ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಲಬುರಗಿ

Viral Video: ಬಿಜೆಪಿ ಪ್ರತಿಭಟನೆ ವೇಳೆ ಮಾಜಿ ಶಾಸಕನ ದರ್ಪ; ಸ್ಕೂಟರ್ ಸವಾರನ ಹೆಲ್ಮೆಟ್ ಕಿತ್ತು ನೆಲಕ್ಕೆ ಎಸೆದ ರಾಜ್‌ಕುಮಾರ್ ಪಾಟೀಲ್

ಸ್ಕೂಟರ್ ಸವಾರನ ಹೆಲ್ಮೆಟ್ ಕಿತ್ತೆಸೆದು ನೆಲಕ್ಕೆ ಎಸೆದ ಬಿಜೆಪಿ ಮಾಜಿ ಶಾಸಕ

Rajkumar Patil Telkur Argues with Scooter Rider: ಬಿಜೆಪಿ ಪ್ರತಿಭಟನೆ ಮಧ್ಯೆ ಸ್ಕೂಟರ್ ಚಲಾಯಿಸಲು ಯತ್ನಿಸಿದ ಸವಾರನೊಬ್ಬನನ್ನು ತಡೆದ ಮಾಜಿ ಬಿಜೆಪಿ ಶಾಸಕ ರಾಜ್‌ಕುಮಾರ್ ಪಾಟೀಲ್ ತೇಲ್ಕೂರ್, ಆತನ ಹೆಲ್ಮೆಟ್ ಕಿತ್ತು ನೆಲಕ್ಕೆ ಎಸೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸದ್ಯ ಈ ಘಟನೆಯ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಧ್ಯಾತ್ಮದ ಪೀಠದಿಂದ ಶಿಕ್ಷಣದ ಪಥದವರೆಗೆ : ಅಪ್ಪನವರ ಬದುಕು, ಜ್ಞಾನ ದಾಸೋಹದ ಬೆಳಕು

ಅಪ್ಪನವರ ಬದುಕು, ಜ್ಞಾನ ದಾಸೋಹದ ಬೆಳಕು

ಕೆಲವರು ಒಂದು ಸಂಸ್ಥೆಯನ್ನು ಕಟ್ಟುತ್ತಾರೆ, ಕೆಲವರು ಒಂದು ಪೀಳಿಗೆಯನ್ನು ಕಟ್ಟುತ್ತಾರೆ. ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪ ಅವರು ಎರಡನ್ನೂ ಮಾಡಿದ ಅಪರೂಪದ ಮಹನೀಯರು. ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿ ಆಧ್ಯಾತ್ಮಿಕ ಪರಂಪರೆಯನ್ನು ಮುನ್ನಡೆಸಿದ ಅವರು, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಹಿಂದುಳಿದತನಕ್ಕೆ ಸವಾಲೆಸೆದು ಶಿಕ್ಷಣವನ್ನೇ ಸಾಮಾಜಿಕ ಬದಲಾವಣೆ ಯ ಸಾಧನವನ್ನಾಗಿ ರೂಪಿಸಿದರು.

ಕರಾವಳಿಯ ಗಂಡುಕಲೆ ಕಂಡು ಮಂತ್ರಮುಗ್ಧರಾದ ಕಲಬುರಗಿ ಜನ: ‘ಕಾಂತಾರ ಮಣಿ’ಯಲ್ಲಿ ದೈವ–ಮಾನವ ಸಂಬಂಧದ ರೋಚಕ ಅನಾವರಣ

