ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basangouda Patil Yatnal: ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

Basangouda Patil Yatnal: ಶಾಸಕ ಯತ್ನಾಳ್ ಉಚ್ಚಾಟನೆ ಖಂಡಿಸಿ, ಬಿಜೆಪಿಗೆ ತಕ್ಕ ಪಾಠ ಕಲಿಸಲು ಶಾಸಕ ಬಸನಗೌಡ ಯತ್ನಾಳ್ ಅವರ ಬೆಂಬಲಿಗರು ಹೋರಾಟಕ್ಕೆ ಕರೆ ನೀಡಿದ್ದಾರೆ. ಷಢ್ಯಂತ್ರ ರೂಪಿಸಿರುವ ವೈರಿಗಳಿಗೆ ನಮ್ಮ ತಾಕತ್ತು ಏನೆಂದು ಸಾಬೀತು ಮಾಡೋಣ. ಎಲ್ಲರೂ ಒಂದಾಗಿ ರಾಜ್ಯವ್ಯಾಪಿ ಹೋರಾಟ ಶುರು ಮಾಡಬೇಕು ಎಂದು ಬೆಂಬಲಿಗರು ಕರೆ ನೀಡಿದ್ದಾರೆ.

ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

Profile Prabhakara R Mar 26, 2025 8:34 PM

ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basangouda Patil Yatnal) ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ಇದರಿಂದ ವಿಜಯಪುರದಲ್ಲಿ ಯತ್ನಾಳ್‌ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಒಬಿಸಿ ಮೋರ್ಚಾ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಮಂಡಳ ಅಧ್ಯಕ್ಷರಾದ ಹೂಗಾರ್ ಸಹ ವಾಟ್ಸ್‌ ಆ್ಯಪ್ ಮೂಲಕ ರಾಜೀನಾಮೆ ರವಾನಿಸಿದ್ದಾರೆ. ಯತ್ನಾಳ್ ಅವರ ಉಚ್ಚಾಟನೆಗೆ ವಿಜಯಪುರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷವನ್ನೇ ತೊರೆಯುವ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿ ಪಕ್ಷದ ಈ ನಿರ್ಧಾರದ ವಿರುದ್ಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು, ಯತ್ನಾಳ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಯತ್ನಾಳ್ ಉಚ್ಚಾಟನೆ ಖಂಡಿಸಿ, ಬಿಜೆಪಿಗೆ ತಕ್ಕ ಪಾಠ ಕಲಿಸಲು ಯತ್ನಾಳ್ ಅವರ ಬೆಂಬಲಿಗರು, ಅಭಿಮಾನಿಗಳು, ಹಿತೈಷಿಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಷಢ್ಯಂತ್ರ ರೂಪಿಸಿರುವ ವೈರಿಗಳಿಗೆ ನಮ್ಮ ತಾಕತ್ತು ಏನೆಂದು ಸಾಬೀತು ಮಾಡೋಣ. ಎಲ್ಲರೂ ಒಂದಾಗಿ ರಾಜ್ಯವ್ಯಾಪಿಯಲ್ಲಿ ಹೋರಾಟ ಶುರುವಾಗಲಿ ಎಂದು ಬೆಂಬಲಿಗರು ಕರೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ



ಸತ್ಯವಂತರಿಗಿದು ಕಾಲವಲ್ಲಎಂದ ಯತ್ನಾಳ್‌

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ಹೊರಹಾಕಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ಪುರಂದರ ದಾಸರ ಕೀರ್ತನೆ ಉಲ್ಲೇಖಿಸಿ, ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ. ಸತ್ಯವಂತರಿಗಿದು ಕಾಲವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ ವಿರುದ್ಧ ಮಾತನಾಡಿದ, ಏಕವ್ಯಕ್ತಿ ಧೋರಣೆ ತೆಗೆದುಹಾಕಿ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮನವಿ ಮಾಡಿದ್ದಕ್ಕಾಗಿ ಪಕ್ಷ ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ. ನೇರ ನಿಷ್ಠುರವಾಗಿ ಮಾತನಾಡಿದ್ದಕ್ಕೆ ಪಕ್ಷವು ನನಗೆ ಈ ಬಹುಮಾನ ನೀಡಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ.

ನನ್ನನ್ನು ಅಮಾನತುಗೊಳಿಸುವ ನಿರ್ಧಾರದಿಂದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿ, ಹಿಂದುತ್ವದ ಪರ ನನ್ನ ಹೋರಾಟಕ್ಕೆ ಅಡ್ಡಿಯಾಗುವುದಿಲ್ಲ. ನಾನು ಅದೇ ಹುರುಪು ಮತ್ತು ದೃಢತೆಯಿಂದ ನನ್ನ ಜನರ ಸೇವೆ ಮುಂದುವರಿಸುತ್ತೇನೆ. ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಸ್ನೇಹಿತರು, ಪರಿಚಿತರು, ಸ್ವಾಮೀಜಿಗಳು, ಮಾಧ್ಯಮಗಳು, ನನ್ನ ಕುಟುಂಬಕ್ಕೆ ಮತ್ತು ಭಗವಂತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಇದನ್ನು ಬರೆಯುತ್ತಿರುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ ಎಂದು "ಸತ್ಯವಂತರಿಗಿದು ಕಾಲವಲ್ಲ" ಕೀರ್ತನೆಯನ್ನು ಸ್ಮರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ; ಅಧಿಕಾರ ಉಳಿಯುತ್ತ?