್ಡ ಹೊಡೆತ ನೀಡಿದೆ. ಯಾದಗಿರಿ ಜಿಲ್ಲೆಯ ಪರಿಸ್ಥಿತಿಯಂತೂ ಅತ್ಯಂತ ಗಂಭೀರವಾಗಿದ್ದು, ಹತ್ತಿಕುಣಿ ಜಲಾಶಯದಲ್ಲಿ ಕಳೆದ ವರ್ಷ ಶೇ. 80.11 ರಷ್ಟು ನೀರಿದ್ದರೆ, ಈ ಬಾರಿ ಕೇವಲ ಶೇ.25.00 ರಷ್ಟು ಮಾತ್ರ ಇದೆ.

ಹೊಸ ನೀರು ಇಲ್ಲದೆ ಭೀಮೆ ನಿಶ್ಚಲ !

ಹೊಸ ನೀರು ಇಲ್ಲದೆ ಭೀಮೆ ನಿಶ್ಚಲ !

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಇರುವ ಭೀಮಾ ಏತ ನೀರಾವರಿ ಯೋಜನೆಯ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ ಆತಂಕಕಾರಿ ಹಂತಕ್ಕೆ ಕುಸಿದಿದೆ. 3.199 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಬ್ಯಾರೇಜ್‌ನಲ್ಲಿ ಪ್ರಸ್ತುತ ಕೇವಲ 0.270 ಟಿಎಂಸಿ ನೀರು ಮಾತ್ರ ಉಳಿದಿದ್ದು, ಜಲಾಶಯವು ಶೇ.8.53ರಷ್ಟು ಮಾತ್ರ ಭರ್ತಿಯಾಗಿದೆ.

Kalaburagi News: ಕರ್ತವ್ಯದ ವೇಳೆಯೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ!

ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಕಲಬುರಗಿ ನಗರದ ಜಗತ್ ವೃತ್ತದ ಬಳಿ ಪೊಲೀಸ್ ವಾಹನದಲ್ಲೇ ಕಾನ್‌ಸ್ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಕಲಬುರಗಿ ಸಿಎಆರ್ ವಿಭಾಗದಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಸಿಎಂಗೆ ಬಿಜೆಪಿ ನಿಯೋಗ ಮನವಿ

ಕೃಷಿ ಸಾಲ ಮನ್ನಾ, ಎಕರೆಗೆ 50 ಸಾವಿರ ಪರಿಹಾರಕ್ಕೆ ಆಗ್ರಹ

ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

KKCCI: ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ವಿಶೇಷ ‘ಬೆಳವಣಿಗೆ ಮಿಷನ್’ ಆರಂಭಿಸಿ: ಸಿಎಂಗೆ ಕೆಕೆಸಿಸಿಐ ಮನವಿ

ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ವಿಶೇಷ ‘ಬೆಳವಣಿಗೆ ಮಿಷನ್’ ಆರಂಭಿಸಿ

ಕಲ್ಯಾಣ ಕರ್ನಾಟಕ ಪ್ರವಾಸ ನಿಮಿತ್ತ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Chief Minister D K Shivkumar) ಅವರಿಗೆ ಮಂಗಳವಾರ ನಗರದ ಐವಾನ್-ಏ-ಶಾಹಿ ಅತಿಥಿ ಗೃಹದಲ್ಲಿ ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ್ ಇಂಗಿನಶೆಟ್ಟಿ ಅವರು, 18 ಪ್ರಮುಖ ಬೇಡಿಕೆಗಳನ್ನೊಳಗೊಂಡ ಜ್ಞಾಪನಾ ಪತ್ರವನ್ನು ಸಲ್ಲಿಸಿದರು

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಡಿ.ಕೆ.ಶಿವಕುಮಾರ್: ಅತಿಥಿ ಗೃಹಕ್ಕೆ ಹರಿದುಬಂದ ಜನಸಾಗರ