ಕರಾವಳಿಯ ಗಂಡುಕಲೆ ಕಂಡು ಮಂತ್ರಮುಗ್ಧರಾದ ಕಲಬುರಗಿ ಜನ

ದಕ್ಷಿಣ ಕನ್ನಡ ಸಂಘ, ಹೋಟೆಲ್, ಬೇಕರಿ ಹಾಗೂ ವಸತಿಗೃಹ ಮಾಲೀಕರ ಸಂಘದ ಸಹಯೋಗಲ್ಲಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಶಿವಾನುಭವ ಮಂಟಪದಲ್ಲಿ ಯಕ್ಷಗಾನ ಆಯೋಜಿಸಲಾಗಿತ್ತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಪ್ರದರ್ಶನದಲ್ಲಿ ಕರಾವಳಿಯ ಗಂಡುಕಲೆಯ ವೈಭವವನ್ನು ಕಲಬುರಗಿ ಜನ ಕಣ್ತುಂಬಿಕೊಂಡರು.

BJP Padayatra: ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಬಿಜೆಪಿಯ ಬಳ್ಳಾರಿ ಚಲೋ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಪ್ರಿಯಾಂಕ್‌ ಖರ್ಗೆ

ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು, ಸರ್ಕಾರದೊಂದಿಗೆ ಸಂವಾದ ನಡೆಸುವುದು ಹಾಗೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದು ಪ್ರತಿಪಕ್ಷದ ಜವಾಬ್ದಾರಿಯಾಗಿದೆ. ಕೇವಲ ರಾಜಕೀಯ ಘೋಷಣೆಗಳೊಂದಿಗೆ ಪಾದಯಾತ್ರೆ ನಡೆಸುವುದರಿಂದ ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಜ್ಞಾನ ದೇಗುಲಕ್ಕೆ ಪುನಃ ಮರಳಿದ 2616 ಚಿಣ್ಣರು

ಜ್ಞಾನ ದೇಗುಲಕ್ಕೆ ಪುನಃ ಮರಳಿದ 2616 ಚಿಣ್ಣರು

ಸಮಗ್ರ ಶಿಕ್ಷಣ ಕರ್ನಾಟಕದಡಿ, 2021-22ರಿಂದ 2025-26ರವರೆಗೆ ನಡೆಸಿದ ವಿಶೇಷ ದಾಖಲಾತಿ ಹಾಗೂ ಗುರುತಿಸುವಿಕೆ ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಬಳಿಕ ಮಕ್ಕಳ ಮನೆಗಳಿಗೆ ತೆರಳಿ ಪೋಷಕರೊಂದಿಗೆ ಸಮಾಲೋಚನೆ ನಡೆಸಿ, ಶಿಕ್ಷಣದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟು, ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಲಾಗಿದೆ.

ಮಂಗಳೂರಂತೆ ಕಲಬುರಗಿಗೂ ರೈಲ್ವೆ ಜಾಲ ಬರಲಿ

ಮಂಗಳೂರಂತೆ ಕಲಬುರಗಿಗೂ ರೈಲ್ವೆ ಜಾಲ ಬರಲಿ

ಕಲಬುರಗಿ ಬೀದರ್ ರೈಲು ಮಾರ್ಗವೂ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿದೆ. ಹೀಗಾಗಿ ಕಲ್ಯಾಣ ಕರ್ನಾಟಕದ ರೈಲ್ವೆ ಜಾಲವು ಒಂದೇ ಆಡಳಿತ ಕೇಂದ್ರದಡಿ ಇಲ್ಲದೆ ಹಲವು ಕಡೆ ಚದುರಿದೆ. ಇದರ ನೇರ ಪರಿಣಾಮ ಅನುಭವಿಸುತ್ತಿರುವವರು ಸಾಮಾನ್ಯ ಪ್ರಯಾಣಿಕರು. ಉದ್ಯೋಗ, ಶಿಕ್ಷಣ, ವ್ಯಾಪಾರ, ಚಿಕಿತ್ಸೆ ಹಾಗೂ ವಲಸೆಗಾಗಿ ಪ್ರತಿನಿತ್ಯ ಸಾವಿರಾರು ಜನರು ರೈಲನ್ನೇ ಅವಲಂಬಿಸಿದ್ದಾರೆ.

