ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Haveri News: ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಸ್ಮಾರ್ಟ್ ಫೋನ್ ಉದ್ಯಮದಲ್ಲಿ ಭಾರತದ ಸ್ಮಾರ್ಟ್ ವರ್ಕ್, 2032ರ ವೇಳೆಗೆ USD 77.23 ಶತಕೋಟಿ ಮೌಲ್ಯದ ಸ್ಮಾರ್ಟ್ ಫೋನ್ ರಫ್ತು ನಿರೀಕ್ಷೆ

ಸ್ಮಾರ್ಟ್ ಫೋನ್ ಉದ್ಯಮದಲ್ಲಿ ಭಾರತದ ಸ್ಮಾರ್ಟ್ ವರ್ಕ್

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಗಾತ್ರ 2023ರಲ್ಲಿ USD 41.31 ಶತಕೋಟಿ ಮೌಲ್ಯದ್ದಾಗಿತ್ತು. ಆದರೀಗ ಬಹು ವಿಸ್ತರಣೆ ಕಂಡಿದೆ. 2032ರ ವೇಳೆಗೆ USD 77.23 ಶತಕೋಟಿ ತಲುಪುವ ನಿಟ್ಟಿನಲ್ಲಿ ಬೃಹತ್ತಾಗಿ ಬೆಳೆಯುತ್ತಿದೆ. ಇದೇ ಪ್ರಗತಿಯಲ್ಲಿ ಸಾಗಿದರೆ ಭವಿಷ್ಯದಲ್ಲಿ ಭಾರತದ ಐ ಫೋನ್, ಸ್ಮಾರ್ಟ್ ಫೋನ್‌ಗಳು ವಿಶ್ವವನ್ನೇ ಅವರಿಸಲಿವೆ.

DK Shivakumar: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಾ. 21ರಂದು ಕಾವೇರಿ ಆರತಿ, ಸಾರ್ವಜನಿಕರಿಗೆ ಮುಕ್ತ ಪ್ರವೇಶ: ಡಿಕೆಶಿ

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾವೇರಿ ಆರತಿ: ಡಿಕೆಶಿ

DK Shivakumar: ʼʼಬೆಂಗಳೂರಿನ ಇತಿಹಾಸದಲ್ಲಿ ಎಂದೂ ಕಾವೇರಿ ಆರತಿ ನಡೆದಿಲ್ಲ. ಮುಂದೆ ಇದಕ್ಕಿಂತ ದೊಡ್ಡ ಕಾರ್ಯಕ್ರಮ ನಡೆಯಬಹುದು. ಆದರೆ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರಿನಲ್ಲಿ ಮುಂದೆಂದೂ ನೀರಿಗೆ ತೊಂದರೆ ಆಗಬಾರದು, ಅಂತರ್ಜಲ ಹೆಚ್ಚಿಸಬೇಕು ಎಂದು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ನಾವು ಪ್ರಾರ್ಥನೆ ಮೂಲಕ ಒಂದು ಪ್ರಯತ್ನ ಮಾಡುತ್ತಿದ್ದೇವೆʼʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮಾ.22, 23ರಂದು ಬೆಂಗಳೂರಿನಲ್ಲಿ ಸೌತ್ ಏಷ್ಯಾ ಇಂಟರ್ನ್ಯಾಷನಲ್ ಪೀಸ್ ಕಾನ್ಫರೆನ್ಸ್/ ಎಸ್ಎಐಪಿಸಿ

22, 23ರಂದು ದಕ್ಷಿಣ ಏಷ್ಯಾ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನ

ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸಲು ವೈವಿಧ್ಯಮಯ ಪಾಲುದಾರರನ್ನು ಒಟ್ಟುಗೂಡಿಸುತ್ತದೆ ಹಾಗೇ ಸಂವಾ ದ, ಸಹಯೋಗ ಮತ್ತು ನೂತನ ಪರಿಹಾರಗಳ ಮೂಲಕ ಶಾಂತಿ ಮತ್ತು ಸಾಮರಸ್ಯದ ಸಮರ್ಪಿತ ಅನ್ವೇಷಣೆಯಲ್ಲಿ ದಕ್ಷಿಣ ಏಷ್ಯಾದಾದ್ಯಂತ ನಾಯಕರು, ಸಮುದಾಯ ಗಳು ಮತ್ತು ನಾವೀನ್ಯ ಕಾರರನ್ನು ಒಗ್ಗೂಡಿಸುವ ಗುರಿಯನ್ನು ಎಸ್ಎಐಪಿಸಿ 2025 ಹೊಂದಿದೆ.

