ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Assault Case: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮನ್‌ಗೆ ಹಿಗ್ಗಾಮುಗ್ಗಾ ಥಳಿತ!

Assault Cas: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ದುಪಧಾಳ ಗ್ರಾಮದಲ್ಲಿ ಘಟನೆ ನಡೆದಿದೆ. 17,146 ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ವಸೂಲಿಗೆಂದು ಲೈನ್‌ಮನ್‌ ತೆರಳಿದ್ದರು. ಆದರೆ, ಬಿಲ್‌ ಪಾವತಿಸಲು ಗ್ರಾಹಕ ನಿರಾಕರಿಸಿ ಲೈನ್‌ಮನ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮನ್‌ಗೆ ಹಿಗ್ಗಾಮುಗ್ಗಾ ಥಳಿತ!

Profile Prabhakara R Feb 22, 2025 8:47 PM

ಬೆಳಗಾವಿ: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋಗಿದ್ದ ಲೈನ್‌ಮನ್‌ನನ್ನು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ದುಪಧಾಳ ಗ್ರಾಮದಲ್ಲಿ ನಡೆದಿದೆ. 17,146 ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ವಸೂಲಿಗೆಂದು ಲೈನ್‌ಮನ್‌ ಪ್ರಮೋದ ಮಾಳಗಿ ಹೋಗಿದ್ದರು. ಆದರೆ, ಖಾದಿರಸಾಬ ಪಠಾಣ ಎಂಬ ಗ್ರಾಹಕ ಬಿಲ್‌ ಪಾವತಿಸಲು ನಿರಾಕರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಲೈನ್‌ಮನ್‌ ಮೇಲೆ ಹಲ್ಲೆ ಗ್ರಾಹಕ ನಡೆಸಿದ್ದಾರೆ ಎನ್ನಲಾಗಿದೆ. ಗೋಕಾಕ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲೈನ್‌ಮನ್‌ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಈ ಸುದ್ದಿಯನ್ನೂ ಓದಿ | Fraud Case: ವಿದೇಶದಲ್ಲಿ ಕೆಲಸದ ಆಮಿಷ ಒಡ್ಡಿ 51 ಜನರಿಗೆ ವಂಚಿಸಿದ ದಂಪತಿ ಬಂಧನ

ಮತ್ತೆ ಮೈಕ್ರೋ ಫೈನಾನ್ಸ್‌ ಕಿರುಕುಳ, ಗೃಹಸಚಿವರ ಕ್ಷೇತ್ರದಲ್ಲೇ ಇಬ್ಬರು ಆತ್ಮಹತ್ಯೆ

Dead Body

ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳ (Micro Finance Harassment) ತಡೆಯಲು ರಾಜ್ಯ ಸರಕಾರ (Karnataka government) ಸುಗ್ರೀವಾಜ್ಞೆ (Ordinance) ಜಾರಿ ಮಾಡಿದರೂ ಅದಕ್ಕೆ ಕಡಿವಾಣ ಬಿದ್ದಿಲ್ಲ. ಇದೀಗ ಗೃಹ ಸಚಿವರ (Home minister) ಕ್ಷೇತ್ರದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ವರದಿಯಾಗಿದೆ. ತುಮಕೂರಿನಲ್ಲಿ (Tumkur news) ಒಬ್ಬ ಆಟೋ ಚಾಲಕ ಹಾಗೂ ಓರ್ವ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

ಸುಗ್ರೀವಾಜ್ಞೆ ಜಾರಿ ಬಳಿಕವೂ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಂತಿಲ್ಲ. ಗೃಹ ಸಚಿವ ಪರಮೇಶ್ವರ್‌ ಅವರ ತವರಾದ ತುಮಕೂರಿನಲ್ಲಿಯೂ ಇದರಿಂದಾಗಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಲ್ಲಿ ಒಬ್ಬರು ಅಂಜನಮೂರ್ತಿ (35). ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ. ಫೈನಾನ್ಸ್ ಸಂಸ್ಥೆ ಕಿರುಕುಳದ ಕುರಿತು ವಿಡಿಯೋ ಮಾಡಿಟ್ಟು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ. ಈ ಸಂಬಂಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Micro Finance Ordinance: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಜಾರಿ; ಬಲವಂತದ ವಸೂಲಿಗೆ 10 ವರ್ಷ ಜೈಲು

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕುತ್ತಿಪುರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಂಡು ಅಜೀಜ್ ಉನಿಸಾ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಮದುವೆಗೆ ಅಜೀಜಾ ಅವರು 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್‌ಗಳಿಂದ ತೆಗೆದಿದ್ದರು. ಆಶೀರ್ವಾದ, ಸೂರ್ಯೋದಯ ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್‌ಗಳಿಂದ ಉನ್ನಿಸಾ ಅವರು ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.