Digital Arrest: ಇಡಿ, ಎನ್‌ಐಎ ಹೆಸರಿನಲ್ಲಿ ನಿವೃತ್ತ ಪ್ರಾಧ್ಯಾಪಕರಿಗೆ ವಂಚನೆ: ಡಿಜಿಟಲ್‌ ಅರೆಸ್ಟ್‌ ಮಾಡಿ ₹1.79 ಕೋಟಿ ಸೈಬರ್‌ ವಂಚನೆ

ಡಿಜಿಟಲ್‌ ಅರೆಸ್ಟ್‌ ಮಾಡಿ ₹1.79 ಕೋಟಿ ಸೈಬರ್‌ ವಂಚನೆ

ನಗರದ ಎನ್‌ಜಿಒ ಕಾಲನಿ ನಿವಾಸಿ ಹಾಗೂ ಎಚ್‌ಕೆಇ ಹೋಮಿಯೋಪಥಿಕ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಅಶೋಕ ಪಾಟೀಲ್‌ ವಂಚನೆಗೊಳಗಾದವರು. ಜು.14ರಂದು ಅವರ ಪತ್ನಿ ಅನ್ನಪೂರ್ಣ ಅವರಿಗೆ ಕರೆ ಮಾಡಿದ ವಂಚಕ, ಬಳಿಕ ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂದು ಪರಿಚಯಿಸಿ ಕೊಂಡ ಮತ್ತೊಬ್ಬ ವ್ಯಕ್ತಿ, ಮುಂಬೈನ ಕೆನರಾ ಬ್ಯಾಂಕ್‌ನಲ್ಲಿರುವ ಅಶೋಕ ಪಾಟೀಲ್‌ ಅವರ ಖಾತೆಯನ್ನು ಅಕ್ರಮ ಹಣ ವರ್ಗಾವಣೆ ಹಾಗೂ ಉಗ್ರಗಾಮಿಗಳಿಗೆ ಹಣಕಾಸು ನೆರವು ನೀಡಲು ಬಳಸಲಾಗಿದೆ ಎಂದು ಆರೋಪಿಸಿದ್ದಾನೆ.

ಬರಪೀಡಿತ ಪಟ್ಟಿಯಲ್ಲಿ ಕಲಬುರಗಿ ಕೈಬಿಟ್ಟಿರುವ ವಿಚಾರ: ವಾಸ್ತವಾಂಶ ಆಧರಿಸಿ ಶೀಘ್ರ ನಿರ್ಧಾರ, ರೈತರ ಹಿತವೇ ಸರ್ಕಾರದ ಆದ್ಯತೆ: ಸಚಿವ ಡಾ. ಅಜಯ್ ಸಿಂಗ್

ಜೇವರ್ಗಿ–ಯಡ್ರಾಮಿಯಲ್ಲಿ ಬೆಳೆಹಾನಿ ಪರಿಶೀಲಿಸಿದ ಸಚಿವ ಡಾ. ಅಜಯ್ ಸಿಂಗ್

ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕುಗಳಲ್ಲಿ ಶನಿವಾರ ಸಂಚರಿಸಿದ ಸಚಿವರು, ವಿವಿಧ ಗ್ರಾಮ ಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ಹತ್ತಿ, ಹೆಸರು ಸೇರಿದಂತೆ ವಿವಿಧ ಬೆಳೆಗಳನ್ನು ಸ್ಥಳದಲ್ಲೇ ಪರಿಶೀಲಿಸಿದರು. ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಬೆಳೆ ನಷ್ಟ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ; ಅಜ್ಮಲ್ ಗೋಳಾ 24ನೇ ಮೇಯರ್‌, ಫರ್ಹಾನಾ ಖುಸ್ರೋ ಜಾಗೀರದಾರ್ ಉಪ ಮೇಯರ್‌

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

Kalaburagi City Corporation Election: ಕಲಬುರಗಿ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಜ್ಮಲ್ ಗೋಳಾ ಅವರು 35 ಮತಗಳನ್ನು ಪಡೆದು 24ನೇ ಮೇಯರ್‌ ಆಗಿ ಆಯ್ಕೆಯಾದರೆ, ಉಪ ಮೇಯರ್‌ ಆಗಿ ಕಾಂಗ್ರೆಸ್‌ನ ಫರ್ಹಾನಾ ಖುಸ್ರೋ ಜಾಗೀರದಾರ್ ಆಯ್ಕೆಯಾಗಿದ್ದಾರೆ.

