ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Internal reservation: ಒಳ ಮೀಸಲಾತಿ ಕುರಿತಂತೆ ಆ.16ರೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸಿ: ಎ.ನಾರಾಯಣಸ್ವಾಮಿ ಆಗ್ರಹ

A Narayanaswamy: ಮಂತ್ರಿಮಂಡಲಕ್ಕೆ ಸಾಮಾಜಿಕ ನ್ಯಾಯದ ಬದ್ಧತೆ ಇದ್ದರೆ, 16ರಂದು ಒಳ ಮೀಸಲಾತಿ ಕುರಿತು ಪ್ರಕಟಿಸಬೇಕು. ಇಲ್ಲವಾದರೆ 16ರ ನಂತರ ಅಸಹಕಾರ ಚಳವಳಿ ಮೂಲಕ ಈ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ಬೆಂಗಳೂರು: ಇದೇ 16ರೊಳಗೆ ಒಳ ಮೀಸಲಾತಿ ಕುರಿತಂತೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ 16ರ ನಂತರ ಅಸಹಕಾರ ಚಳವಳಿ ಮೂಲಕ ಈ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ (A Narayanaswamy) ಎಚ್ಚರಿಸಿದ್ದಾರೆ. ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಅನುಷ್ಠಾನದ ಸಂಬಂಧ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ವರದಿಗಳ ಒಟ್ಟಾರೆ ಸಾರಾಂಶವನ್ನು ನೋಡಿದರೆ ಶೇ. 6 ಬದಲಾಗಿ 7, 8 ಶೇಕಡಾ ಮೀಸಲಾತಿ ಕೊಡಬೇಕು; ಕೇವಲ ಮೀಸಲಾತಿ ನೀಡುವುದಲ್ಲ. ವಿಶೇಷವಾದ ಯೋಜನೆಗಳನ್ನು ಸರ್ಕಾರವು ಘೋಷಿಸಬೇಕು ಎಂದು ಆಗ್ರಹಿಸಿದರು.

ಸಿಇಟಿಯಲ್ಲಿ ಅತ್ಯಲ್ಪ ಪ್ರಮಾಣದಲ್ಲಿ ಮಾದಿಗರು ಉತ್ತೀರ್ಣರಾಗಿದ್ದಾರೆ. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿ ಪ್ರಮಾಣವು 2,500 ಇದ್ದರೆ, ನಾವು ಕೇವಲ 600 ಜನರು ದಾಖಲಾಗಿದ್ದೇವೆ. ಇದು ನಮ್ಮ ಶೈಕ್ಷಣಿಕ ಸ್ಥಿತಿಗತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Karnataka Rains: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ!

ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ಶಿಫಾರಸು ಮಾಡಿದ್ದಾರೆ. ಆ ಜನಸಂಖ್ಯೆಯಲ್ಲೂ 36.69 ಲಕ್ಷ ಜನ ನಾವಿದ್ದೇವೆ. ಇನ್ನೊಂದು ಸಮುದಾಯ ಸೇರಿದರೆ 41 ಲಕ್ಷ ಮಾದಿಗರು ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು. ಹಿಂದುಳಿದಿರುವಿಕೆ ಆಧಾರದಲ್ಲಿ ಮೀಸಲಾತಿ ಕೊಡಬೇಕೆಂದು ಸುಪ್ರೀಂ ಕೋರ್ಟಿನ ತೀರ್ಪು ತಿಳಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.