ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Pralhad Joshi: ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಪ್ರಲ್ಹಾದ್‌ ಜೋಶಿ

ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಜೋಶಿ

ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ, ಕೇವಲ ಮತಬ್ಯಾಂಕ್‌ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Bengaluru Crime News: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ‌ ಯುವಕರ ಗಲಾಟೆ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಚಾಲಕ ಸಹಿತ ಮತ್ತೆ ಮೂವರು ವಶಕ್ಕೆ

ಬೆಂಗಳೂರು ದರೋಡೆ ಪ್ರಕರಣ; ಚಾಲಕ ಸಹಿತ ಮತ್ತೆ ಮೂವರು ವಶಕ್ಕೆ

ಬೆಂಗಳೂರು ನಡೆದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಮಹತ್ವದ ಮಾಹಿತಿ ಹೊರ ಬಿದ್ದಿದೆ. ಸಿಎಂಎಸ್‌ ವಾಹನದ ಚಾಲಕ, ಕ್ಯಾಷಿಯರ್‌ ಮತ್ತು ಗನ್‌ ಮ್ಯಾನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರು ನಡೆಸಿ ಚಾಲಕನನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ದಿದ್ದಾರೆ.

Laxmi Hebbalkar: ರಾಜ್ಯದ ಜನತೆಗೆ ಗುಡ್‌ನ್ಯೂಸ್‌; ಗ್ಯಾರಂಟಿ ಬಳಿಕ ಮತ್ತೆ 3 ದೊಡ್ಡ ಯೋಜನೆ ಘೋಷಿಸಿದ ಸರ್ಕಾರ

ಅಂಗನವಾಡಿ ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಹೆಬ್ಬಾಳ್ಕರ್

ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Basavaraj Bommai: ರಾಜ್ಯ ಸರ್ಕಾರದ ಅಧಿಕಾರ ದಾಹದಲ್ಲಿ ಜನತೆ ಅನಾಥ: ಬಸವರಾಜ ಬೊಮ್ಮಾಯಿ ಟೀಕೆ

ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆ: ಬೊಮ್ಮಾಯಿ

ರಾಜ್ಯದಲ್ಲಿ ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆಯಾಗಿದೆ. ಕುರ್ಚಿಯಲ್ಲಿ ಕೂಡಿಸಿದ ಯಜಮಾನರು ಜನರ ಬಗ್ಗೆ ಯೋಚನೆಯನ್ನೇ ಮಾಡುತ್ತಿಲ್ಲ. ಅಧಿಕಾರದ ದಾಹದಲ್ಲಿ ರಾಜ್ಯದ ಜನರನ್ನು ಅನಾಥ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿದ್ದಾರೆ.

Bhaja Mana Pre-Concert Workshop: ಪರಮ್ ಫೌಂಡೇಶನ್‌ನಿಂದ 3 ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರಕ್ಕೆ ತೆರೆ

3 ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರ ಮುಕ್ತಾಯ

Param Foundation: ಬೆಂಗಳೂರಿನ ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಪರಮ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಖ್ಯಾತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.

Basavaraj Bommai: ರಾಜ್ಯ ಸರ್ಕಾರ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ

ಇದು ರಾಜ್ಯ ಸರ್ಕಾರ ಅಲ್ಲ, ಪೋಸ್ಟ್ ಆಫೀಸ್: ಬೊಮ್ಮಾಯಿ

State Congress Government: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೆಕ್ಕೆಜೋಳ ಖರೀದಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮ್ಯಾನ್‌ ಕೆಲಸ ಮಾಡುತ್ತಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.

DK Shivakumar: ಪರಪ್ಪನ ಅಗ್ರಹಾರ ಜೈಲಿಗೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದೆ ಈ ಭೇಟಿಯ ಹಿಂದೆ?

ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದು ರಹಸ್ಯ?

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

CM Siddaramaiah: ಸಿಎಂ ಆಗಿ ನಾನೇ ಮುಂದುವರಿಯುವೆ: ಮುಖ್ಯಮಂತ್ರಿ ಬದಲಾವಣೆ ವದಂತಿ ನಿರಾಕರಿಸಿದ ಸಿದ್ದರಾಮಯ್ಯ

ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು: ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru news: ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

Death by Flex: ಜರ್ಮನಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಸ್ನೇಹಿತನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಯುವಕಮನ್ನು ಅಕ್ರಮ ಫ್ಲೆಕ್ಸ್‌ ಬಲಿ ಪಡೆದುಕೊಂಡಿದೆ. ನಿಯಮ ಮೀರಿ ರಾರಾಜಿಸುತ್ತಿರುವ ಫ್ಲೆಕ್ಸ್-‌ ಬ್ಯಾನರ್‌ಗಳ ತೆರವಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