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ; ಡಿಸಿ ಕಚೇರಿ ಮುಂದೆ ರೈತರಿಂದ ರಸ್ತೆ ತಡೆ

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ

Kalaburagi News: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ 1,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಅಥವಾ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ (SKM) ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Nepal floods: ನೇಪಾಳ ಜಲಸ್ಫೋಟ; ಕಲಬುರಗಿಯ ಇಬ್ಬರು ಕನ್ನಡಿಗರ ರಕ್ಷಣೆ

ನೇಪಾಳ ಜಲಸ್ಫೋಟ; ಕಲಬುರಗಿಯ ಇಬ್ಬರು ಕನ್ನಡಿಗರ ರಕ್ಷಣೆ

Nepal Flood Live: ಭೀಕರ ಪ್ರವಾಹದಲ್ಲಿ ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಗುರುವಾರ ಮಾಹಿತಿ ನೀಡಿದ್ದಾರೆ. ಕಾಠ್ಮಂಡುವಿನಲ್ಲಿ ಮಾತನಾಡಿದ ಖನಾಲ್, ನೇಪಾಳದಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹದಿಂದಾಗಿ ಕ್ಷಣಾರ್ಧದಲ್ಲಿ ಸಾಲು ಸಾಲು ನಗರಗಳೇ ಕೊಚ್ಚಿಹೋಗಿವೆ ಎಂದರು.

IAS​ ಅಧಿಕಾರಿ ಫೌಜಿಯಾ ವಿರುದ್ಧ ಅವಹೇಳನ ಹೇಳಿಕೆ ಪ್ರಕರಣ: ಬಿಜೆಪಿ MLC ಎನ್. ರವಿಕುಮಾರ್‌ಗೆ  ಜಾಮೀನು ರಹಿತ ಬಂಧನ ವಾರಂಟ್

ಬಿಜೆಪಿ MLC ಎನ್. ರವಿಕುಮಾರ್‌ಗೆ ಜಾಮೀನು ರಹಿತ ಬಂಧನ ವಾರಂಟ್!

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

Kalaburagi Breaking: ಕಪನೂರ ಕೈಗಾರಿಕಾ ಪ್ರದೇಶದಲ್ಲಿ ದಾಲ್‌ಮಿಲ್‌ನಲ್ಲಿ ಪರವಾನಗಿ ಇಲ್ಲದೆ ಸಂಗ್ರಹ: ಅಕ್ರಮ ಯೂರಿಯಾ ದಂಧೆ ಪತ್ತೆ; 1,250 ಚೀಲ ವಶ

ಅಕ್ರಮ ಯೂರಿಯಾ ದಂಧೆ ಪತ್ತೆ; 1,250 ಚೀಲ ವಶ

ಖಚಿತ ಮಾಹಿತಿ ಹಾಗೂ ದೂರು ಆಧರಿಸಿ ಕೃಷಿ ಇಲಾಖೆ ಅಧಿಕಾರಿಗಳ ತಂಡ ದಾಲ್‌ಮಿಲ್‌ಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ, ನಿಯಮಬಾಹಿರವಾಗಿ ಸಂಗ್ರಹಿಸಿಟ್ಟಿದ್ದ ಯೂರಿಯಾ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಗೊಬ್ಬರವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗೊಬ್ಬರದ ಅಂದಾಜು ಮೌಲ್ಯ ₹3.72 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kalaburagi Bandh: ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಆಕ್ರೋಶ, ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ

ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಆಕ್ರೋಶ

ಬೆಳಗ್ಗಿನಿಂದಲೇ ಪ್ರತಿಭಟನೆಗೆ ಇಳಿದ ರೈತ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು. ಬಂದ್‌ಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್‌ಗಳ ಸಂಚಾರವೂ ಸ್ಥಗಿತಗೊಂಡಿತ್ತು.