H.D.Kumaraswamy: ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ; ಹೆಸರೇಳದೆ ಕುಮಾರಸ್ವಾಮಿ ಟೀಕಿಸಿದ್ದು ಯಾರನ್ನು?

ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ: ಎಚ್‌ಡಿಕೆ ವಾಗ್ದಾಳಿ

H.D.Kumaraswamy: ʼʼಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!ʼʼ- ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಪೋಸ್ಟ್‌ ಮಾಡಿದ್ದಾರೆ.

Ramdurg news: ಜಗದ್ಗುರು ರೇಣುಕಾಚಾರ್ಯ ಗುರುಕುಲ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿ

ತಾಲೂಕಿನ ಗೊಡಚಿ ಗ್ರಾಮದ ಹತ್ತಿರ ನಿರ್ಮಿಸಲಿರುವ ಶ್ರೀ ಜಗದ್ಗುರು ರೇಣುಕಾ ಚಾರ್ಯ ಗುರುಕುಲ ನಿರ್ಮಾಣಕ್ಕೆ ಕಟಕೋಳ ಎಂ.ಚಂದರಗಿಯ ಶ್ರೀ ವೀರಭದ್ರ ಶಿವಯೋಗಿ ಶಿವಾ ಚಾರ್ಯ ಸ್ವಾಮೀಜಿ ಭೂಮಿಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗುರುಕುಲ ನಿರ್ಮಾಣದಿಂದ ಈ ಭಾಗದಲ್ಲಿ ಹಲವು ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿಯಾಗಲಿದೆ

Ramdurg Crime News: ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಮರ ಕಡಿಯುವ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ತಾಲೂಕಿನ ಚೆನ್ನಾ ಪೂರ ಗ್ರಾಮದ ತೋಟದಲ್ಲಿ ನಡೆದಿದೆ. ಘಟನೆಯಲ್ಲಿ ಬಾಗಲಕೋಟ ಜಿಲ್ಲೆ ಲೋಕಾಪೂರ ಗ್ರಾಮದ ನಿವಾಸಿ ಶರೀಫ ಮೈಬುಸಾಬ ಅತ್ತಾರ (47) ಮೃತ ದುರ್ದೈವಿಯಾಗಿದ್ದು, ಮರ ಕಡಿಯುವ ಸಂದರ್ಭ ದಲ್ಲಿ ಹೆಜ್ಜೇನು ಗೂಡು ಕಾಣಿಸಿದೆ.

Karnataka Bandh: ಮಾ. 22ರ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ; ಬೆಳಗಿನ ಶೋ ಇಲ್ಲ

ಮಾ. 22ರ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ

Film Chamber of Commerce: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾ. 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಅಂದು ಬೆಳಗಿನ ಶೋ ರದ್ದಾಗಲಿದೆ.

Pralhad Joshi: ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯಕ್ಕೆ ಕರ್ನಾಟಕ ಪ್ರಯೋಗಾಲಯ: ಜೋಶಿ ಆರೋಪ

ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯಕ್ಕೆ ಕರ್ನಾಟಕ ಪ್ರಯೋಗಾಲಯ: ಜೋಶಿ

Pralhad Joshi: ಸಂವಿಧಾನದ 15(1)ರ ಅಡಿಯಲ್ಲಿ ಗುತ್ತಿಗೆಯಲ್ಲಿ ಧರ್ಮಾಧಾರಿತ ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದೆ. ಆದರೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತೀರಾ ತುಷ್ಟೀಕರಣ ರಾಜಕೀಯಕ್ಕೆ ಇಳಿದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

