Bellary Accident: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು, 12 ಮಂದಿಗೆ ಗಾಯ
Road Accident: ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಳ್ಳಾರಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ (Bellary Accident) ಸಿರಿಗೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಡಸಂದ್ರ ಗ್ರಾಮದ ನಿವಾಸಿ ಬಾಲಾನಾಯಕ್ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಪೀಣ್ಯ ಎಲಿವೆಟೇಡ್ ಫ್ಲೈಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ (Road Accident) ಸಂಭವಿಸಿದೆ. ಬೆಳಗ್ಗೆ 6:30ರ ಸುಮಾರಿಗೆ ರಸ್ತೆ ಅಪಘಾತ ನಡೆದಿದ್ದು, ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಪೀಣ್ಯ ಸಂಚಾರ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಪಘಾತದ ಸ್ಥಳದಲ್ಲಿ ಬೈಕ್ ಮತ್ತು ಬೈಕ್ ಸವಾರ ಬಿಟ್ಟು, ಬೇರೆ ಯಾವುದೇ ವಾಹನ ಇಲ್ಲವಾಗಿದ್ದು, ಅಪಘಾತ ಮಾಡಿರುವವರು ಯಾರು ಎಂಬುದು ತಿಳಿದುಬಂದಿಲ್ಲ. ಸದ್ಯ ಹಿಟ್ ಆಂಡ್ ರನ್ ಕೇಸ್ ದಾಖಲಿಸಲಾಗಿದೆ.
ಪೀಣ್ಯ ಸಂಚಾರ ಪೊಲೀಸರು ಘಟನೆಯ ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಾಕ್ಷಿಗಳಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಡಿಕ್ಕಿ ಹೊಡೆದ ವಾಹನದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಪೊಲೀಸರು ವಾಹನದ ಗುರುತನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಈ ಘಟನೆಯನ್ನು ಭಾರತೀಯ ಕಾನೂನು ಸಂಹಿತೆಯ (BNS) ಸೆಕ್ಷನ್ 106ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಫ್ಲೈಓವರ್ ಕಾಂಕ್ರೀಟ್ ಬಿದ್ದು ಆಟೋ ಜಖಂ
ಬೆಂಗಳೂರಿನಲ್ಲಿ ಫ್ಲೈಓವರ್ ನಲ್ಲಿ ಕಾಂಕ್ರೀಟ್ ಬಿದ್ದು ಆಟೋ ಜಖಂಗೊಂಡಿದ್ದು, ಆಟೋ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಈಜೀಪುರ ಫ್ಲೈಓವರ್ ನಲ್ಲಿ ಮಧ್ಯರಾತ್ರಿ ಅವಘಡ ಸಂಭವಿಸಿದೆ. . ಫ್ಲೈಓವರ್ ಕಾಂಕ್ರೀಟ್ ಬಿದ್ದು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಳೆದ 10 ವರ್ಷಗಳಿಂದ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಫ್ಲೈಓವರ್ ಕಾಂಕ್ರೀಟ್ ಬೃಹತ್ ಪೀಸುಗಳು ಬೀಳುವ ಹಂತದಲ್ಲಿವೆ. ಜನರ ಸಂಚಾರಕ್ಕೆ ಮೊದಲೇ ಕಾಂಕ್ರೀಟ್ ಉದುರಿ ಬೀಳುತ್ತಿವೆ. ಆಡೋಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ: ಜಾವ ಯೆಜ್ಡಿ ರೋಡ್ಸ್ಟರ್ ಮೋಟಾರ್ ಬೈಕ್ ಬಿಡುಗಡೆ: ಗತವೈಭವ ಮರಳಿ ಪಡೆದ ಜಾವಾ
ಈಜಿಪುರ ಮೇಲ್ಸೇತುವೆ ನಿರ್ಮಾಣಕ್ಕೆ ಒಟ್ಟಾರೆ 176.11 ಕೋಟಿ ರೂ. ವೆಚ್ಚವಾಗಲಿದೆ, ಇದು ಮೂಲ ವೆಚ್ಚಕ್ಕಿಂತ 48.02 ಕೋಟಿ ರೂ. ಹೆಚ್ಚು. ಈಗಾಗಲೇ 52.08 ಕೋಟಿ ರೂ. ಪಾವತಿಸಲಾಗಿದೆ. ಈಜಿಪುರ ಫ್ಲೈಓವರ್ ಕಾಮಗಾರಿ ಶುರುವಾಗಿ ಸರಿಸುಮಾರು ಎಂಟು ವರ್ಷಗಳು ಕಳೆದಿವೆ.