ಕಲಬುರಗಿಯಲ್ಲಿ ಮತ್ತೊಂದು ಎಡವಟ್ಟು; ಕಂಡಕ್ಟರ್ ಬದಲು ಟಿಕೆಟ್ ವಿತರಿಸಿದ ವಿದ್ಯಾರ್ಥಿ! ಕೆಕೆಆರ್‌ಟಿಸಿ ಬಸ್‌ನ ದೃಶ್ಯ ಮೊಬೈಲ್‌ನಲ್ಲಿ ಸೆರೆ

ಕಂಡಕ್ಟರ್ ಬದಲು ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ

Kalaburagi News: ಕಲಬುರಗಿ ಸಿಟಿ ಬಸ್ ನಿಲ್ದಾಣದಿಂದ ಕಾಳಗಿಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಪ್ರಯಾಣಿಕರಿಗೆ ಟಿಕೆಟ್ ವಿತರಿಸುತ್ತಿರುವ ದೃಶ್ಯ ಪ್ರಯಾಣಿಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಸ್ ಕಾಳಗಿ ತಾಲೂಕಿನ ಡಿಪೋಗೆ ಸೇರಿದ್ದು ಎಂದು ತಿಳಿದುಬಂದಿದೆ.

ಮದ್ಯದ ಬಾಟಲ್‌ ಎದುರುಗಡೆ ಇಟ್ಟುಕೊಂಡು ‘ಯಾರಿವಳು ಯಾರಿವಳು’ ಸಾಂಗ್ ಹಾಡಿದ ಕಾವಿಧಾರಿ; ಸ್ವಾಮೀಜಿಯ ಬಿಂದಾಸ್ ವಿಡಿಯೊ ವೈರಲ್

ಮದ್ಯದ ಬಾಟಲ್‌ ಎದುರುಗಡೆ ಇಟ್ಟುಕೊಂಡು ಸಿನಿಮಾ ಗೀತೆ ಹಾಡಿದ ಸ್ವಾಮೀಜಿ

Viral Video: ಕಲಬುರಗಿಯ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಸ್ವಾಮೀಜಿ ಅವರ ವಿಡಿಯೊವೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸಿದೆ. ವೈರಲ್‌ ವಿಡಿಯೊದಲ್ಲಿ ಅವರು ಕೈಯಲ್ಲಿ ಮೈಕ್ ಹಿಡಿದು ‘ಯಾರಿವಳು ಯಾರಿವಳು’ ಎಂಬ ಸಿನೆಮಾ ಹಾಡನ್ನು ಹಾಡುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಎದುರುಗಡೆ ಮದ್ಯದ ಬಾಟಲ್‌ಗಳು ಕಾಣಿಸಿಕೊಂಡಿದೆ.

UP ATS Raid in Kalaburagi: ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶದ ಎಟಿಎಸ್

ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರು ಎಟಿಎಸ್‌ ವಶಕ್ಕೆ

Kalaburagi News: ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಉತ್ತರ ಪ್ರದೇಶ ಎಟಿಎಸ್ ತಂಡ ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿರುವ ಸಮೀರ್ ಸಲ್ಮಾನ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Gelatin Blast at Kalaburagi: ಪತ್ನಿ ನಡತೆ ಬಗ್ಗೆ ಸಂಶಯ ಪಟ್ಟು ಮನೆಯಲ್ಲೇ ಜಿಲೆಟಿನ್ ಸ್ಫೋಟ; ತಂದೆ–ಮಗಳು ಬಲಿ, ನಾಲ್ವರಿಗೆ ಗಂಭೀರ ಗಾಯ!

