Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು
ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಳಗಾವಿ ವಕೀಲೆ ಪೂಜಾ ಕಾಕತಕರ್. -
ಬೆಳಗಾವಿ: ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Belagavi shootout) ನಡೆಸಿದ್ದಾರೆ. ನೆನ್ನೆ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್ ಮಾಡಿದ್ದು, ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಭಾವಿ ವಕೀಲೆಯಾಗಿರುವ ಪೂಜಾ ಕಾಕತಕರ್ ಅವರು ಕಳೆದ 18 ವರ್ಷಗಳಿಂದ ವಕೀಲೆ ವೃತ್ತಿಯಲ್ಲಿ ತೊಡಗಿದ್ದಾರೆ. ಹೈ ಪ್ರೊಫೈಲ್ ಕೇಸ್ಗಳ ಪರ ವಾದ ಮಾಡುತ್ತಿದ್ದರು. ಆದರೆ ನೆನ್ನೆ ರಾತ್ರಿ ದುಷ್ಕರ್ಮಿಗಳಿಂದ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ.

ಮನೆಯ ಮೊದಲ ಮಹಡಿಯಲ್ಲಿ ವಕೀಲೆ ಪೂಜಾ ಅವರ ಪುತ್ರಿ ಸಂಸ್ಕೃತಿ ಓದುತ್ತಾ ಕುಳಿತಿದ್ದರು ಎಂದು ತಿಳಿದು ಬಂದಿದ್ದು, ಗುಂಡಿನ ದಾಳಿಗೆ ಮನೆಯ ಗ್ಲಾಸ್ ಮೇಲೆ ಫೈರಿಂಗ್ ಮಾರ್ಕ್ ಬಿದ್ದಿದೆ. ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗುಂಡು ತಗುಲಿರೋ ಗ್ಲಾಸ್ ಅನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು, ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿರುವ ಬೆಳಗಾವಿ ಪೊಲೀಸರು, ವಕೀಲೆ ಪೂಜಾ ಅವರಿಗೆ ರಕ್ಷಣೆ ನೀಡುವ ಭರವಸೆಯನ್ನು ನೀಡಿದ್ದಾರೆ.
ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ
ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್ ಜಿಹಾದ್ ಆರೋಪ
ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.