ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Gubbi News: ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ನಡೆದ 3 ಕೋಟಿ ರೂ ವೆಚ್ಚದ ವಿವಿಧ ಗ್ರಾಮದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಶಾಸಕರು ಬಜೆಟ್'ಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದೆವು. ಈ ವರ್ಷ ಮನ್ನಣೆಗೆ ಬಂದಿಲ್ಲ. ಮುಂದಿನ ವರ್ಷದ ಬಜೆಟ್'ನಲ್ಲಿ ಎಲ್ಲಾ ಯೋಜನೆಗೆ ಅಸ್ತು ಸಿಗಲಿದೆ

HN Valley: ಹೆಚ್.ಎನ್.ವ್ಯಾಲಿ ಶುದ್ಧೀಕರಣಕ್ಕೆ ಆಗ್ರಹಿಸಿ ಸಚಿವರಿಗೆ ಕೊಳಚೆ ನೀರು ಕಳಿಸಿ ಆಕ್ರೋಶ ವ್ಯಕ್ತಪಡಿಸಿದ ಹರೀಶ್‌ರೆಡ್ಡಿ

ಸಚಿವರಿಗೆ ಕೊಳಚೆ ನೀರು ಕಳಿಸಿ ಆಕ್ರೋಶ ವ್ಯಕ್ತಪಡಿಸಿದ ಹರೀಶ್‌ರೆಡ್ಡಿ

ಕಂದವಾರ ಕೆರೆಕಟ್ಟೆಯ ಬಳಿ ಬಾಟಲಿಗಳಲ್ಲಿ ನೀರನ್ನು ತುಂಬಿ ಜನಪ್ರತಿನಿಧಿಗಳಿಗೆ ರವಾನಿಸುವ ವಿನೂತನ ಪ್ರತಿಭಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು  ಶ್ರೀಹರಿಕೃಷ್ಣ ಟ್ರಸ್ಟ್ ಅಧ್ಯಕ್ಷ ಆನೆಮಡುಗು ಹರೀಶ್ ರೆಡ್ಡಿ  ಅವರು ಮಾತನಾಡಿದರು.ಈ ವೇಳೆ ಕನ್ನಡ ಸಂಘ ಹಾಗೂ ರೈತ ಸಂಘದ ಕಾರ್ಯಕರ್ತರು  ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು

Chikkaballapur News: ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ: ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ

ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ

2025-26ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಂತದ ಗಣಿತ ಸ್ಪರ್ಧೆಗಳ ಆಯೋಜನೆಯು ಶಿಕ್ಷಣ ಇಲಾಖೆ, ಅಕ್ಷರ ಫೌಂಡೇಶನ್ ಮತ್ತು ಸಮುದಾಯದ ಸಹಕಾರ ದಿಂದ ಉತ್ತಮ ಯಶಸ್ಸು ಕಂಡಿದೆ. ಈ ಕಾರ್ಯಕ್ರಮವು ಗಣಿತ ಕಲಿಕಾ ಆಂದೋಲನದ ಕಾರ್ಯ ಕ್ರಮದ ಒಂದು ಭಾಗವಾಗಿದೆ.

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನ; ನಾಡಿನ ಮಹಿಳೆಯರಿಗೆ ಶುಭಾಶಯ ಕೋರಿದ ಲಕ್ಷ್ಮಿ ಹೆಬ್ಬಾಳ್ಕರ್

ಅಂತಾರಾಷ್ಟ್ರೀಯ ಮಹಿಳಾ ದಿನ; ರಾಜ್ಯದ ಜನತೆಗೆ ಹೆಬ್ಬಾಳ್ಕರ್ ಶುಭಾಶಯ

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಹಿಳೆಯರು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಅವಕಾಶಗಳನ್ನು ಸಮಾನವಾಗಿ ಪಡೆಯಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

MLA S.N. Subbareddy: ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೂಚನೆ

ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯು ವಲ್ಲಿ ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಎಸ್‌ಡಿಎಂಸಿ ಸಮಿತಿ, ಅಧ್ಯಕ್ಷರು ಹಾಗೂ ಪಿ.ಎಂ.ಶ್ರೀ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಇಂತಹ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರೆ ಮತ್ತಷ್ಟು ಅಭಿವೃದ್ಧಿಗೆ ಹಾಗೂ ಇತರ ಶಾಲೆಗಳ ಅಭಿವೃದ್ಧಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ

JDS MLA B.N.Ravikumar: ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ: ಬಿ.ಎನ್. ರವಿಕುಮಾರ್

ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ

ಹಿಂದುಳಿದ ವರ್ಗಗಳ ಜನರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಅರ್ಹರಿಗೆ ಸಮರ್ಪಕವಾಗಿ ತಲುಪು ವುದು ಮುಖ್ಯವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು

MLA Pradeep Eshwar: ನಾನು 3ನೇ ಹಂತದ ಶುದ್ಧೀಕರಣದ ಪರವಾಗಿರುವ ಶಾಸಕ: ನನ್ನ ಬದ್ಧತೆಯಲ್ಲಿ ಬದಲಿಲ್ಲ

ಸಂಸದ ಸಚಿವ ಶಾಸಕರ ನಿಯೋಗವನ್ನು ಸಿಎಂ ಬಳಿಗೆ ಕರೆದೊಯ್ಯಲಾಗುವುದು

ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಯ ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಖಂಡಿತ ಈ ಕೆಲಸ ಆಗಲಿದೆ. ಆದರೂ ಹೆಚ್.ಎನ್.ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಡಾ.ಎಂ.ಸಿ.ಸುಧಾಕರ್, ಮೇಲೂರು ರವಿಕುಮಾರ್, ಗೌರಿಬಿದನೂರು ಪುಟ್ಟಸ್ವಾಮಿಗೌಡ, ಸುಬ್ಬಾರೆಡ್ಡಿ ಅವರ ಸಹಕಾರ ಪಡೆದು ಈ ಕೆಲಸ ಮಾಡಲಾಗುವುದು.

ಮಹಿಳೆಯರ ತ್ಯಾಗ, ಸೇವೆ ಸ್ಮರಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಸಿಎಂ ಸಂದೇಶ

ಮಹಿಳೆಯರ ತ್ಯಾಗ, ಸೇವೆ ಸ್ಮರಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಸಿಎಂ

International Women's Day 2026: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಕಳೆದ ಎರಡು ಮುಕ್ಕಾಲು ವರ್ಷಗಳಲ್ಲಿ ಮಹಿಳೆಯರ ಸಬಲೀಕರಣದ ಹಾದಿಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯೋಜನೆಗಳು ಮಹಿಳಾ ಕೇಂದ್ರಿತ ಯೋಜನಗಳೇ ಆಗಿವೆ ಎನ್ನುವುದನ್ನು ಅತ್ಯಂತ ಹೆಮ್ಮೆಯಿಂದ ತಿಳಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

K.H. Muniyappa: ಸಚಿವ ಕೆ.ಹೆಚ್.ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಸಚಿವ ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಜನರಿಗೆ ಉತ್ತಮ ಸಂದೇಶ ಸಾರಿದ್ದಾರೆ ಅವರು ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಪ್ಯಾಕೇಜ್‌ಗಳನ್ನು ತರಲು ಸಹ ಕಾರಣರಾಗಿದ್ದಾರೆ

CHIMUL: ಯುಗಾದಿ ಹಬ್ಬದ ಉಡುಗೊರೆಯಾಗಿ ಲೀ.50 ಪೈಸೆ ಹೆಚ್ಚಿಸಿ ಸಿಹಿ ಸುದ್ದಿ ನೀಡಿದ ಚಿಮುಲ್

ಯುಗಾದಿ ಹಬ್ಬದ ಉಡುಗೊರೆ: ಲೀ.50 ಪೈಸೆ ಹೆಚ್ಚಿಸಿದ ಚಿಮುಲ್

ಚಿಮುಲ್ ಆಡಳಿತ ಮಂಡಳಿ ರೈತಪರವಾದ ಆಡಳಿತ ಮಂಡಳಿಯಾಗಿದೆ ಎಂಬುದನ್ನು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ. 2026ರ ಜನವರಿ ಯಲ್ಲಿ ಪ್ರತಿ ಲೀಟರ್ ಮೇಲೆ 1 ರೂ ಹೆಚ್ಚಳ ಮಾಡಿತ್ತು. ನೂತನ ಆಡಳಿತ ಮಂಡಳಿಗೆ ಫೆ.ಚುನಾವಣೆ ನಡೆದು ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಲೀಟರ್ ಒಂದಕ್ಕೆ ರೂ.50 ಪೈಸೆ ಹೆಚ್ಚಳ ಮಾಡಲು ಆಡಳಿತ ಮಂಡಳಿಯ ಸಭೆಯಲ್ಲಿ ರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ. ಈ ದರವು ಮೇ-31ರ ತನಕ ಇರಲಿದೆ