ಪತ್ನಿ ನಡತೆ ಬಗ್ಗೆ ಸಂಶಯ; ಜಿಲೆಟಿನ್ ಸ್ಫೋಟಕ್ಕೆ ತಂದೆ–ಮಗಳು ಬಲಿ

Kalaburagi News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ನಡತೆ ಬಗ್ಗೆ ಸಂಶಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ 15 ವರ್ಷದ ಪುತ್ರಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಂಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

Bandh: ಬೆಳೆ ವಿಮೆ ತಾರತಮ್ಯ ಖಂಡಿಸಿ ಕಾಳಗಿ ಸಂಪೂರ್ಣ ಬಂದ್: ರೈತರ ಹೋರಾಟಕ್ಕೆ ವ್ಯಾಪಾರಸ್ಥರು, ಸಾರ್ವಜನಿಕರ ಬೆಂಬಲ; ನ್ಯಾಯಯುತ ಪರಿಹಾರಕ್ಕೆ ಆಗ್ರಹ

ಬೆಳೆ ವಿಮೆ ತಾರತಮ್ಯ ಖಂಡಿಸಿ ಕಾಳಗಿ ಸಂಪೂರ್ಣ ಬಂದ್

ಬೆಳೆ ವಿಮೆ ಪಾವತಿಯಲ್ಲಿ ಅರ್ಹ ರೈತರಿಗೆ ಅನ್ಯಾಯವಾಗಿದ್ದು, ವಿಮೆ ಪಾವತಿಗೆ ಸಂಬಂಧಿಸಿದ ತಾರತಮ್ಯವನ್ನು ಸರಿಪಡಿಸಿ ನಷ್ಟಕ್ಕೊಳಗಾದ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಕೈಜೋಡಿಸಿದರು

ರಾಜ್ಯದಲ್ಲಿ ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ

Priyank Kharge: ರಾಜ್ಯದಲ್ಲಿನ ಬರದ ಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದು ಮನವರಿಕೆ‌ ಮಾಡಿಕೊಟ್ಟಿದ್ದಾರೆ. ಕೇಂದ್ರದ ಕಠಿಣ ಎನ್.ಡಿ.ಆರ್.ಎಫ್ ನಿಯಮಾವಳಿಯಿಂದ ರೈತರಿಗೆ‌ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ, ಇದನ್ನು ಸರಳಿಕರಣ ಮಾಡುವಂತೆ ರಾಜ್ಯದ ಬೇಡಿಕೆ ಇದ್ದು, ಅದನ್ನು ಕೇಂದ್ರ ಸರ್ಕಾರ ಪುರಸ್ಕರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕರುಣೆಯಿಲ್ಲದ ಬುದ್ಧಿವಂತಿಕೆ ಸಮಾಜಕ್ಕೆ ಅಪಾಯಕಾರಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಕರುಣೆಯಿಲ್ಲದ ಬುದ್ಧಿವಂತಿಕೆ ಸಮಾಜಕ್ಕೆ ಅಪಾಯ: ಮಧುಸೂದನ ಸಾಯಿ

Sadguru Sri Madhusudan Sai: ವಿದ್ಯಾಸಂಸ್ಥೆಗಳ ಮೂಲಕ ಚಾರಿತ್ರ್ಯದ ಶಕ್ತಿ ಇರುವ ದೈವೀ ಪುರುಷರನ್ನು ನಾವು ರೂಪಿಸಬೇಕು. ಶಿಕ್ಷಣ ಸುಧಾರಿಸಬೇಕಾದರೆ ಉತ್ತಮ ಶಿಕ್ಷಕರು ಬೇಕು. ಉತ್ತಮ ಶಿಕ್ಷಕರು ರೂಪುಗೊಳ್ಳಲು ಪೂರಕವಾದ ಸಂದರ್ಭ ಸಮಾಜದಲ್ಲಿ ನಿರ್ಮಾಣವಾಗಬೇಕು. ಶಿಕ್ಷಕರಿಗೆ ಉತ್ತಮ ಸಂಬಳ, ಗೌರವ ಸಿಗಬೇಕು. ಮಕ್ಕಳ ಪಾಲಿಗೆ ಶಿಕ್ಷಕರು ತಂದೆ-ತಾಯಿ ಮತ್ತು ಗುರುವೂ ಆಗಿರುತ್ತಾರೆ” ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

