Sanju Basayya: ಪತ್ನಿಗೆ ಅಶ್ಲೀಲ ಮೆಸೇಜ್; ಯುವಕನನ್ನು ಕರೆಸಿ ಬುದ್ಧಿವಾದ ಹೇಳಿದ ಹಾಸ್ಯ ನಟ ಸಂಜು ಬಸಯ್ಯ
Sanju Basayya: ಹಾಸ್ಯನಟ ಸಂಜು ಬಸಯ್ಯ ಪತ್ನಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಜತೆಗೆ ಅಶ್ಲೀಲ ಫೋಟೊಗಳನ್ನೂ ಕಳುಹಿಸಿದ್ದ. ಇದರಿಂದ ಸಂಯಮ ಕಳೆದುಕೊಳ್ಳದ ಸಂಜು ಬಸಯ್ಯ, ಆ ಯುವಕನನ್ನು ಬೈಲಹೊಂಗಲ ಪೊಲೀಸ್ ಠಾಣೆಗೆ ಕರೆಯಿಸಿ, ಬುದ್ಧಿವಾದ ಹೇಳಿದ್ದಾರೆ.


ಬೆಳಗಾವಿ: ಪತ್ನಿಗೆ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನನ್ನು ಹಾಸ್ಯನಟ ಸಂಜು ಬಸಯ್ಯ ಅವರು ಪೊಲೀಸ್ ಠಾಣೆಗೆ ಕರೆಯಿಸಿ ಬುದ್ಧಿ ಹೇಳಿ ಕಳುಹಿಸುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ (Pallavi Sanju Basayya) ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ.
ಅಶ್ಲೀಲ ಮೆಸೇಜ್ ಜತೆಗೆ ಅಶ್ಲೀಲ ಫೋಟೊಗಳನ್ನೂ ಕಳುಹಿಸಿದ್ದ. ಇದರಿಂದ ಸಂಯಮ ಕಳೆದುಕೊಳ್ಳದ ಸಂಜು ಬಸಯ್ಯ, ಬೈಲಹೊಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಅಶ್ಲೀಲ ಸಂದೇಶ ಕಳುಹಿಸಿದ ಯುವಕನನ್ನು ಕರೆಯಿಸಿ ಬುದ್ಧಿ ಹೇಳಿ ಕಳುಹಿಸಿದ್ದಾರೆ.
ಯುವಕನ ಭವಿಷ್ಯ ಹಾಳಾಗಬಾರದೆಂದು ಸಂಜು ಬಸಯ್ಯ ಅವರು ಬುದ್ಧಿ ಹೇಳಿ ಕಳುಹಿಸಿದ್ದಾರೆ. ಈ ಮೂಲಕ ಇಂತಹುದೇ ಪ್ರಕರಣದಲ್ಲಿ ಬಂಧನವಾಗಿದ್ದ ನಟ ದರ್ಶನ್ಗೆ ಸಂಜು ಬಸಯ್ಯ ಮಾದರಿಯಾಗಿದ್ದಾರೆ.
ಈ ಬಗ್ಗೆ ಯುವಕ ಮಾತನಾಡಿ, ನಾನು ಬಹಳ ದಿವಸದಿಂದ ಇನ್ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನು ಕರೆಸಿ, ಶಿಕ್ಷೆ ಕೊಟ್ಟಿದ್ದಾರೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ನಾನು ಮಾಡಿದಂತೆ ಇನ್ಯಾರೂ ಈ ರೀತಿ ಮಾಡಬೇಡಿ. ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಸುದ್ದಿಯನ್ನೂ ಓದಿ | Actor Darshan: ನಟ ದರ್ಶನ್ಗೆ ಸ್ವಿಟ್ಜರ್ಲ್ಯಾಂಡ್ ವೀಸಾ ನಿರಾಕರಣೆ; ಲಕ್ಕಿ ಸ್ಟಾಟ್ಗೆ ತೆರಳಲು ಚಾಲೆಂಜಿಂಗ್ ಸ್ಟಾರ್ಗೆ ಇಲ್ಲ ಅನುಮತಿ
ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ

ಬೆಂಗಳೂರು: ಕನ್ನಡದ ಕಿರುತೆರೆ ನಟಿ (Kannada Small screen actress) ಹಾಗೂ ನಿರೂಪಕಿಗೆ ಗಂಡನೇ (Husband) ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ (Bengaluru crime news) ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ (Actress Manjula) ಅಲಿಯಾಸ್ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ.
ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು ಸೀರಿಯಲ್ಗಳಲ್ಲಿ ನಟಿಸಿದ್ದರು. ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಂಜುಳಾ ಮತ್ತು ಅಮರೇಶ್ 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಕುಟುಂಬ ಸಮೇತ ನಟಿ ಮಂಜುಳಾ, ಕೆಲವು ವರ್ಷಗಳಿಂದ ಹನುಮಂತನಗರದಲ್ಲಿ ಮನೆ ಲೀಸ್ಗೆ ಪಡೆದು ವಾಸವಿದ್ದರು. ನಟಿ ಶ್ರುತಿಯ ನಡವಳಿಕೆ ಗಂಡನಿಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೊರತೆ ಇದ್ದು, ಗಂಡ- ಹೆಂಡತಿ ಆಗಾಗ ಜಗಳವಾಡುತ್ತಿದ್ದರು.
ಕೆಲ ದಿನಗಳಿಂದ ನಟಿ ಶ್ರುತಿ ಗಂಡನನ್ನು ಬಿಟ್ಟು ಅಣ್ಣನ ಮನೆಯಲ್ಲಿದ್ದರು. ಕಳೆದ ಏಪ್ರಿಲ್ನಿಂದ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಮನೆ ಲೀಸ್ ಹಣಕ್ಕಾಗಿ ಜಗಳ ನಡೆದಿತ್ತು. ಈ ಸಂಬಂಧ ಶ್ರುತಿ ಹನುಮಂತ ನಗರ ಠಾಣೆಗೆ ದೂರು ಸಹ ನೀಡಿದ್ದರು. ಕಳೆದ ಗುರುವಾರವಷ್ಟೇ ರಾಜಿ ಸಂಧಾನ ಮಾಡಿಕೊಂಡು ಗಂಡನ ಜೊತೆಗೆ ಒಂದಾಗಿದ್ದರು.
ಶುಕ್ರವಾರ, ಮಕ್ಕಳ ಕಾಲೇಜಿಗೆ ಹೋದ ನಂತರ, ಗಂಡ ಅಮರೇಶ್ ಹೆಂಡತಿ ಮೇಲೆ ಹಲ್ಲೆ ನಡೆಸಿದ್ದಾನೆ. ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು, ತಲೆ ಕೂದಲು ಹಿಡಿದು ಗೋಡೆಗೆ ಗುದ್ದಿಸಿ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರುವುದಾಗಿ ಶ್ರುತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಆರೋಪಿ ಅಮರೇಶ್ನನ್ನು ಬಂಧಿಸಲಾಗಿದೆ. ಗಾಯಾಳು ಮಂಜುಳಾ @ ಶೃತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ಗೆ ದರ್ಶನ್ ಹಾಜರು, ವಿಚಾರಣೆ ಆ.12ಕ್ಕೆ ಮುಂದೂಡಿಕೆ