Hubballi News: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ

ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ದಾರಿ ವಿಚಾರಕ್ಕೆ ಜಗಳ ನಡೆದ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು, ರೈತನ ಮೇಲೆ ಹಲ್ಲೆ ನಡೆಸಿದ್ದರು. ಆದರೆ, ತನ್ನ ಮೇಲೆಯೇ ಅಟ್ರಾಸಿಟಿ ಕೇಸ್‌ ದಾಖಲಾಗಿದ್ದರಿಂದ ವಿಚಾರಣೆಗ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Shashidhara Halady honoured: 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿಧರ ಹಾಲಾಡಿ ಭಾಜನ

ಶಶಿಧರ ಹಾಲಾಡಿ ಕೃತಿಗೆ ಪ್ರಶಸ್ತಿ

ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿ`ಧರ ಹಾಲಾಡಿ ಅವರು ರಚಿಸಿದ `"ನದಿ ದಾಟಿ ಬಂದವರು" ಆಯ್ಕೆಯಾಗಿದೆ. ಈ ಪ್ರಶಸ್ತಿಯು ರು.೨೫,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಬಿ.ಎಂ.ಹನೀಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka CM Row: ಬಜೆಟ್‌ ಬೆನ್ನಲ್ಲೇ ನಾಳೆ ಡಿ.ಕೆ. ಶಿವಕುಮಾರ್‌ ದೆಹಲಿ ಪ್ರವಾಸ; ಕುತೂಹಲ ಮೂಡಿಸಿದ ಡಿಸಿಎಂ ನಡೆ!

ಬಜೆಟ್‌ ಮಂಡನೆ ಬೆನ್ನಲ್ಲೇ ನಾಳೆ ದೆಹಲಿಗೆ ತೆರಳಿದ್ದಾರೆ ಡಿ.ಕೆ.ಶಿವಕುಮಾರ್‌

ಡಿ.ಕೆ. ಶಿವಕುಮಾರ್‌ ಅವರು ಪ್ರಿಯಾಂಕ್‌ ಖರ್ಗೆ ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಕಲಬುರಗಿಯಿಂದ ದೆಹಲಿಗೆ ಜತೆಯಾಗಿ ಪ್ರಯಾಣಿಸಲಿದ್ದಾರೆ.

Chikkaballapur city shutdown: ಮಾ.15ಕ್ಕೆ ಹೆಚ್.ಎನ್.ವ್ಯಾಲಿ ನೀರಿನ 3ನೇ ಹಂತದ ಶುದ್ಧೀಕರಣಕ್ಕೆ ಆಗ್ರಹಿಸಿ ಚಿಕ್ಕಬಳ್ಳಾಪುರ ಬಂದ್ : ಸಂದೀಪ್‌ ರೆಡ್ಡಿ ಹೇಳಿಕೆ

ಮಾ.15ಕ್ಕೆ ಚಿಕ್ಕಬಳ್ಳಾಪುರ ಬಂದ್ : ಸಂದೀಪ್‌ ರೆಡ್ಡಿ ಹೇಳಿಕೆ

ಯಾವಾಗ ಇಲ್ಲಿಗೆ ನೀರು ಬಂತೋ ಆಗ ಬತ್ತಿದ್ದ ಇವುಗಳ ಒಡಲಿನ ತುಂಬಾ ನೀರುಕ್ಕಿ ಹರಿಯು ತ್ತಿದೆ. ಇದೇ ನೀರನ್ನು ನಗರಾಡಳಿತ ಹಿಂದೆ ಮುಂದೆ ನೋಡದೆ ನೇರವಾಗಿ ನಗರವಾಸಿಗಳಿಗೆ ಕುಡಿಯಲು ಹರಿಸಿ ಅವರ ಆರೋಗ್ಯದ ಜತೆಗೆ ಚೆಲ್ಲಾಟವಾಡುತ್ತಿರುವುದು ಯಾಕೆ? ಕುಡಿಯಲು ಯೋಗ್ಯವಲ್ಲ ಎಂದು ಬೋರ್ಡ್ ಹಾಕಿದ್ದರೂ ಯಾಕೆ ಜನತೆಗೆ ಕುಡಿಯಲು ಕೊಡುತ್ತಿದ್ದಾರೆ ಎಂಬುದನ್ನು ಜನಪ್ರತಿನಿಧಿಗಳು, ಸರಕಾರ ತಿಳಿಸಬೇಕು