K.N. Rajanna: 48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ: ಸಚಿವ ರಾಜಣ್ಣ ಶಾಕಿಂಗ್‌ ಹೇಳಿಕೆ

48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ: ಸಚಿವ ರಾಜಣ್ಣ

Honey Trap: ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು ಸದನದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಜತೆಗೆ ಈ ಬಗ್ಗೆ ಸೂಕ್ತ ತನಿಖೆ ಆಗಬೇಕು, ಸತ್ಯಾಸತ್ಯತೆ ಹೊರಬರಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ್​​ ಅವರಲ್ಲಿ ಮನವಿ ಮಾಡಿದ್ದಾರೆ.

BBMP Amendment Bill 2025: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

ʼಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ʼಕ್ಕೆ ಅಂಗೀಕಾರ

BBMP Amendment Bill 2025: ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು ಸಹ ಅಭಿವೃದ್ದಿ ಮಾಡಿದ್ದೇವೆ. ನಿವೇಶನಗಳನ್ನು ಮಾಡಿ ಹಂಚಿದ್ದರೂ ಸಹ ಕಂದಾಯ ದಾಖಲೆಗಳಲ್ಲಿ ಇನ್ನೂ ಭೂ ಮಾಲೀಕರ ಹೆಸರು ನಮೂದಾಗಿಯೇ ಇದೆ. ಈ ಭೂ ದಾಖಲೆಗಳನ್ನು ನವೀಕರಣ ಮಾಡಬೇಕಿದೆ. ಖಾಸಗಿ ಬಡಾವಣೆಗಳ ರಸ್ತೆಗಳನ್ನು ಸರ್ಕಾರಿ ರಸ್ತೆಗಳೆಂದು ಘೋಷಣೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

DK Shivakumar: ಕೃಷ್ಣಾ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಕೋಟಿ ರೂ. ಬೇಕು: ಡಿ.ಕೆ.ಶಿವಕುಮಾರ್

ಕೃಷ್ಣಾ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಕೋಟಿ ರೂ. ಬೇಕು: ಡಿಕೆಶಿ

ಬೊಮ್ಮಾಯಿ ಅವರ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣಾ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು87,818 ಕೋಟಿ ರೂ. ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

PES University: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಪ್ರೊ. ಜವಾಹರ್ ದೊರೆಸ್ವಾಮಿ ನೇಮಕ

ಪ್ರೊ. ಜವಾಹರ್ ದೊರೆಸ್ವಾಮಿ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ

Prof. Jawahar Doreswamy: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಪ್ರೊ. ಜವಾಹರ್ ದೊರೆಸ್ವಾಮಿ ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ. ಅವರು ಮಾ. 21ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಪೂರ್ಣ ಗುಣಮಟ್ಟದ ಶಿಕ್ಷಣದ ಪ್ರಬಲ ಪ್ರತಿಪಾದಕ ಪ್ರೊ. ಜವಾಹರ್ ದೊರೆಸ್ವಾಮಿ, ಪ್ರಮುಖ ಕಾರ್ಯಕ್ಷಮತೆ ಸೂಚಕ ಆಧಾರಿತ ನಿರ್ವಹಣೆ ಮತ್ತು ಮಾನದಂಡದ ಮೇಲೆ ಗಮನ ಹರಿಸುವ ಮೂಲಕ ಶೈಕ್ಷಣಿಕ ಅನುಭವವನ್ನು ಹೆಚ್ಚಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Honey Trap: ರಾಜ್ಯ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್‌ ಪ್ರಯತ್ನ: ಬಾಂಬ್‌ ಸಿಡಿಸಿದ ಸತೀಶ್‌ ಜಾರಕಿಹೊಳಿ

ರಾಜ್ಯ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್‌ ಪ್ರಯತ್ನ: ಸತೀಶ್‌ ಜಾರಕಿಹೊಳಿ

Satish Jarkiholi: ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಪ್ರಯತ್ನ ನಡೆಸಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ''ಪ್ರಭಾವಿ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ. ಆ ಮೂಲಕ ಸಚಿವರ ತೇಜೋವಧೆ ಮಾಡಲು ಯತ್ನಿಸಲಾಗಿದೆ. ಆದರೆ ಇದನ್ನು ಸಕಾಲದಲ್ಲಿ ವಿಫಲಗೊಳಿಸಲಾಗಿದೆʼʼ ಎಂದು ತಿಳಿಸಿದ್ದಾರೆ.