ರೈತರು, ಸಾರ್ವಜನಿಕರು, ಮುಖಂಡರಿಂದ ಮುಖಾಮುಖಿ ಭೇಟಿ

ಬೆಳಿಗ್ಗೆಯಿಂದಲೇ ಜಿಲ್ಲೆಯ ಮೂಲೆ ಮೂಲೆಗಳಿಂದ ಹಾಗೂ ಕಲ್ಯಾಣ ಕರ್ನಾಟಕದ ವಿವಿಧ ಭಾಗ ಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ಮತ್ತು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸರತಿಯಲ್ಲಿ ನಿಂತಿದ್ದರು. ಪ್ರತಿಯೊಬ್ಬರನ್ನೂ ಮುಖಾಮುಖಿಯಾಗಿ ಮಾತನಾಡಿಸಿದ ಮುಖ್ಯಮಂತ್ರಿಗಳು, ಅವರ ಕೈಯಿಂದಲೇ ಮನವಿ ಪತ್ರಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಸಮಾಧಾನ ದಿಂದ ಆಲಿಸಿದರು.

CM DK Shivakumar: ಕಾನೂನು ಚೌಕಟ್ಟಿನಲ್ಲಿ ಬರಗಾಲ ಪರಿಸ್ಥಿತಿ ಪರಾಮರ್ಶೆ, ಬರ ಪರಿಹಾರಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಬರ ಪರಿಹಾರಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕಲಬುರಗಿ ವಿಭಾಗದ ಪ್ರಗತಿ ಹಾಗೂ ಬರ ಪರಿಸ್ಥಿತಿಯ ಅವಲೋಕನಕ್ಕಾಗಿ ಆಗಮಿಸಿರುವ ಮುಖ್ಯ ಮಂತ್ರಿಗಳು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಸ್ವತಃ ಎಲ್ಲಾ ಜಿಲ್ಲೆಗಳ ಪ್ರವಾಸ ಕೈಗೊಂಡು ಜನರ ಹಾಗೂ ಜನಪ್ರತಿನಿಧಿಗಳ ಭೇಟಿ ಮಾಡಿ ಸ್ಥಳೀಯ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ.

RSS route march: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

Home Minister Priyank Kharge: ಆರ್‌ಎಸ್‌ಎಸ್‌ಗೆ 100 ವರ್ಷದ ಇತಿಹಾಸವಿದೆ ಎಂದು ಹೇಳಿಕೊಳ್ಳುತ್ತೀರಿ. ಆದರೆ ನಿಮ್ಮ ಸಂಘಟನೆಯ ಕಾನೂನುಬದ್ಧ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಬೇಕಾದರೆ ಸರ್ಕಾರದ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮೊಬೈಲ್ ಟಾರ್ಚ್ ಬಳಸಿ‌ ಸಾರಿಗೆ ಬಸ್ ಚಾಲನೆ; ಮೂವರು ಸಿಬ್ಬಂದಿ ಸಸ್ಪೆಂಡ್‌

ಮೊಬೈಲ್ ಟಾರ್ಚ್ ಬಳಸಿ‌ ಸಾರಿಗೆ ಬಸ್ ಚಾಲನೆ; ಮೂವರು ಸಸ್ಪೆಂಡ್‌

ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಸಮಸ್ಯೆಯಾಗಿತ್ತು. ಹೀಗಾಗಿ ಬಸ್ ನಿರ್ವಾಹಕ ಹಾಗೂ ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲೇ ಬಸ್ ಚಿಂಚೋಳಿ ತಲುಪಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ, ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.

ಹೆಡ್‌ಲೈಟ್‌ ಇಲ್ಲದೆ ಮೊಬೈಲ್‌ ಟಾರ್ಚ್‌ನಲ್ಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ಚಾಲನೆ; ವಿಡಿಯೋ ವೈರಲ್‌

ಹೆಡ್‌ಲೈಟ್‌ ಇಲ್ಲದೆ ಮೊಬೈಲ್‌ ಟಾರ್ಚ್‌ನಲ್ಲೇ ಸಾರಿಗೆ ಬಸ್‌ ಚಾಲನೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)ಕ್ಕೆ ಸೇರಿದ ಬಸ್​ವೊಂದನ್ನು ಹೆಡ್​​ಲೈಟ್​​ಗಳು ಕಾರ್ಯನಿರ್ವಹಿಸದ ಸ್ಥಿತಿಯಲ್ಲೇ ಚಲಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ, ಬಸ್ ನಿರ್ವಾಹಕ ಕೈಯಲ್ಲಿ ಮೊಬೈಲ್ ಫೋನ್ ಹಿಡಿದು ಟಾರ್ಚ್ ಹಾಕುವ ದೃಶ್ಯ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

