ಬೆಂಗಳೂರು, ಮಾ.17: ಮುಂಬರುವ ಯುಗಾದಿ (Ugadi) ಮತ್ತು ರಂಜಾನ್ (Ramzan) ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC buses) ಮಹತ್ವದ ನಿರ್ಧಾರ ಕೈಗೊಂಡಿದೆ. ಹಬ್ಬದ ಪ್ರಯುಕ್ತ ರಾಜ್ಯದ ವಿವಿಧೆಡೆಗೆ ಹಾಗೂ ಹೊರರಾಜ್ಯಗಳಿಗೆ ಒಟ್ಟು 2000 ಹೆಚ್ಚುವರಿ ಬಸ್ಗಳನ್ನು ಓಡಿಸಲು ನಿಗಮವು ಸಜ್ಜಾಗಿದೆ.
ಯಾವಾಗ ಕಾರ್ಯಾಚರಣೆ?
ಮಾರ್ಚ್ 18, 19 ಮತ್ತು 20, 2026: ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರರಾಜ್ಯಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ.
ಮಾರ್ಚ್ 22, 2026: ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಬಸ್ ಎಲ್ಲಿಂದ ಲಭ್ಯ?
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಇಲ್ಲಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ಕಲಬುರಗಿ, ಬಳ್ಳಾರಿ, ಹೊಸಪೇಟೆ, ಯಾದಗಿರಿ, ಬೀದರ್ ಹಾಗೂ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಕಡೆಗಳಿಗೆ ಬಸ್ಗಳು ಹೊರಡಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗವಾಗಿ ಸಂಚರಿಸುವ ಬಸ್ಗಳು ಇಲ್ಲಿಂದ ಲಭ್ಯವಿರುತ್ತವೆ.
ಪ್ರಯಾಣಿಕರೇ ಗಮನಿಸಿ; ಯುಗಾದಿ, ರಂಜಾನ್ ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್ಗಳ ಸಂಚಾರ
ಪ್ರಯಾಣಿಕರಿಗೆ ಭರ್ಜರಿ ರಿಯಾಯಿತಿ
ಪ್ರಯಾಣಿಕರನ್ನು ಉತ್ತೇಜಿಸಲು ಕೆಎಸ್ಆರ್ಟಿಸಿ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ:
ಗುಂಪು ರಿಯಾಯಿತಿ: ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಸಿಗಲಿದೆ.
ರೌಂಡ್ ಟ್ರಿಪ್ ರಿಯಾಯಿತಿ: ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಬುಕ್ ಮಾಡಿದರೆ, ಬರುವ ಪ್ರಯಾಣದ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿ ರಾಜ್ಯಗಳ ಪ್ರಮುಖ ನಗರಗಳಲ್ಲಿನ ಕೌಂಟರ್ಗಳ ಮೂಲಕವೂ ಮುಂಗಡ ಬುಕ್ಕಿಂಗ್ ಮಾಡಬಹುದು. ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಹೋಗುವ ಮುನ್ನ ತಮ್ಮ ಟಿಕೆಟ್ನಲ್ಲಿ ನಮೂದಿಸಿರುವ ಪಿಕ್ಅಪ್ ಪಾಯಿಂಟ್ ಅನ್ನು ಗಮನಿಸಬೇಕು. ಹೆಚ್ಚಿನ ವಿವರಗಳಿಗಾಗಿ ಮತ್ತು ಟಿಕೆಟ್ ಬುಕ್ಕಿಂಗ್ಗಾಗಿ ನಿಗಮದ ಅಧಿಕೃತ ವೆಬ್ಸೈಟ್ ksrtc.karnataka.gov.in ಅಥವಾ ksrtc.in ಗೆ ಭೇಟಿ ನೀಡಬಹುದು.