ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದ ಭಾಗವಹಿಸಿದ ವಿದ್ಯಾರ್ಥಿಗೆ ಶಿಕ್ಷೆ

ಸೋಮವಾರ ಶಾಲೆಯಲ್ಲಿ ಶಿಕ್ಷಕಿ ಆ ವಿದ್ಯಾರ್ಥಿಯ ಫೇಸ್ಬುಕ್ ವೀಡಿಯೊ ಮತ್ತು ಗಣವೇಶ ಧರಿಸಿರುವ ಚಿತ್ರವನ್ನು ಸಂಪೂರ್ಣ ತರಗತಿಗೆ ತೋರಿಸಿ, ಆ ವಿದ್ಯಾರ್ಥಿಯ ಅವಮಾನ ಮಾಡಿದ್ದಾರೆ. ಪುನಃ ಪುನಃ ತರಗತಿಯ ಹೊರಗೆ ನಿಲ್ಲಿಸುವ ಮೂಲಕ ಅವಮಾನಕಾರಿ ವರ್ತನೆ ಪ್ರದರ್ಶಿಸಿದ್ದಾರೆ ಎಂದು ಆರೋಪಿ ಸಿದ್ದಾರೆ. ಈ ಘಟನೆ ಕುರಿತು ಆ ವಿದ್ಯಾರ್ಥಿ, ಪೋಷಕರಿಗೆ ತಿಳಿಸಿದ್ದಾನೆ.

ಸಂಘದ ಪಥಸಂಚಲನದ ಭಾಗವಹಿಸಿದ ವಿದ್ಯಾರ್ಥಿಗೆ ಶಿಕ್ಷೆ

-

Ashok Nayak Ashok Nayak Oct 16, 2025 12:07 AM

ಡಾ. ಸೋನಾಲಿ ಸರ್‌ನೋಬತ್, ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ – ಕರ್ನಾಟಕ ರಾಜ್ಯ ಕಾರ್ಯದರ್ಶಿ ಖಂಡನೆ

ಬೆಳಗಾವಿ : ಭಾನುವಾರ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಕ್ಯಾಂಪ್ ಪ್ರದೇಶದ ಶಾಲೆಯೊಂದರ ಐದನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷೆ ನೀಡಿರುವ ಘಟನೆ ಖಂಡನೀಯ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಶಾಲೆಯ ಶಿಕ್ಷಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು; ಇಲ್ಲದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Belagavi news: ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

ಸೋಮವಾರ ಶಾಲೆಯಲ್ಲಿ ಶಿಕ್ಷಕಿ ಆ ವಿದ್ಯಾರ್ಥಿಯ ಫೇಸ್ಬುಕ್ ವೀಡಿಯೊ ಮತ್ತು ಗಣವೇಶ ಧರಿಸಿರುವ ಚಿತ್ರವನ್ನು ಸಂಪೂರ್ಣ ತರಗತಿಗೆ ತೋರಿಸಿ, ಆ ವಿದ್ಯಾರ್ಥಿಯ ಅವಮಾನ ಮಾಡಿದ್ದಾರೆ. ಪುನಃ ಪುನಃ ತರಗತಿಯ ಹೊರಗೆ ನಿಲ್ಲಿಸುವ ಮೂಲಕ ಅವಮಾನಕಾರಿ ವರ್ತನೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಘಟನೆ ಕುರಿತು ಆ ವಿದ್ಯಾರ್ಥಿ, ಪೋಷಕರಿಗೆ ತಿಳಿಸಿದ್ದಾನೆ. ಭಾನುವಾರ ಸಾರ್ವಜನಿಕ ರಜೆ ದಿನವಾಗಿರುವುದರಿಂದ ವಿದ್ಯಾರ್ಥಿ ಪಥಸಂಚಲನದಲ್ಲಿ ಭಾಗವಹಿಸುವುದು ಸಂಪೂರ್ಣ ವೈಯಕ್ತಿಕ ವಿಷಯ. ಆದರೆ ಶಿಕ್ಷಕಿ ಅದನ್ನು ರಾಜಕೀಯವಾಗಿ ತೆಗೆದುಕೊಂಡು ತರಗತಿಯಲ್ಲಿ ವಿದ್ಯಾರ್ಥಿಯ ಅವಮಾನ ಮಾಡಿದ್ದಾರೆ.

Dr Sonali New photo (1) ಒಕ

ಈ ಕೃತ್ಯದಿಂದ ಇತರ ವಿದ್ಯಾರ್ಥಿಗಳಲ್ಲಿಯೂ ಭಯದ ವಾತಾವರಣ ನಿರ್ಮಾಣವಾಗಿದೆ.

ಮುಂದಿನ ದಿನ ಮಂಗಳವಾರ ಆ ವಿದ್ಯಾರ್ಥಿ ನಾನು ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದರಿಂದ ಪೋಷಕರಿಗೂ ಸಂಕಟ ಉಂಟಾಗಿದೆ ಎಂದು ಸರ್ನೋಬತ್ ಹೇಳಿದ್ದಾರೆ.

ನಾನು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸುತ್ತೇನೆ. ಶಾಲಾ ಆಡಳಿತದಿಂದ ಸ್ಪಷ್ಟ ಉತ್ತರ ನೀಡಬೇಕು ಹಾಗೂ ಶಿಕ್ಷಕಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.