Karnataka Winter Session: 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ; ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ಘೋಷಿಸಿದ ಸಿಎಂ
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -
ಬೆಳಗಾವಿ, ಡಿ.12: ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನ ಪರಿಷತ್ನಲ್ಲಿ (Karnataka Winter Session) ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಸದಸ್ಯರು ಮಾಹಿತಿ ಕೋರಿದ್ದರು. ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ10,1420 ಹುದ್ದೆ, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆ ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ರೈಲ್ವೆ ನೇಮಕಾತಿ ಮಂಡಳಿಯಿಂದ 8,860 ಹುದ್ದೆಗಳಿಗೆ ನೇಮಕಾತಿ
ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ
ಬೆಳಗಾವಿ, ಡಿ.12: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ.3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬಡ್ಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ರಾಜ್ಯ ಸರ್ಕಾರ ಒಲಿಂಪಿಕ್ಸ್, ಪಾರಾಒಲಿಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ಐಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬಡ್ಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.