PM Kisan: ಕಲ್ಯಾಣ ಕರ್ನಾಟಕದ ರೈತರಿಗೆ ʼಪಿಎಂ ಕಿಸಾನ್ʼ ಆಸರೆ

PM Kisan: ಕಲ್ಯಾಣ ಕರ್ನಾಟಕದ ರೈತರಿಗೆ ʼಪಿಎಂ ಕಿಸಾನ್ʼ ಆಸರೆ

2026-27ನೇ ಸಾಲಿನ 23ನೇ ಕಂತಿನಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಒಟ್ಟು 8,92,260 ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 178.45 ಕೋಟಿ ನಗದು ನೇರವಾಗಿ ಜಮೆಯಾಗಿದೆ. ಈ ಭಾಗದ ಬಹುತೇಕ ರೈತರು ಮಳೆ ಆಧಾರಿತ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ಪ್ರಸ್ತುತ ಎಲ್‌ನಿನೋ ಪರಿಣಾಮ ದಿಂದಾಗಿ ಮುಂಗಾರು ಮಳೆ ವಿಳಂಬವಾಗಿದ್ದು, ಬಿತ್ತನೆಯ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಕೃಷಿ ವೆಚ್ಚ ರೈತರಿಗೆ ಹೊರೆಯಾಗಿತ್ತು

Karnataka Weather: ಇಂದು ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದ್ದಾನೆ ವರುಣ!

ಇಂದು ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

Karnataka Weather Report: ಜೂನ್‌ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Kalaburagi Transport App: ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App

ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App

ಸಾರ್ವಜನಿಕರಿಗೆ ನಿಖರ ಮಾರ್ಗಸೂಚಿಯಾಗಿದ್ದ ಈ ಹೈಟೆಕ್ ಆಪ್ ತಾಂತ್ರಿಕ ದೋಷ ಹಾಗೂ ಅಧಿಕಾರಿ ಗಳ ಬೇಜವಾಬ್ದಾರಿಯಿಂದಾಗಿ ಸ್ಥಗಿತಗೊಂಡಿದ್ದು, ಪ್ರತಿನಿತ್ಯ ಬಸ್‌ಗಳನ್ನೇ ನೆಚ್ಚಿಕೊಂಡಿರುವ ಸಾವಿ ರಾರು ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ತೀವ್ರ ತೊಂದರೆ ಅನುಭವಿಸು ವಂತಾಗಿದೆ.

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಕಲ್ಯಾಣ ಕರ್ನಾಟಕಕ್ಕೆ ಸಿಗಲಿದೆ ಹೈಸ್ಪೀಡ್ ರೈಲು ಸಂಪರ್ಕ

ಕಲ್ಯಾಣ ಕರ್ನಾಟಕಕ್ಕೆ ಸಿಗಲಿದೆ ಹೈಸ್ಪೀಡ್ ರೈಲು ಸಂಪರ್ಕ

ಸುಮಾರು 2 ಲಕ್ಷ ಕೋಟಿ ರುಪಾಯಿ ಬಜೆಟ್ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರೈಲು ಮಾರ್ಗ 671 ಕಿ.ಮೀ. ಉದ್ದ ಇರಲಿದೆ. ಮಾರ್ಗವು ಜಾರಿಗೆ ಬಂದರೆ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮುಂಬೈ ಮತ್ತು ಹೈದರಾಬಾದ್ ನಗರಗಳು ಅತ್ಯಂತ ಸಮೀಪವಾಗಲಿವೆ. ಸದ್ಯ 2 ಮಹಾನಗರಗಳಿಗೆ ಕಲಬುರಗಿ ಯಿಂದ ತಲುಪಲೂ ಸುದೀರ್ಘ ಸಮಯ ಬೇಕಾಗುತ್ತಿದ್ದು, ಬುಲೆಟ್ ಟ್ರೇನ್ ಆರಂಭ ವಾದರೆ ಕಲಬುರಗಿಯಿಂದ ಕೇವಲ ಎರಡು ತಾಸಿನಲ್ಲಿ ಮುಂಬೈ ನಗರವನ್ನು ತಲುಪಬಹುದಾಗಿದೆ.

Loading...