DK Shivakumar: ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಆಲ್ ದ ಬೆಸ್ಟ್; ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರಿಗೆ ಆಲ್ ದ ಬೆಸ್ಟ್, ಹೈಕಮಾಂಡ್ ಮಾತಿಗೆ ಬದ್ಧ: ಡಿಕೆಶಿ

ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.23ರಂದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.23ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4.30 ಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ʼಬೆಸ್ಟ್‌ ಆಫ್‌ ಲಕ್‌ʼ ಎಂದ ಡಿಕೆ ಶಿವಕುಮಾರ್

ಮುಂದಿನ 2.5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; ಬೆಸ್ಟ್‌ ಆಫ್‌ ಲಕ್‌: ಡಿಕೆಶಿ

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಹೈಕಮಾಂಡ್‌ ಮಾತನಾಡಿಲ್ಲ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 'ನಾವು ಸಿದ್ದರಾಮಯ್ಯ ಅವರ ಜೊತೆಯಾಗಿ ಕೆಲಸ ಮಾಡುತ್ತೇವೆʼ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Manikanta Rathod: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್‌ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.

HD Kumaraswamy: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ- ಹೆಚ್.ಡಿ. ಕುಮಾರಸ್ವಾಮಿ ಅತೃಪ್ತಿ

ಅನ್ನ, ಅಕ್ಷರ, ಆಶ್ರಯ ನೀಡುವ ಮಠಗಳು ಶ್ರೇಷ್ಠ ಕೆಲಸ ಮಾಡುತ್ತಿವೆ: HDK

ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭ. ಅವುಗಳ ನಿರ್ವಹಣೆ ಹಾಗೂ ನಡೆಸಿಕೊಂಡು ಹೋಗುವುದು ಸುಲಭವಲ್ಲ. ಆದರೆ, ದಕ್ಷತೆ, ಕ್ಷಮತೆಯಿಂದ ಮಠಗಳು ಸುನಾಯಾಸವಾಗಿ ನಡೆಸಿಕೊಂಡು ಹೋಗುತ್ತಿವೆ. ದೂರದೃಷ್ಟಿ, ಸಮಾಜದ ಕುರಿತಾದ ಕಾಳಜಿಯಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Udupi news: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ

ಪಾಕಿಸ್ತಾನಕ್ಕೆ ಭಾರತ ನೌಕಾಪಡೆ ರಹಸ್ಯ ಗೂಢಚರ್ಯೆ, ಉಡುಪಿಯಲ್ಲಿ ಇಬ್ಬರ ಸೆರೆ

Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.

CM Siddaramaiah: ಮೆಕ್ಕೆ ಜೋಳ ರೈತರ ನೆರವಿಗೆ ಧಾವಿಸಿದ ಸಿಎಂ, ಎಥೆನಾಲ್‌ ತಯಾರಿಗೆ ಖರೀದಿ, ಆಮದು ನಿಯಂತ್ರಿಸಲು ಕೇಂದ್ರಕ್ಕೆ ಆಗ್ರಹ

ಮೆಕ್ಕೆ ಜೋಳ ರೈತರ ನೆರವಿಗೆ ಧಾವಿಸಿದ ಸಿಎಂ, ಆಮದು ನಿಯಂತ್ರಿಸಲು ಆಗ್ರಹ

ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ (Maize Price) ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 70 ಲಕ್ಷ ಮೆ. ಟನ್ ಮೆಕ್ಕೆ ಜೋಳವನ್ನು ಆಮದು ಮಾಡಿಕೊಳ್ಳಲಾಗಿದೆ. ನಮ್ಮ ದೇಶದಲ್ಲಿಯೇ ಉತ್ಪಾದನೆ ಹೆಚ್ಚಾಗಿರುವುದರಿಂದ ಆಮದು ಮೇಲೆ ನಿರ್ಬಂಧ ವಿಧಿಸಲು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಲಾಗಿದೆ ಎಂದಿದ್ದಾರೆ.

Bengaluru Robbery Case: ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

BT Shreedhar: ಬೆಂಗಳೂರು- ಮೈಸೂರು ಹೈವೇ ರೂವಾರಿ BT ಶ್ರೀಧರ್‌ ಕರ್ನಾಟಕದ ರೀಜನಲ್ ಆಫೀಸರ್ ಆಗಿ ನೇಮಕ

BT ಶ್ರೀಧರ್‌ ಕರ್ನಾಟಕದ ರೀಜನಲ್ ಆಫೀಸರ್ ಆಗಿ ನೇಮಕ

Bengaluru- Mysore National Highway: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾಗಿದ್ದ ಬಿಟಿ ಶ್ರೀಧರ್ ಅವರು ರಾಷ್ಟ್ರೀಯ ಹೆದ್ದಾರಿಗಳ ಕರ್ನಾಟಕದ ರೀಜನಲ್ ಆಫೀಸರ್ ಆಗಿ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೈವೇ ನಿರ್ಮಾಣಗಳಲ್ಲಿ ಅಪಾರ ಅನುಭವವನ್ನು ಹೊಂದಿರುವ ಬಿಟಿ ಶ್ರೀಧರ್‌ ರಾಜ್ಯದ ಹಲವು ಮುಖ್ಯ ಹೆದ್ದಾರಿ ಯೋಜನೆಗಳಿಗೆ ತಮ್ಮ ಕೊಡುಗೆ ನೀಡಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಸ್ವರ್ಣಪ್ರಿಯರಿಗೆ ಶಾಕ್‌