Afzalpur News: ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಇಬ್ಬರ ವಿರುದ್ಧ ಎಫ್‌ಐಆರ್

ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಶಾಸಕರಿಗೆ ಉದ್ದೇಶಪೂರ್ವಕವಾಗಿ ಅವಮಾನವಾಗುವ ರೀತಿಯಲ್ಲಿ sandipAfz007 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆ ಯಿಂದ ಶಾಸಕರನ್ನು ಉದ್ದೇಶಿಸಿ ಕೀಳುಮಟ್ಟದ ಹಾಗೂ ಅಶ್ಲೀಲ ಭಾಷೆಯಲ್ಲಿ ಕಾಮೆಂಟ್ ಮಾಡಲಾಗಿದೆ ಎನ್ನಲಾಗಿದೆ.

Jewargi MLA Dr. Ajay Singh: ಪಕ್ಷ ನಿಷ್ಠೆಗೆ ಫಲವಾಗಿ ಡಾ.ಅಜಯಸಿಂಗ್‌ಗೆ ಸಚಿವ ಸಂಪುಟ ಪ್ರವೇಶ

ಪಕ್ಷ ನಿಷ್ಠೆಗೆ ಫಲವಾಗಿ ಡಾ.ಅಜಯಸಿಂಗ್‌ಗೆ ಸಚಿವ ಸಂಪುಟ ಪ್ರವೇಶ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ. ಅಜಯಸಿಂಗ್ ಅವರು ಶಾಂತ, ಸಮತೋಲನದ ಹಾಗೂ ಅಭಿವೃದ್ಧಿ ಪರ ರಾಜಕಾರಣದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಏಳು-ಬೀಳುಗಳ ನಡುವೆಯೂ ಕಾಂಗ್ರೆಸ್ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ ಅವರ ನಿಷ್ಠೆಗೆ ಇದೀಗ ಸಚಿವ ಸ್ಥಾನ ರೂಪದಲ್ಲಿ ಮನ್ನಣೆ ದೊರೆತಿದೆ ಎನ್ನಲಾಗುತ್ತಿದೆ.

ಮಡಿಲು ತುಂಬಿದ ಮಮತೆ, 31 ಮಕ್ಕಳಿಗೆ ಹೊಸ ಬದುಕು

ಮಡಿಲು ತುಂಬಿದ ಮಮತೆ, 31 ಮಕ್ಕಳಿಗೆ ಹೊಸ ಬದುಕು

ದತ್ತು ಪ್ರಕ್ರಿಯೆ ಕೇವಲ ಕಾನೂನುಬದ್ಧ ಕ್ರಮವಲ್ಲ; ಅದು ಒಂದು ಮಗುವಿನ ಬದುಕನ್ನು ಮರು ರೂಪಿಸುವ ಸಾಮಾಜಿಕ ಜವಾಬ್ದಾರಿ. ಇದೇ ಉದ್ದೇಶದೊಂದಿಗೆ ಕೇಂದ್ರ ಸರ್ಕಾರದ ಕಾರಾ (CARA) ಮಾರ್ಗಸೂಚಿಯಡಿ ಜಿಲ್ಲೆಯ ಅಮೂಲ್ಯ ಶಿಶು ಗೃಹ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಪುನರ್ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿವೆ.

Loading...