ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಜ್ಯ ಬಜೆಟ್‌ ಬಳಿಕ ಆಟೋಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಮಹಿಳೆಯರು ಹಾಗೂ ಮಂಗಳಮುಖಿಯರನ್ನು ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡು ತ್ತಿರುವುದು ಪ್ರಶಂಸನೀಯ. ಇಂದು ಬೆಂಗಳೂರಿನ ಯಾವುದೇ ಜಾಗಕ್ಕೆ ತೆರಳಬೇಕಿದ್ದರೂ ಆಟೋ ಅನಿವಾರ್ಯವಾಗಿದ್ದು, ಬೆಂಗಳೂರಿಗರ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಆಟೋ ಚಾಲಕರ ಸಮುದಾಯಕ್ಕೆ ಇನ್ನಷ್ಟು ಯೋಜನೆ ಹಾಗೂ ಸೌಲಭ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ರಾಜ್ಯ ಬಜೆಟ್‌ ನಂತರ ಕ್ರಮ ಕೈಗೊಳ್ಳಲಾಗುವುದು

ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ಮಹಿಳೆಯರು ಮತ್ತು ಮಂಗಳ ಮುಖಿಯರಿಗೆ ಉಚಿತ ಆಟೋ ಚಾಲನಾ ಹಾಗೂ ಕೌಶಲ್ಯ ತರಬೇತಿಗೆ ಚಾಲನೆ

ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿ ಗಳನ್ನಾಗಿ ಮಾಡಲು ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ ವಾಗಿದ್ದು, ಸರ್ಕಾರದಿಂದಲೂ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ(Transport and Excise Minister Ramalinga Reddy) ಹೇಳಿದರು.

ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ಬಿಟಿಎಂ ಲೇಔಟ್‌ನಲ್ಲಿ ಆಯೋಜಿಸಿದ್ದ ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ಹಾಗೂ ಕೌಶಲ್ಯ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Ramalinga Reddy: ಸಿಟಿ ಸಾರಿಗೆ ಖಾಸಗಿಯವರಿಗೆ ಕೊಡಿ ಎಂದ ಮೋಹನದಾಸ್‌ ಪೈ; ನಿಮ್ಮ ಜೊತೆ ಚರ್ಚೆಗೆ ನಮ್ಮ ಎಂಡಿ ಸಾಕು ಎಂದ ಸಚಿವ ರೆಡ್ಡಿ

ಮಹಿಳೆಯರು ಹಾಗೂ ಮಂಗಳಮುಖಿಯರನ್ನು ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡುತ್ತಿರುವುದು ಪ್ರಶಂಸನೀಯ. ಇಂದು ಬೆಂಗಳೂರಿನ ಯಾವುದೇ ಜಾಗಕ್ಕೆ ತೆರಳ ಬೇಕಿದ್ದರೂ ಆಟೋ ಅನಿವಾರ್ಯವಾಗಿದ್ದು, ಬೆಂಗಳೂರಿಗರ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಆಟೋ ಚಾಲಕರ ಸಮುದಾಯಕ್ಕೆ ಇನ್ನಷ್ಟು ಯೋಜನೆ ಹಾಗೂ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ರಾಜ್ಯ ಬಜೆಟ್‌ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಉಚಿತ ಚಾಲನಾ ತರಬೇತಿ: ಬಿಪ್ಯಾಕ್‌ ಹಾಗೂ ಸಿಜಿಐ ಸಂಸ್ಥೆಯು ಸಿಎಸ್‌ಆರ್‌ ಅಡಿ ಯಲ್ಲಿ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗಳು ವೃತ್ತಿಪರ ಆಟೋ ಚಾಲಕರಾಗಿ ರೂಪುಗೊಳ್ಳಲು ಉಚಿತ ತರಬೇತಿ ನೀಡುತ್ತಾ ಬಂದಿದ್ದು, ಇದುವರೆಗೂ 9 ವಿಧಾನಸಭಾ ಕ್ಷೇತ್ರದಾದ್ಯಂತ 500ಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಈ ಕಾರ್ಯಕ್ರಮ ವನ್ನು ಮುಂದುವರೆಸುವ ಉದ್ದೇಶವನ್ನು ಹೊಂದಲಾಗಿದೆ.

ಕಾರ್ಯಕ್ರಮದಲ್ಲಿ ಸಿಜಿಐ ಪ್ರತಿನಿಧಿ ಸುಧಾಕರ್ ಪೈ, ಶ್ರೀನಿವಾಸ ರಾಘವನ್ (ಡೈರೆಕ್ಟರ್ EAS), ಬಿ.ಪ್ಯಾಕ್ ಕಾರ್ಯಕ್ರಮ ಮುಖ್ಯಸ್ಥ ರಾಘವೇಂದ್ರ ಪೂಜಾರಿ ಎಚ್.ಎಸ್., ನಮ್ಮ ಸಾರಥಿ ಅಧ್ಯಕ್ಷ ಸಂಪತ್ ಮತ್ತು ದೇವಿಕಾ, ಪೀಸ್ ಆಟೋ ಅಧ್ಯಕ್ಷ ರಘು ನಾರಾಯಣ ಗೌಡ ಉಪಸ್ಥಿತರಿದ್ದರು.