ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagalkot News: ಬೈಕ್‌ ಸೈಡ್‌ಗೆ ಹಾಕುವ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಮಾರಾಮಾರಿ; ಮೂವರಿಗೆ ಗಾಯ

Bagalkot News: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಬೈಕ್ ಸೈಡ್‌ಗೆ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಬೈಕ್‌ ಸೈಡ್‌ಗೆ ಹಾಕುವ ವಿಚಾರಕ್ಕೆ ಮಾರಾಮಾರಿ; ಮೂವರಿಗೆ ಗಾಯ

Profile Prabhakara R Jun 21, 2025 4:04 PM

ಬಾಗಲಕೋಟೆ: ಬೈಕ್ ಸೈಡ್‌ಗೆ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್, ಮಚ್ಚು, ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದರಿಂದ ಮೂವರು ಗಾಯಗೊಂಡಿದ್ದಾರೆ. ಬಾಗಲಕೋಟೆ (Bagalkot News) ಜಿಲ್ಲೆಯ ಇಳಕಲ್ ನಗರದಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹೊಡೆದಾಟದ ಭಯಂಕರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಇಳಕಲ್ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಬಾಗಲಕೋಟ ಜಿಲ್ಲೆಯ ಇಲಕಲ್ ನಗರದಲ್ಲಿ ರಸ್ತೆಗೆ ಅಡ್ಡಲಾಗಿ ನಿಂತ ವಾಹನವನ್ನು ಸೈಡಿಗೆ ಹಾಕುವ ವಿಚಾರವಾಗಿ ಜಗಳ ನಡೆದಿದೆ. ದಾದಾಪೀರ್ ಜಕ್ಕಲಿ, ಶಾಮಿದ್ ರೇಶ್ಮಿ, ರಮಜಾನ್ ಬನ್ನು ಎಂಬ ಯುವಕರ ಮೇಲೆ ತಲ್ವಾರ್‌, ಚಾಕು, ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ.

ದಾದಾಪಿರ್ ಜಕ್ಕಲಿ ಟೀಂ ಹಾಗೂ ಶಾಮೀದ್ ರೇಶ್ಮಿ, ರಮಜಾನ್ ಬನ್ನು ಎಂಬವರ ಮಧ್ಯೆ ಜಗಳ ನಡೆದಿದೆ. ದಾದಾಫಿರ್ ಜಕ್ಕಲಿ, ಮಹ್ಮದ್ ಜಕ್ಕಲಿ‌ ಸೇರಿ ಹತ್ತಕ್ಕೂ ಅಧಿಕ ಜನರ ಗುಂಪಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನೂ ಓದಿ | Viral News: ವಿಕಲಚೇತನ ಪತಿ ಮೇಲೆ ಪತ್ನಿಯ ರೌದ್ರಾವತಾರ; ಶಾಕಿಂಗ್‌ ವಿಡಿಯೊ ಇಲ್ಲಿದೆ

ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಮಚ್ಚಿನಿಂದ ಕೆಚ್ಚಲು ಕೊಯ್ದು ಗೋಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಹಸುವಿನ ಕೆಚ್ಚಲಿಗೆ (udder) ಮಚ್ಚಿನಿಂದ ಹೊಡೆದು ಕತ್ತರಿಸಿ ಅದನ್ನು ಹತ್ಯೆ (cow slaughter) ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರ (Yeshwantpur) ಸಮೀಪದ ಸೂಲಿವಾರದ ಬಳಿ ಮರಿಬಸವಯ್ಯ ಎಂಬುವವರ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು (Bengaluru Crime News) ಪೈಶಾಚಿಕತೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ಇದು ಎರಡನೇ ಬಾರಿಗೆ ಇಂಥ ಬರ್ಬರ ಕೃತ್ಯ ನಡೆಯುತ್ತಿದೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಸುವಿನ ರೋದನ ಕೇಳಿ ಓಡಿಬಂದ ಸ್ಥಳೀಯರು ಕೂಡಲೇ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ತೀವ್ರ ನೋವಿನಿಂದ ನರಳಿದ ಹಸು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಚುನಾವಣೆ ಸಂಬಂಧ ಇಲ್ಲಿನ ಎರಡು ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿತ್ತು, ಈ ಕಾರಣಕ್ಕೆ ದ್ವೇಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕಠಿಣ ಕ್ರಮ ಕೈಗೊಳ್ಳಲು ಸಂತ್ರಸ್ತ ಕುಟುಂಬ ಒತ್ತಾಯಿಸಿದೆ.

ಈ ಸುದ್ದಿಯನ್ನೂ ಓದಿ |Gururaj Gantihole: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಕೆಲ ತಿಂಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಹಸುವಿನ ಕೆಚ್ಚಲು ಕೊಯ್ದದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇದರ ಹಿಂದೆಯೇ ರಾಜ್ಯದ ಇನ್ನೂ ಕೆಲವು ಕಡೆ ಇಂಥ ಕೃತ್ಯಗಳು ನಡೆದಿದ್ದವು.