ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Second Airport: ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌; ಶೀಘ್ರದಲ್ಲೇ ಸ್ಥಳ ಅಂತಿಮ: ಎಂ.ಬಿ.ಪಾಟೀಲ

M.B. Patil: ಬೆಂಗಳೂರಿನ ಸಮೀಪ ನಿರ್ಮಿಸಲು ಉದ್ದೇಶಿಸಿರುವ 2ನೇ ಏರ್‌ಪೋರ್ಟ್‌ ಸದ್ಯ ಚರ್ಚೆ ಹುಟ್ಟು ಹಾಕಿದೆ. ಎಲ್ಲಿ ನಿರ್ಮಾಣವಾಗಬೇಕು ಎನ್ನುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ ʼʼವಿಮಾನ‌ ನಿಲ್ದಾಣವನ್ನು ಎಲ್ಲಿ ಮಾಡಿದರೆ ಸೂಕ್ತವೆನ್ನುವುದು ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆʼʼ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌; ಶೀಘ್ರದಲ್ಲೇ ಸ್ಥಳ ಅಂತಿಮ

Profile Ramesh B Apr 10, 2025 5:48 PM

ಬೆಂಗಳೂರು: ʼʼರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ 2ನೇ ಏರ್‌ಪೋರ್ಟ್‌ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI) ಉನ್ನತ ಮಟ್ಟದ ತಂಡವು ಇನ್ನು 1 ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ (Bengaluru Second Airport). ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ನಂತರ ಸರಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆʼʼ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ (M.B. Patil) ಗುರುವಾರ ಹೇಳಿದ್ದಾರೆ.

ʼʼಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ‌ ನಿಲ್ದಾಣವನ್ನು ಎಲ್ಲಿ ಮಾಡಿದರೆ ಸೂಕ್ತವೆನ್ನುವುದು ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆʼʼ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Bengaluru 2nd Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ, ಕೇಂದ್ರಕ್ಕೆ ರಾಜ್ಯ ಪ್ರಸ್ತಾವನೆ

ʼʼಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್‌ಪೋರ್ಟ್‌ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ ಎರಡನೇ ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾರಂಭಿಸಬಹುದು. ಇಲ್ಲದೆ ಹೋದರೆ 2040ನೇ ಇಸವಿ ಬಂದರೂ ವಿಮಾನ‌ ನಿಲ್ದಾಣ ಆಗುವುದಿಲ್ಲʼʼ ಎಂದು ಅವರು ವಿವರಿಸಿದ್ದಾರೆ.

ʼʼಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರು ತಮ್ಮ ಕ್ಷೇತ್ರ ಶಿರಾ ಸಮೀಪ ಏರ್‌ಪೋರ್ಟ್‌ ಬರಲೆಂದು ಪ್ರಯತ್ನ ಶುರು ಮಾಡಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ವಿಮಾನ ನಿಲ್ದಾಣ ಮಾಡಬಹುದೇ ವಿನಾ ಅದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದಿಲ್ಲ. ಬಿಜೆಪಿಯ ಅರವಿಂದ ಬೆಲ್ಲದ್ ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ಏರ್‌ಪೋರ್ಟ್‌ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲʼʼ ಎಂದು ಎಂ.ಬಿ.ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರ ಏರ್‌ಪೋರ್ಟ್‌ ಶೀಘ್ರ ಕಾರ್ಯಾರಂಭ

ʼʼವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಸುಪ್ರೀಂಕೋರ್ಟಿನಲ್ಲಿ ಪರಿಸರ ಇಲಾಖೆಯ ಅನುಮತಿ ಸಂಬಂಧ ಒಂದು ಪ್ರಕರಣವಿದೆ. ಅದು ಸದ್ಯದಲ್ಲೇ ಇತ್ಯರ್ಥಗೊಳ್ಳುವ ಲಕ್ಷಣಗಳಿವೆ. ಇದಾದರೆ, ಇನ್ನು 6 ತಿಂಗಳಲ್ಲಿ ಉದ್ಘಾಟನೆ ಆಗಲಿದೆʼʼ ಎಂದು ಅವರು ತಿಳಿಸಿದ್ದಾರೆ.

ರಾಯರಡ್ಡಿ ಮಾತನ್ನು ಪಕ್ಷ ಗಮನಿಸಲಿದೆ

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಕರ್ನಾಟಕವು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಯಾರಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು. ಅವರ ಮಾತುಗಳನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲʼʼ ಎಂದು ಹೇಳಿದ್ದಾರೆ.

ʼʼಅಹಮದಾಬಾದ್ ಎಐಸಿಸಿ ಅಧಿವೇಶನದಲ್ಲಿ ಪಕ್ಷವು ಬಡವರು, ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ನಿರ್ಣಯಗಳನ್ನು ತೆಗೆದುಕೊಂಡಿದೆ. ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮಕ್ಕೆ ಪಕ್ಷದಲ್ಲಿ ಕೆಲವು ಅಪವಾದಗಳೂ ಇವೆ. ಅನುಭವ ಮತ್ತು ಹಿರಿತನಗಳ ಮೇಲೆ ಇಂತಹ ವಿನಾಯಿತಿ ಕೊಡಬೇಕಾಗುತ್ತದೆʼʼ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.