ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಪರಿಶೀಲನೆ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ: ಮಧುಸೂದನ ಸಾಯಿ

ಬೆಳಗಾವಿ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಮಾತನಾಡಿದರು. -

Profile
Siddalinga Swamy Aug 11, 2026 11:12 PM

ಬೆಳಗಾವಿ, ಆ.11: ಉತ್ತರ ಕರ್ನಾಟಕದ ಮಹಿಳೆಯರಲ್ಲಿ ರಕ್ತಹೀನತೆ ದೊಡ್ಡ ಸಮಸ್ಯೆಯಾಗಿದೆ. ಇದರ ನಿವಾರಣೆಗೆ ಕೆಎಲ್‌ಇ ಸಂಸ್ಥೆಯ ಸಹಯೋಗದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕಾಂಶ ಆಹಾರ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ (Sadguru Sri Madhusudan Sai) ಹೇಳಿದರು. ನಗರದಲ್ಲಿ ಮಂಗಳವಾರ ನಡೆದ "ದಿವ್ಯ ಸಂಜೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ತಜ್ಞ ಮತ್ತು ಪ್ರಾಂಶುಪಾಲ ಡಾ ಸಿ.ಎನ್. ನಾಯ್ಕರ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ನಮ್ಮ ಆಸ್ಪತ್ರೆ ಆರಂಭವಾದ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಒಂದೇ ಒಂದು ನವಜಾತ ಶಿಶು ಮೃತಪಟ್ಟಿಲ್ಲ, ಪ್ರಸವದ ಸಂದರ್ಭದಲ್ಲಿ ಯಾವೊಬ್ಬ ಮಹಿಳೆಯ ಸಾವು ಆಗಿಲ್ಲ. ಮುಂದಿನ ದಿನಗಳಲ್ಲಿ ಇಡೀ ಬೆಳಗಾವಿ ಈ ಹಂತಕ್ಕೆ ಬರಲಿದೆ. ಇಲ್ಲಿನ ಮಹಿಳೆಯರ ಆರೋಗ್ಯ ಸುಧಾರಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಭರವಸೆ ನೀಡಿದರು.

Divya Sanje

“ಒಬ್ಬ ಮಹಿಳೆಗೆ ಪೌಷ್ಟಿಕಾಂಶ ಆಹಾರದ ಸೂತ್ರಾಧಾರಿತ ಪುಡಿ (ಸಾಯಿ ಶ್ಯೂರ್) ನೀಡಲು ಒಂದು ದಿನಕ್ಕೆ ಎರಡು ರೂಪಾಯಿ ಖರ್ಚು ಬರುತ್ತದೆ. ನಾವು ಒಂದು ರೂಪಾಯಿ ಖರ್ಚು ಮಾಡುತ್ತೇವೆ. ನೀವು (ಸಮಾಜ) ಒಂದು ರೂಪಾಯಿ ಸಹಯೋಗ ಕೊಡಿ" ಎಂದು ಸದ್ಗುರುಗಳು ಮನವಿ ಮಾಡಿದರು. ಆಗ ಸಭೆಯಲ್ಲಿದ್ದ ಕೆಎಲ್‌ಇ ಗೌರವಾಧ್ಯಕ್ಷ ಪ್ರಭಾಕರ ಕೋರೆ ಅವರು, "ನಮ್ಮ ಸಂಸ್ಥೆಯಿಂದ ಒಂದು ರೂಪಾಯಿ ಕೊಡುತ್ತೇವೆ" ಎಂದು ಭರವಸೆ ನೀಡಿದರು.

ಕೆಎಲ್‌ಇ ಸಂಸ್ಥೆ ಜತೆ ಕೆಲಸ ಮಾಡಲು ನಮಗೂ ಸಂತೋಷ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.

Belagavi News

"ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ" ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದರು.

ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಪಾಲ್ಗೊಂಡ ನೂರಾರು ನಾಗರಿಕರು ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ನೇತೃತ್ವದಲ್ಲಿ "ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್" ನಿರ್ವಹಿಸುತ್ತಿರುವ ಸೇವಾ ಚಟುವಟಿಕೆಗಳ ಅಗಾಧತೆಯ ಪರಿಚಯ ಮಾಡಿಕೊಂಡರು. ಬೆಳಗಾವಿ ಜಿಲ್ಲೆಯಲ್ಲಿ ಸಂಸ್ಥೆಯ ಕಾರ್ಯಚಟುವಟಿಕೆಗಳ ವಿಡಿಯೊ ಪ್ರದರ್ಶಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ನ ಅಧ್ಯಕ್ಷ ಡಾ ಬಿ.ಎನ್.ನರಸಿಂಹಮೂರ್ತಿ, ನಮ್ಮ ಹೃದಯದಲ್ಲಿರುವ ಜೀವಕಾರಣ್ಯವು ನಿಸ್ವಾರ್ಥ ಸೇವೆಯಾಗಿ ವ್ಯಕ್ತಗೊಂಡಾಗಲೇ ಕರುಣೆಯು ಸಾರ್ಥಕವಾಗುತ್ತದೆ. ಕಳೆದ 15 ವರ್ಷಗಳಿಂದ ಇದೇ ತತ್ತ್ವದಡಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು "ಒನ್ ವರ್ಲ್ಡ್‌ ಒನ್ ಫ್ಯಾಮಿಲಿ ಮಿಷನ್" ಸೇವಾ ಅಭಿಯಾನ ಮುನ್ನಡೆಸುತ್ತಿದ್ದಾರೆ ಎಂದು ವಿವರಿಸಿದರು.