BY Vijayendra: ಬೆಲೆ ಏರಿಕೆಯ ʼಗ್ಯಾರಂಟಿʼ ಕೊಟ್ಟ ಕಾಂಗ್ರೆಸ್ ಸರ್ಕಾರ- ಬಿ.ವೈ.ವಿಜಯೇಂದ್ರ

ಬೆಲೆ ಏರಿಕೆಯ ʼಗ್ಯಾರಂಟಿʼ ಕೊಟ್ಟ ಕಾಂಗ್ರೆಸ್ ಸರ್ಕಾರ-ಬಿ.ವೈ.ವಿಜಯೇಂದ್ರ

BY Vijayendra: ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರ್ಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Lakshmi Hebbalkar: 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ... ಸಿಎಂ ಜತೆ ಚರ್ಚೆ: ಲಕ್ಷ್ಮೀ ಹೆಬ್ಬಾಳಕರ್

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ

Lakshmi Hebbalkar: ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚ್ಯುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ‌ ಜತೆ ಚರ್ಚೆ ನಡೆಸಿ‌,‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Yadagiri News: ಲವ್‌, ಸೆಕ್ಸ್‌ & ದೋಖಾ; ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಿಧವೆಗೆ ವಂಚನೆ

ಮದುವೆಯಾಗುವುದಾಗಿ ನಂಬಿಸಿ ವಿಧವೆಗೆ ವಂಚನೆ

ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ವಿಧವೆಯ ಜತೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯ ಲಕ್ಷಾಂತರ ರೂ. ಬೆಲೆ ಬಾಳುವ ಜಮೀನು ಮಾರಿ ಹಣ ಪಡೆದು ವಂಚಿಸಿದ ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಯಾದಗಿರಿ ತಾಲೂಕಿನ ಬಸಂತಪುರ ಗ್ರಾಮದ ಸುವರ್ಣಾ ವಂಚನೆಗೊಳಗಾದ ವಿಧವೆ ಮಹಿಳೆ. ತಡಿಬಿಡಿ ಗ್ರಾಮದ ಮಾಳಪ್ಪ ಹತ್ತಕುಣಿ ಎಂಬುವನು ಸುವರ್ಣಾಗೆ ವಂಚಿಸಿದಾತ.

MB Patil: ಜಂಗಮಕೋಟೆ ರೈತರಿಂದ ಸಚಿವ ಎಂ.ಬಿ.ಪಾಟೀಲ್‌ಗೆ ಮನವಿ ಸಲ್ಲಿಕೆ: ಸೂಕ್ತ ಕ್ರಮದ ಭರವಸೆ

ಜಂಗಮಕೋಟೆ ರೈತರಿಂದ ಸಚಿವ ಎಂ.ಬಿ.ಪಾಟೀಲ್‌ಗೆ ಮನವಿ ಸಲ್ಲಿಕೆ

MB Patil: ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರವು ಸ್ವಾಧೀನ ಪಡಿಸಿಕೊಳ್ಳಲಿರುವ ಜಮೀನಿನ ಮಾಲೀಕರಿಗೆ ಒಂದೇ ಕಂತಿನಲ್ಲಿ ಸಂಪೂರ್ಣ ಪರಿಹಾರ ವಿತರಿಸಬೇಕು ಮತ್ತು ಈ ರೈತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಕೊಡಬೇಕು ಎಂದು `ಜಂಗಮಕೋಟೆ ಹೋಬಳಿ ಕೆಐಎಡಿಬಿ ಜಮೀನುಗಳ ರೈತಪರ ಹೋರಾಟ ಸಮಿತಿʼ ಯ ಮುಖಂಡರು ಗುರುವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Chi Saujanya Movie: ‘ಚಿ: ಸೌಜನ್ಯ’ ಚಿತ್ರದ ಮೂಲಕ ನಿರ್ದೇಶನದತ್ತ ನಟಿ ಹರ್ಷಿಕಾ ಪೂಣಚ್ಚ