Internal Reservation: ಒಳಮೀಸಲಾತಿ; ಜಾತಿ ಸಂಘರ್ಷಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು ನೀಡುತ್ತಿದ್ದಾರೆ ಎಂದ ಛಲವಾದಿ ನಾರಾಯಣಸ್ವಾಮಿ

ಜಾತಿ ಸಂಘರ್ಷಕ್ಕೆ ಸಿಎಂ ಸಿದ್ದರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಈಗ ಜಾತಿ ಸಂಘರ್ಷಕ್ಕೆ ಸಿದ್ದರಾಮಯ್ಯ ಅವರು ಕುಮ್ಮಕ್ಕು ಕೊಡುತ್ತಿದ್ದಾರೆ. ಕಾಂಗ್ರೆಸ್ಸಿನವರು ಒಂದು ಕಡೆ ಜಾತಿಗಳನ್ನು ಒಡೆದು ತಮ್ಮ ಮತದ ಬಲ ಹೆಚ್ಚಿಸಿಕೊಂಡಿದ್ದರು. ಇನ್ನೊಂದು ಕಡೆ ಜಾತಿಗಳ ಸಂಘರ್ಷಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Honey trap case: ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್‌; 25 ಲಕ್ಷ ರೂ. ಬೇಡಿಕೆ ಇಟ್ಟಿದ್ದ ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

ಉದ್ಯಮಿಗೆ ಹನಿಟ್ರ್ಯಾಪ್‌ ಪ್ರಕರಣ; ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

Davanagere News: ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯಲ್ಲಿ ಹನಿಟ್ರ್ಯಾಪ್ ಪ್ರಕರಣ ನಡೆದಿತ್ತು. ಹನಿಟ್ರ್ಯಾಪ್ ಮಾಡಿದ್ದ ನರ್ಸ್‌ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆಯಾಚಿಸಿ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆಗೆ ಪ್ರಧಾನಿ ಮೋದಿ ವಿರುದ್ಧ ಸಿಎಂ ಆಕ್ರೋಶ

ಎಲ್‌ಪಿಜಿ ಸಿಲಿಂಡರ್ ದರ ಏರಿಕೆಗೆ ಮೋದಿ ವಿರುದ್ಧ ಸಿಎಂ ಆಕ್ರೋಶ

LPG Cylinder Price Hike: ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಫ್‌ಸ್ಟೀನ್ ಫೈಲ್ಸ್‌ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೂರು ದಿನಗಳಿಂದ ಅದೇ ಸಾಂಬಾರ್ ಬಡಿಸಿದ್ದಕ್ಕೆ ಕೂಗಾಡಿದ ಪತಿ; ಮನನೊಂದ ಪತ್ನಿ ಆತ್ಮಹತ್ಯೆ

ಸಾಂಬಾರ್ ವಿಚಾರಕ್ಕೆ ಜಗಳ; ಪತ್ನಿ ಆತ್ಮಹತ್ಯೆ

Crime news: ಮೂರು ದಿನಗಳ ಸಾಂಬಾರ್ ಅನ್ನು ಪದೇ ಪದೇ ಬಡಿಸುವ ಬಗ್ಗೆ ನಡೆದ ಕಲಹ 27 ವರ್ಷದ ಮಹಿಳೆಯ ಸಾವಿನಲ್ಲಿ ಅಂತ್ಯವಾಗಿದೆ. ತನ್ನ ಪತಿಯೊಂದಿಗೆ ಜಗಳವಾಡಿದ ನಂತರ ಮಹಿಳೆ ಕೀಟನಾಶಕ ಸೇವಿಸಿದ್ದಾಳೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಜಗಳದ ನಂತರ, ಕೃಷಿ ಬಳಕೆಗಾಗಿ ಇರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿದ್ದಾಳೆ ಎಂದು ಹೇಳಲಾಗಿದೆ.