Belagavi divya sanje

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನಲ್ಲಿರುವ ಶ್ರೀ ಸತ್ಯ ಸಾಯಿ ನಿತ್ಯನಿಕೇತನಂ ಗುರುಕುಲದ ವಿದ್ಯಾರ್ಥಿಗಳ ವೇದಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಕೊನೆಯಲ್ಲಿ "ಶ್ರೀ ಸತ್ಯ ಸಾಯಿ ಲೋಕ ಸೇವಾ ಗುರುಕುಲಂ" ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಾಕರ್ಷಕ ವಾದ್ಯಗೋಷ್ಠಿ (ಆರ್ಕೆಸ್ಟ್ರಾ) ಪ್ರಸ್ತುತಪಡಿಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ, ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕೆಎಲ್‌ಇ ಗೌರವಾಧ್ಯಕ್ಷ ಡಾ. ಪ್ರಭಾಕರ ಕೋರೆ, ನಿರ್ದೇಶಕರಾದ ಮಹಾಂತೇಶ್ ಕವಟಗಿಮಠ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಶ್ಯಾಮ್ ಘಾಟ್ಗೆ, ಬಿಜೆಪಿ ಮುಖಂಡ ಎಂ.ಬಿ.ಜಿರಲಿ, ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಎನ್‌.ವಿ.ಬರಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಪ್ರಶಾಂತಿ ಬಾಲ ಮಂದಿರ ಟ್ರಸ್ಟ್‌ನ ವಿಶ್ವಸ್ಥರಾದ ರಾಜಶೇಖರ್ ನಿರೂಪಿಸಿದರು.

ನಾನಿಲ್ಲಿ ನಿಲ್ಲಲು ನನ್ನ ಶಿಕ್ಷಕರೇ ಕಾರಣ: ವಿದ್ಯಾರ್ಥಿ

ಕಾರ್ಯಕ್ರಮದಲ್ಲಿ ತನ್ನ ಅನುಭವ ಹಂಚಿಕೊಂಡ ಬೆಳಗಾವಿ ಜಿಲ್ಲೆ ರಾಯಭಾಗದ ಸನ್ವಿನ್ ತನ್ನ ಬದುಕಿನಲ್ಲಿ ಸಂಸ್ಥೆಯ ಪ್ರಭಾವ ಮೆಲುಕು ಹಾಕಿ ಸದ್ಗುರುಗಳಿಗೆ ಕೃತಜ್ಞತೆ ಅರ್ಪಿಸಿದರು.

"ನನ್ನ ತಂದೆ ರಾಯಭಾಗದಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಾರೆ. ನಾನು ಈಗ ಕಲಬುರಗಿಯಲ್ಲಿರುವ ಶ್ರೀ ಸತ್ಯ ಸಾಯಿ ಪ್ರೇಮ ನಿಕೇತನಂ ಗುರುಕುಲದಲ್ಲಿ 10ನೇ ತರಗತಿ ಓದುತ್ತಿದ್ದೇನೆ. ನಾನು ಇಲ್ಲಿ ನಿಂತಿರುವುದು, ಇಂಗ್ಲಿಷ್‌ನಲ್ಲಿ ಮಾತನಾಡುವುದು, ನನ್ನಲ್ಲಿ ನೀವು ನೋಡುತ್ತಿರುವ ಆತ್ಮವಿಶ್ವಾಸ ನನ್ನ ಒಬ್ಬನ ಸಾಧನೆ ಅಲ್ಲ. ಇವೆಲ್ಲವೂ ನನ್ನ ಗುರುಗಳ ತ್ಯಾಗ, ಬದ್ಧತೆ ಮತ್ತು ಪ್ರೇಮದ ಪ್ರತಿಫಲ" ಎಂದು ಭಾವುಕರಾಗಿ ನುಡಿದರು.

ಉತ್ತರ ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಸದ್ಗುರು ಶ್ರೀ ಮಧುಸೂದನ ಸಾಯಿ

"ನಾನು 7ನೇ ತರಗತಿಯಲ್ಲಿದ್ದಾಗ ನನಗೆ ಚರ್ಮದ ಸೋಂಕು ತಗುಲಿತು. ಮನೆಗೆ ಹೋಗುವಂತೆ ವೈದ್ಯರು ಸೂಚಿಸಿದರು. ನಾನು ಪಾಠಗಳನ್ನು ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕಾಗಿ ನನ್ನ ಗುರುಕುಲದ ಪಾಲಕರು ತಾವೇ ಆರೈಕೆ ಮಾಡಿದರು. ನನ್ನ ವಾರ್ಡನ್ ತೋರಿದ ಪ್ರೇಮವು ಜೀವನಪೂರ್ತಿ ನನ್ನ ಜತೆಗೆ ಇರುತ್ತದೆ. ನಾನು ದೊಡ್ಡವನಾದ ಮೇಲೆ ಡಾಕ್ಟರ್ ಆಗಬೇಕೆಂಬ ಕನಸು ಇಟ್ಟುಕೊಂಡಿದ್ದೇನೆ" ಎಂದು ವಿವರಿಸಿದರು.