ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bellary News: ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

Boy Dies: ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಬಾಲಕನನ್ನು ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ, ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ (Bellary News) ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ.

ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದರು. ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿ ನಾಪತ್ತೆ, ʼನಮ್ಮೂರಿಗೆ ಬೇಡʼ ಎಂದು ರಾಯಚೂರಿನಲ್ಲಿ ಪ್ರತಿಭಟನೆ