T20 World Cup final: ಮೋದಿ ಫೈನಲ್‌ ಮ್ಯಾಚ್ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ ಎಂದ ಪ್ರಿಯಾಂಕ್‌ ಖರ್ಗೆ

ಮೋದಿ ಫೈನಲ್‌ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ: ಪ್ರಿಯಾಂಕ್‌ ಖರ್ಗೆ

Kalaburagi News: ಮೊನ್ನೆ ಮದುವೆಯಾದ ರಶ್ಮಿಕಾ-ವಿಜಯ್‌ ಅವರನ್ನು ಭೇಟಿಯಾಗಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ. ಆದರೆ, ಆದರೆ, ನಮ್ಮ ದೇಶದ ಮರ್ಯಾದೆ ಹರಾಜಾಗುತ್ತಿರುವಾಗ ಈ ಬಗ್ಗೆ ಮಾತನಾಡಲು ಪುರಸೊತ್ತಿಲ್ಲ ಎಂದು ಪ್ರಧಾನಿ ಮೋದಿ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

Karnataka Budget 2026: ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ದರಾಮಯ್ಯ

ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ದರಾಮಯ್ಯ

CM Siddaramaiah: ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ರಾಜ್ಯದ ಸಾಲದ ಪ್ರಮಾಣ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

ಪಿಇಎಸ್‌ ವಿವಿಯ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌-ಬಜಾಜ್‌ ಎಂಜಿನಿಯರಿಂಗ್‌ ಕೌಶಲ್ಯ ತರಬೇತಿ ಕೇಂದ್ರದ ಮೂಲಕ ಬೋರ್ಡ್‌ ಫಾರ್‌ ಐಟಿ ಎಜ್ಯುಕೇಷನ್‌ ಸ್ಟ್ಯಾಂಡರ್ಡ್ಸ್‌ (BITES) ಸಹಯೋಗದಲ್ಲಿ ರೊಬೊಟಿಕ್ಸ್‌ ಆಟೋಮೇಷನ್‌ ಮತ್ತು ಇಂಡಸ್ಟ್ರಿ 4.0- ಚಾಲಿತ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಮೇಲೆ ಕೇಂದ್ರಿಕರಿಸಿದ ಮುಂದುವರಿದ ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮ ಜರುಗಿತು.

ಬೆಂಗಳೂರನ್ನು ಗ್ರೇಟರ್‌ ಮಾಡಲು ಬದ್ಧ

ಬೆಂಗಳೂರನ್ನು ಗ್ರೇಟರ್‌ ಮಾಡಲು ಬದ್ಧ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ ಏಳು ಸಾವಿರ ಕೋಟಿ ಅನುದಾನದೊಂದಿಗೆ, ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡಲು ಸಾವಿರಾರು ಕೋಟಿ ವ್ಯಯಿಸಲು ಸಿದ್ಧ. ಬೆಂಗಳೂರು ಒಂದು ನಗರವಷ್ಟೆ ಅಲ್ಲ. ಇದು ಅಸಂಖ್ಯಾತ ಕನಸುಗಳ ನೆಲೆಬೀಡು.

ಸಿಎಂ ಬದಲಾವಣೆ ವಿಚಾರ; ಬಜೆಟ್‌ ಬೆನ್ನಲ್ಲೇ ಶಾಕಿಂಗ್‌ ಹೇಳಿಕೆ ನೀಡಿದ ಸಿದ್ದರಾಮಯ್ಯ!

ಸಿಎಂ ಬದಲಾವಣೆ ವಿಚಾರ ಶಾಕಿಂಗ್‌ ಹೇಳಿಕೆ ನೀಡಿದ ಸಿದ್ದರಾಮಯ್ಯ!

Karnataka CM row: ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ವೇಳೆ ಮಾಧ್ಯಮಗಳ ಜತೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಇನ್ನೆರಡು ಬಜೆಟ್‌ ನೀವೇ ಮಂಡಿಸುತ್ತೀರಾ ಎಂಬ ಪ್ರಶ್ನೆಗೆ ಅವರು ನೀಡಿರುವ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Loading...