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and Silver Rate on 21st November 2025: ಚಿನ್ನದ ದರದಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ ಕಂಡಿದ್ದು, 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ11,410 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಏರಿಕೆಯಾಗಿ, 12,448 ರೂ ಆಗಿದೆ.

Dharmasthala Laksha Deepotsava: ಧರ್ಮಸ್ಥಳ ಲಕ್ಷ ದೀಪೋತ್ಸವ ; ಶ್ರೀ ಮಂಜುನಾಥ ಚರಿತೆ ವೈಭವ ಪ್ರದರ್ಶನ

ಧರ್ಮಸ್ಥಳ ಲಕ್ಷ ದೀಪೋತ್ಸವ ; ಶ್ರೀ ಮಂಜುನಾಥ ಚರಿತೆ ವೈಭವ ಪ್ರದರ್ಶನ

ಕಾರ್ತಿಕ ಮಾಸದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಅಮೋಘ ಕಾರ್ಯಕ್ರಮದಲ್ಲಿ ನಿಮ್ಮ ಮಂಜುನಾಥ ಸ್ವಾಮಿಯ ವೈಭವದ ಬಗ್ಗೆ ನೃತ್ಯಂಜಲಿ ಮೂಲಕ ಮೂಡಿ ಬಂದ ಕಾರ್ಯ ಕ್ರಮ ಬಹಳ ಅಮೋಘ ಮತ್ತು ಅತ್ಯದ್ಭುತವಾಗಿದ್ದು. ಒಂದು ಗಂಟೆಯ ಕಾರ್ಯಕ್ರಮ ಸಮಯ ಹೋದದ್ದೇ ಗೊತ್ತಾಗಿಲ್ಲ.

Shubhanshu Shukla: ಸಚಿವರ ಎದುರೇ ಬೆಂಗಳೂರು ಟ್ರಾಫಿಕ್‌ ಕುರಿತು ಶುಭಾಂಶು ಶುಕ್ಲಾ ತಮಾಷೆ ; ವಿಡಿಯೋ ನೋಡಿ

ಸಚಿವರ ಎದುರೇ ಬೆಂಗಳೂರು ಟ್ರಾಫಿಕ್‌ ಕುರಿತು ತಮಾಷೆ ಮಾಡಿದ ಶುಭಾಂಶು ಶುಕ್ಲಾ

Bengaluru Traffic: ಗಗನಯಾತ್ರಿ ಶುಭಾಂಶು ಶುಕ್ಲಾ ಬಿಐಇಸಿಯಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಬಾಹ್ಯಾಕಾಶ(Space)ದಿಂದ ಬೆಂಗಳೂರಿಗೆ ಬರುವುದು ಸುಲಭ ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗುವುದು ಕಷ್ಟ ಎಂದು ತಮಾಶೆ ಮಾಡಿದ್ದಾರೆ.

ಭಾರತಿದರ್ಶ್ ಫೌಂಡೇಷನ್ ನಿಂದ ಸಾಲುಮರದ ತಿಮ್ಮಕ್ಕ ಸ್ಮರಣೆ; ದಂತ ಚಿಕಿತ್ಸಾ ಶಿಬಿರ

ಭಾರತಿದರ್ಶ್ ಫೌಂಡೇಷನ್ ನಿಂದ ಸಾಲುಮರದ ತಿಮ್ಮಕ್ಕ ಸ್ಮರಣೆ

500ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ದಂತ ತಪಾಸಣ ಮತ್ತು ಚಿಕಿತ್ಸೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಎಲ್ ಬಿ ಎಸ್ ಆಟೊಮೇಷನ್ ಸಿಸ್ಟಮ್ ಮಾಲೀಕ ಬಸವರಾಜ ಎನ್.ಕೆ ಮತ್ತು ಶ್ರೀಮತಿ ಲೀಲಾವತಿ ಪಿ.ಎಮ್, ಭೂಷಣ್, ಶ್ರೀಮತಿ ಮೋನಿಕ ಪ್ರಮೋದ್ ರವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

Bengaluru Traffic Fine: ವಾಹನ ಸವಾರಿಗೆ ಗುಡ್‌ ನ್ಯೂಸ್‌; ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

ಗುಡ್‌ ನ್ಯೂಸ್‌; ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

Karnataka Government: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ.

Loading...