31 ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಾಮಿಕ ರೋಗ ಕಾರಣ: ಈಶ್ವರ್ ಖಂಡ್ರೆ
Blackbucks Death: ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಟ್ಟು 38 ಕೃಷ್ಣಮೃಗಗಳಲ್ಲಿ 31 ಪ್ರಾಣಿಗಳು ಮೃತಪಟ್ಟಿದ್ದವು. ಉಳಿದ 7 ಕೃಷ್ಣಮೃಗಗಳನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂರಕ್ಷಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕೃಷ್ಣಮೃಗ ಸಾಂದರ್ಭಿಕ ಚಿತ್ರ. -
ಬೆಳಗಾವಿ, ಡಿ.9: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳು 'ಹೆಮರಾಜಿಕ್ ಸೆಫ್ಟಿಸೆಮಿಯಾ' ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ. ಮುನ್ನೆಚ್ಚರಿಕೆ / ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧೀನದಲ್ಲಿರುವ ಎಲ್ಲಾ ಮೃಗಾಲಯಗಳ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರಾದ ಈಶ್ವರ್ ಖಂಡ್ರೆ ಉತ್ತರಿಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಮೃತಪಟ್ಟ ಪ್ರಕರಣದಲ್ಲಿ, ಬೆಂಗಳೂರಿನ ಹೆಬ್ಬಾಳದ ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೈವಿಕ ಸಂಸ್ಥೆಯ ನುರಿತ ಪಶುವೈದ್ಯಾಧಿಕಾರಿ ಹಾಗೂ ತಜ್ಞರು ಮೃಗಾಲಯಕ್ಕೆ ಭೇಟಿ ನೀಡಿ ಮೃತ ಪ್ರಾಣಿಗಳನ್ನು ಪರಿಶೀಲಿಸಿದ್ದು, ಸಾವಿನ ಕಾರಣ ಪತ್ತೆ ಹಚ್ಚಲು ಮೃತಪಟ್ಟ ಪ್ರಾಣಿಗಳ ಮಾದರಿಯನ್ನು (Blood samples and organs) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಸುವರ್ಣಸೌಧದಲ್ಲಿ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ
ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಟ್ಟು 38 ಕೃಷ್ಣಮೃಗಗಳಲ್ಲಿ 31 ಪ್ರಾಣಿಗಳು ಮೃತಪಟ್ಟಿದ್ದವು. ಉಳಿದ 7 ಕೃಷ್ಣಮೃಗಗಳನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂರಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳೆ ನಷ್ಟ; ರೈತರಿಗೆ 2,249 ಕೋಟಿ ರೂ. ಪರಿಹಾರ
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ. 2023ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ. ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು. ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರ ನೀಡಿದರು.
ಯುಕೆಪಿ ಹಂತ-3 ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು
38 ಲಕ್ಷ ರೈತರಿಗೆ ಸುಮಾರು 4,300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ ಎಂದು ಮಾಹಿತಿ ನೀಡಿದರು.