ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Illegal Beef Transport: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಇಟ್ಟ ಹಿಂದೂ ಕಾರ್ಯಕರ್ತರು

Illegal Beef Transport: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಬಳಿ ಘಟನೆ ನಡೆದಿದೆ. ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಹೀಗಾಗಿ ಪರಿಶೀಲಿಸಿದಾಗ ಲಾರಿಯಲ್ಲಿ 5 ಟನ್ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಭಾರಿ ಪ್ರಮಾಣದ ಗೋಮಾಂಸ ಕಂಡು ರೊಚ್ಚಿಗೆದ್ದ ಕಾರ್ಯಕರ್ತರು, ಲಾರಿಗೆ ಬೆಂಕಿ ಇಟ್ಟಿದ್ದಾರೆ.

ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಇಟ್ಟ ಹಿಂದೂ ಕಾರ್ಯಕರ್ತರು

-

Prabhakara R Prabhakara R Sep 23, 2025 1:41 PM

ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಬಳಿ ನಡೆದಿದೆ. ಗೋಮಾಂಸ ತುಂಬಿದ್ದ 4 ಲಾರಿಗಳು, ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದವು. 4 ವಾಹನಗಳನ್ನು ತಡೆದು ಪರಿಶೀಲಿಸಿದಾಗ ಗೋಮಾಂಸ ಸಾಗಾಟ (Illegal Beef Transport) ಬಯಲಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು, ಗೋಮಾಂಸ ಸಮೇತ ಲಾರಿಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.

ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಹೀಗಾಗಿ ಪರಿಶೀಲಿಸಿದಾಗ KA71 2045 ನೋಂದಣಿ ಸಂಖ್ಯೆಯ ಲಾರಿಯಲ್ಲಿ 5 ಟನ್ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಭಾರಿ ಪ್ರಮಾಣದ ಗೋಮಾಂಸ ಕಂಡು ರೊಚ್ಚಿಗೆದ್ದ ಕಾರ್ಯಕರ್ತರು, ಲಾರಿಗೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿಯನ್ನೂ ಓದಿ | Bengaluru Woman Murder: ಅಕ್ರಮ ಸಂಬಂಧ ಶಂಕೆ; ಮಗಳೆದುರೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ 2ನೇ ಗಂಡ!

ಸ್ಥಳಕ್ಕೆ ಅಥಣಿ ಡಿವೈಎಸ್‌ಪಿ, ಕಾಗವಾಡ ಪೊಲೀಸರು ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಲಾರಿಯ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ‌ಕಾರ್ಯನಿರತರಾಗಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಅಡಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.