40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ
ಮಂಗಳವಾರ ನಸುಕಿನ ಜಾವ ಜೈಲಿನ ಕಬ್ಬಿಣದ ಕಂಬಿ ಕತ್ತರಿಸಿ, 20 ಅಡಿ ಎತ್ತರದ ಗೋಡೆ ಹಾರಿ ಎಸ್ಕೇಪ್ ಆಗಿದ್ದ ಮೂವರ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಶೂಟೌಟ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಪೋಕ್ಸೋ ಮತ್ತು ಕೊಲೆ ಪ್ರಕರಣದಂತಹ ಗಂಭೀರ ಅಪರಾಧ ಹಿನ್ನೆಲೆಯುಳ್ಳ ಮಸ್ತಾನ್ ಮತ್ತು ಸಾಗರ್ ಎಂಬ ಇಬ್ಬರು ಕೈದಿಗಳು ಇನ್ನೂ ಮುಕ್ತವಾಗಿ ತಿರುಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.