‘ಚಿ: ಸೌಜನ್ಯ’ ಚಿತ್ರದ ಮೂಲಕ ನಿರ್ದೇಶನದತ್ತ ನಟಿ ಹರ್ಷಿಕಾ ಪೂಣಚ್ಚ

Chi Saujanya Movie: ಕನ್ನಡದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಧು ಮರಿಸ್ವಾಮಿ ಮತ್ತು ಭುವನ್ ಪೊನ್ನಣ್ಣ ನಿರ್ಮಿಸುತ್ತಿರುವ, ಬಹುಭಾಷಾ ನಟ ಕಿಶೋರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʼಚಿ: ಸೌಜನ್ಯʼ ಎಂದು ಹೆಸರಿಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ದ್ವೇಷದ ರಾಜಕಾರಣ ಅವ್ರ ಡಿಎನ್‌ಎಯಲ್ಲಿದೆ: ಎಚ್‌ಡಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು

ದ್ವೇಷದ ರಾಜಕಾರಣ ಅವ್ರ ಡಿಎನ್‌ಎಯಲ್ಲಿದೆ- ಎಚ್‌ಡಿಕೆಗೆ ಡಿಕೆಶಿ ತಿರುಗೇಟು

DK Shivakumar: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ದ್ವೇಷದ ರಾಜಕಾರಣ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ʼಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವಾ? ಈ ವಿಚಾರವಾಗಿ ಎಸ್.ಆರ್. ಹಿರೇಮಠ್ ಅವರು ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣ ಏನಿದೆ?ʼ ಎಂದು ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Cauvery Aarti: ಸ್ಯಾಂಕಿ ಕೆರೆಯಲ್ಲಿ ನಾಳೆ ಕಾವೇರಿ ಆರತಿ ನಿರ್ವಿಘ್ನ, ತಡೆ ನೀಡಲು ಹೈಕೋರ್ಟ್‌ ನಕಾರ

ಸ್ಯಾಂಕಿ ಕೆರೆಯಲ್ಲಿ ನಾಳೆ ಕಾವೇರಿ ಆರತಿ, ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮಾರ್ಚ್‌ 21ರಂದು ಇದೇ ಮೊದಲ ಬಾರಿಗೆ ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡಿಗರ ಜೀವ ನದಿಯಾಗಿರುವ ಕಾವೇರಿ ಮಾತೆಗೆ ಗೌರವ ಸಲ್ಲಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ಬನ್ನಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

DK Shivakumar: ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ- ಡಿ.ಕೆ. ಶಿವಕುಮಾರ್

ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ- ಡಿಕೆಶಿ

DK Shivakumar: ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲಾಗಿದ್ದು, ನಮ್ಮ ವಿಚಾರವನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Moral Education: ಈ ವರ್ಷದಿಂದಲೇ ಪ್ರೌಢಶಾಲೆ ಮಕ್ಕಳಿಗೆ ನೈತಿಕ, ಲೈಂಗಿಕ ಶಿಕ್ಷಣ

ಈ ವರ್ಷದಿಂದಲೇ ಪ್ರೌಢಶಾಲೆ ಮಕ್ಕಳಿಗೆ ನೈತಿಕ, ಲೈಂಗಿಕ ಶಿಕ್ಷಣ

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ಸುದೀರ್ಘ ಚರ್ಚೆ ನಡೆದಿತ್ತು. ಆಡಳಿತ ಹಾಗೂ ಪ್ರತಿಪಕ್ಷಗಳ ಅನೇಕ ಸದಸ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯ, ಸಲಹೆ ಹಾಗೂ ಸೂಚನೆಗಳನ್ನು ಸರ್ಕಾರಕ್ಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಶಿಕ್ಷಣ ಸಚಿವರು ಉತ್ತರಿಸಿದ್ದಾರೆ.

Electricity Price Hike: ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ

ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ

ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ (Electricity Price Hike) ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.