ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಪ್ರಲ್ಹಾದ್‌ ಜೋಶಿ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರನ್ನು ಭೇಟಿ ಮಾಡಿದ ಪ್ರಲ್ಹಾದ್‌ ಜೋಶಿ.

ನವದೆಹಲಿ, ಡಿ.17: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಮಾಹಿತಿ ನೀಡಿದ್ದಾರೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಲ್ಹಾದ್‌ ಜೋಶಿ ಅವರಿಗೆ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ. ಈ ರೈಲು ಮಾರ್ಗ ಕುರಿತು ಇಂದಷ್ಟೇ ಜೋಶಿ ಅವರು ಸಂಸತ್ ಭವನದಲ್ಲಿ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ರೈಲ್ವೆ ಸಚಿವರಿಂದ ತ್ವರಿತ ಸ್ಪಂದನೆ ದೊರೆತಿದೆ.

ಆಲಮಟ್ಟಿ - ಕುಷ್ಟಗಿ ನೂತನ ರೈಲ್ವೆ ಮಾರ್ಗದ ಸರ್ವೇ ಕಾರ್ಯ ಆಗಲೇ ಮುಗಿದಿದ್ದು, 2026ರ ಮೇ ಅಂತ್ಯದೊಳಗೆ DPR ತಯಾರಾಗಲಿದೆ ಎಂದು ಖುದ್ದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೇ ಪ್ರಲ್ಹಾದ್‌ ಜೋಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಈ ನೂತನ ರೈಲು ಮಾರ್ಗದ ಕುರಿತು

ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಅವರು ಸಚಿವ ಪ್ರಲ್ಹಾದ್‌ ಜೋಶಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈ ರೈಲು ಮಾರ್ಗದ ಅಗತ್ಯತೆ ಮನಗಂಡು ಸಚಿವ ಜೋಶಿ ಅವರು ಬುಧವಾರ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿದ್ದರು. ಇದೀಗ ಜೋಶಿ ಅವರ ಒತ್ತಾಸೆಯಂತೆ ರೈಲ್ವೆ ಸಚಿವರು ನೂತನ ರೈಲು ಮಾರ್ಗಕ್ಕೆ ಸಮ್ಮತಿ ಸೂಚಿಸಿದ್ದಾರೆ.

Hardware Hackathon: ಸಿಲಿಕಾನ್ ಸಿಟಿಯ ಎಂಜಿನಿಯರ್‌ಗಳಿಗೆ 'ಜರ್ನಿ ಟು ಮಾರ್ಸ್' ಸವಾಲು; ಜಯನಗರದಲ್ಲಿ ₹2 ಲಕ್ಷ ಬಹುಮಾನದ ಹ್ಯಾಕಥಾನ್!

ಕೇಂದ್ರ ಸರ್ಕಾರ, ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚು ಹೆಚ್ಚು ಕಲ್ಪಿಸುವ ಮೂಲಕ ವಾಣಿಜ್ಯೋದ್ಯಮ ಜತೆಗೆ ಸಂಚಾರ ಸುವ್ಯವಸ್ಥೆಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದಿರುವ ಪ್ರಲ್ಹಾದ್‌ ಜೋಶಿ, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಿಗೆ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದ್ದಾರೆ