Job creation: ರಾಜ್ಯದಲ್ಲಿ 15,441 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 5,277 ಉದ್ಯೋಗ ಸೃಷ್ಟಿ
Job creation: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ 65 ನೇ ಸಭೆಯಲ್ಲಿ 4 ಹೊಸ ಬಂಡವಾಳ ಹೂಡಿಕೆ ಯೋಜನೆಗಳು ಹಾಗೂ 2 ಹೆಚ್ಚುವರಿ ಬಂಡವಾಳ ಹೂಡಿಕೆ / ತಿದ್ದುಪಡಿ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ರಾಜ್ಯದಲ್ಲಿ 15,441.17 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 5,277 ಜನರಿಗೆ ಉದ್ಯೋಗಾವಕಾಶಗಳು (Job creation) ಲಭ್ಯವಾಗಲಿವೆ.
ಶ್ರೀ ಸಿಮೆಂಟ್ ಲಿಮಿಟೆಡ್ನ 2,406 ಕೋಟಿ ರೂ., ದಾಲ್ಮಿಯಾ ಸಿಮೆಂಟ್ (ಭಾರತ್) ಲಿಮಿಟೆಡ್ನ 3,000 ಕೋಟಿ ರೂ., ದಾಲ್ಮಿಯಾ ಸಿಮೆಂಟ್ (ಭಾರತ್) ಲಿಮಿಟೆಡ್ನ 3020 ಕೋಟಿ ರೂ. ಮೊತ್ತದ ಇನ್ನೊಂದು ಯೋಜನೆ ಹಾಗೂ ಎಂವೀ ಎನರ್ಜಿ ಪ್ರೈವೇಟ್ ಲಿಮಿಟೆಡ್ನ 5,495 ಕೋಟಿ ರೂ. ಸೇರಿದಂತೆ ಒಟ್ಟಾರೆ 13,921 ಕೋಟಿ ಮೊತ್ತದ ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ಒಟ್ಟಾರೆ 3,948 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು:
ಕಲರ್ಟೋನ್ ಟೆಕ್ಸ್ಟೈಲ್ಸ್ ಪ್ರೈವೇಟ್ ಲಿಮಿಟೆಡ್ನ 190.17 ಕೋಟಿ ರೂ., ಬಾಷ್ ಅಟೊಮೋಟಿವ್ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ 1,330 ರೂ. ಕೋಟಿ ಸೇರಿದಂತೆ ಒಟ್ಟು 1520.17 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೂ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 1329 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ತಿದ್ದುಪಡಿ ಯೋಜನೆಗಳ ಪ್ರಸ್ತಾವನೆಗಳನ್ನು ಕಾರ್ಯಗತಗೊಳಿಸಲು ಸಮಯ ವಿಸ್ತರಣೆಗೆ ಮತ್ತು ಹೆಚ್ಚುವರಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮಿತಿಯು ಒಪ್ಪಿಗೆ ನೀಡಿದೆ.
- ಜೆಎಸ್ಡಬ್ಲ್ಯು ನಿಯೊ ಎನರ್ಜಿ ಲಿಮಿಟೆಡ್ - 300 ಮೆಗಾವಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ
- ಎಕ್ಸೈಡ್ ಇಂಡಸ್ಟ್ರೀಸ್ ಲಿಮಿಟೆಡ್ -ಅತ್ಯಾಧುನಿಕ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್- ಹಂತ-2 ರಲ್ಲಿ 20 ಎಕರೆ ಹೆಚ್ಚುವರಿ ಭೂಮಿ ಹಂಚಿಕೆ.
- ಎಸ್ಎಲ್ಆರ್ ಮೆಟಾಲಿಕ್ಸ್ ಲಿಮಿಟೆಡ್ - 2027-28 ರವರೆಗೆ 2 ಹಂತಗಳಲ್ಲಿ ಯೋಜನೆಯ ಅನುಷ್ಠಾನ
- ರಸಶ್ರೀ ಟೆಕ್ ಪಾರ್ಕ್ ಎಲ್ಎಲ್ಪಿ - ಇಂಟಿಗ್ರೇಟೆಡ್ ಟೌನ್ಶಿಪ್ ಸ್ಥಾಪನೆ
- ವನ್ಯಾ ಸ್ಟೀಲ್ಸ್ ಪ್ರೈವೇಟ್ ಲಿಮಿಟೆಡ್ – ಮೃದು ಕಬ್ಬಿಣ, ರೋಲಿಂಗ್ ಮಿಲ್, 34 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಸ್ಥಾವರ ಸ್ಥಾಪನೆ
- ಇಂಡಿಯನ್ ಕೇನ್ ಪವರ್ ಲಿಮಿಟೆಡ್- ಸಕ್ಕರೆ ಕಾರ್ಖಾನೆ ಹಾಗೂ 70 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಸ್ಥಾವರ ಸ್ಥಾಪನೆ
- ಖಯಾತಿ ಪೈಪ್ಸ್ ಆ್ಯಂಡ್ ಪವರ್ ಪ್ರೈವೇಟ್ ಲಿಮಿಟೆಡ್ನ ಸಮಗ್ರ ಉಕ್ಕು ಸ್ಥಾವರ
- ಜಿಎಂ ಶುಗರ್ ಆ್ಯಂಡ್ ಎನರ್ಜಿ ಲಿಮಿಟೆಡ್ನ ಉತ್ಪಾದನಾ ಸಾಮರ್ಥ್ಯ ಹೆಚ್ಚಳ
- ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ನ - ಲೈಮ್ಸ್ಟೋನ್ ಉತ್ಪಾದನಾ ಘಟಕ ಸ್ಥಾಪನೆ
- ಯುಫ್ಲೆಕ್ಸ್ ಲಿಮಿಟೆಡ್ನ - ಪಾಲಿಯೆಸ್ಟರ್ ಫಿಲ್ಮ್ ತಯಾರಿಕಾ ಘಟಕ ಸ್ಥಾಪನೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ, ಇಂಧನ ಸಚಿವ ಕೆ. ಜೆ. ಜಾರ್ಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ ಸಿಂಗ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | CM Siddaramaiah: ಯೋಧರ ಕ್ಯಾಂಟೀನ್ಗೆ ಅಬಕಾರಿ ಸುಂಕ ಇಲ್ಲ- ಸಿಎಂ ಘೋಷಣೆ
ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ: ಸಚಿವರಿಗೆ ಸಿಎಂ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು ಮೇ 30, 31 ರಂದು ಡಿಸಿ, ಸಿಇಒ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು
- ರಾಜ್ಯದಲ್ಲಿ 170 ತಾಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
- ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಲಾಗಿದೆ.
- ಮೇ 26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
- ಮೇ 26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.
ಈ ಸುದ್ದಿಯನ್ನೂ ಓದಿ | Karnataka weather: ಹವಾಮಾನ ವರದಿ; ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