ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ದಾಖಲೆ ಬರೆದ ನಮ್ಮ ಮೆಟ್ರೋ, ಒಂದೇ ದಿನದಲ್ಲಿ 9.66 ಲಕ್ಷ ಜನ ಪ್ರಯಾಣ

ಬೆಂಗಳೂರು ಮೆಟ್ರೋ (Namma Metro) ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು. ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ.

ದಾಖಲೆ ಬರೆದ ನಮ್ಮ ಮೆಟ್ರೋ, ಒಂದೇ ದಿನದಲ್ಲಿ 9.66 ಲಕ್ಷ ಜನ ಪ್ರಯಾಣ

ನಮ್ಮ ಮೆಟ್ರೋದಲ್ಲಿ ಬುಧವಾರದ ಜನಜಂಗುಳಿ

ಹರೀಶ್‌ ಕೇರ ಹರೀಶ್‌ ಕೇರ Jun 5, 2025 3:52 PM

ಬೆಂಗಳೂರು: ಸಂಭ್ರಮಾಚರಣೆಗಾಗಿ ನಿನ್ನೆ ಬೆಂಗಳೂರಿಗೆ (Bengaluru) ಆಗಮಿಸಿದ ಆರ್​​ಸಿಬಿ (RCB) ಐಪಿಎಲ್‌ (IPL) ಕ್ರಿಕೆಟ್‌ ತಂಡವನ್ನು ನೋಡಲೆಂದು ಅಭಿಮಾನಿಗಳು ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನತ್ತ (Chinnaswamy Stadium) ಹರಿದುಬಂದ ಪರಿಣಾಮ, ನಮ್ಮ ಮೆಟ್ರೋ ಕೂಡ ದಾಖಲೆ ಸೃಷ್ಟಿಸಿದೆ. ನಿನ್ನೆ ಒಂದೇ ದಿನ ನಮ್ಮ ಮೆಟ್ರೋದಲ್ಲಿ (Namma Metro) 9,66,732 ಜನರು ಪ್ರಯಾಣ ಮಾಡುವ ಮೂಲಕ ಮೆಟ್ರೋ ದಾಖಲೆ ಬರೆದಿದೆ.

ಇದೇ ಸಂದರ್ಭದಲ್ಲಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಕೂಡ ಉಂಟಾಗಿ 11 ಜನ ಸತ್ತಿದ್ದರು. ಕಾಲ್ತುಳಿತದ ಸುದ್ದಿ ಬರುತ್ತಲೇ, ಇತ್ತ ಬರುವ ಜನಸಂದಣಿಯನ್ನು ನಿಯಂತ್ರಿಸಲು ಕಬ್ಬನ್‌ ಪಾರ್ಕ್‌ ಸೇರಿದಂತೆ ಮೂರು ಸ್ಟೇಶನ್‌ಗಳಲ್ಲಿ ಮೆಟ್ರೋ ರೈಲುಗಳನ್ನೇ ತಡೆಹಿಡಿಯಲಾಗಿತ್ತು.

ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು. ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದರೆ, ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್​ (ಹಸಿರು ಮಾರ್ಗದಲ್ಲಿ) 2,84,674 ಜನರು ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್​ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ. ಒಟ್ಟಾರೆ ನಿನ್ನೆ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9,66,732 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.

ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ. ಕಬ್ಬನ್ ಪಾರ್ಕ್, ವಿಧಾನಸೌಧ, ಎಂಜಿ ರಸ್ತೆ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗಿತ್ತು ಎಂದು ಬಿಎಂಆರ್‌ಸಿಎಲ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಿನ್ನೆ ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದು, ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಸದ್ಯ ಈ ದುರಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ನಮ್ಮ ಮೆಟ್ರೋ ವಿಷಾದ ವ್ಯಕ್ತಪಡಿಸಿದೆ.



ಈ ಬಗ್ಗೆ ಟ್ವೀಟ್​ ಮಾಡಿರುವ ಮೆಟ್ರೋ, ನಿನ್ನೆ ಸಂಭವಿಸಿದ ದುರದೃಷ್ಟಕರ ಘಟನೆಯಿಂದ ನಾವು ಅತೀವವಾಗಿ ದುಃಖಿತರಾಗಿದ್ದೇವೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ, ನಾವು ಶೋಕಾಚರಣೆ ಮಾಡುತ್ತೇವೆ ಮತ್ತು ಈ ದುರಂತದಿಂದ ಬಾಧಿತರಾದ ಕುಟುಂಬಗಳಿಗೆ ನಮ್ಮ ಹೃದಯಪೂರ್ವಕ ಸಂತಾಪವನ್ನು ಸೂಚಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Bengaluru Stampede: ಕಾಲ್ತುಳಿತ ದುರಂತ, ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿದ ಹೈಕೋರ್ಟ್‌