Ashwini puneeth: ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಶುಭಾರಂಭ; ಅಶ್ವಿನಿ ಪುನೀತ್ ಕನಸಿಗೆ ಶಾಸಕ ಗೋಪಾಲಯ್ಯ-ಅನುಶ್ರೀ ಸಾಥ್
ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭಗೊಂಡಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಈ ಶಿಕ್ಷಣದ ಕನಸಿಗೆ ಆ್ಯಂಕರ್ ಅನುಶ್ರೀ ಹಾಗೂ ಶಾಸಕ ಗೋಪಾಲಯ್ಯ ಸಾಥ್ ಕೊಟ್ಟಿದ್ದಾರೆ. ಅಶ್ವಿನಿ ಅವರ ಜತೆ ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಫೂರ್ತಿ ವಿಶ್ವಾಸ್, ಸುನೀತಾ ಗೌಡ ಮತ್ತು ಶ್ರುತಿ ಕಿರಣ್ ಕೈಜೋಡಿಸಿದ್ದಾರೆ.
ಜೂನಿಯರ್ ಟೋಸ್ನ ಬೆಂಗಳೂರು ರಾಜಾಜಿನಗರ ಬ್ರ್ಯಾಂಚ್ ಉದ್ಘಾಟನಾ ಕಾರ್ಯ ಕ್ರಮಕ್ಕೆ ಗೋಪಾಲಯ್ಯ ಹಾಗೂ ಅನುಶ್ರೀ ವಿಶೇಷ ಅತಿಥಿಯಾಗಿ ಆಗಮಿಸಿ ಅಶ್ವಿನಿ ಅವರ ಶಿಕ್ಷಣದ ಹೊಸ ಪ್ರಯತ್ನಕ್ಕೆ ಬೆಂಬಲವಾಗಿ ನೀಡಿದರು. ಜೂನಿಯರ್ ಟೋಸ್ ಬ್ರ್ಯಾಂಚ್ ಉದ್ಘಾಟನೆ ಬಳಿಕ ಆ್ಯಂಕರ್ ಅನುಶ್ರೀ, ಮಾತನಾಡಿ, ʼʼಜೂನಿಯರ್ ಟೋಸ್ ಅಪ್ಪು ಹಾಗೂ ಅಶ್ವಿನಿ ಅವರ ಅತಿ ದೊಡ್ಡ ಕನಸು. ಅಪ್ಪು ಅವರಿಗೆ ಕ್ವಾಲಿಟಿ ಎಜುಕೇಶನ್ ನೀಡಬೇಕು ಎನ್ನುವ ಕನಸಿತ್ತು. ಅಪ್ಪು ಸಣ್ಣ ವಯಸ್ಸಿನಲ್ಲಿಯೇ ಅತಿ ದೊಡ್ಡ ಯಶಸ್ಸು ಕಂಡ ಪ್ರತಿಭೆ. ಅಂತಹ ಪ್ರತಿಭೆ ಅನ್ನೋದು ಚಿಕ್ಕ ವಯಸ್ಸಿನಲ್ಲಿಯೇ ಎಲ್ಲರಲ್ಲಿಯೂ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಕಂಡು ಹಿಡಿದು, ಅದಕ್ಕೊಂದು ವೇದಿಕೆ ಕಲ್ಪಿಸಿ ಕೊಡಲು ಜೂನಿಯರ್ ಟೋಸ್ ಎಂಬ ಹೊಸದೊಂದು ಸಂಸ್ಥೆ ಶುರುವಾಗಿದೆʼʼ ಎಂದರು.
ʼʼಇದು ನಮ್ಮ ರಾಜಾಜಿ ನಗರನಲ್ಲಿ 12ನೇ ಬ್ರ್ಯಾಂಚ್ ಆಗಿದ್ದು ಕಿರಣ್ ಹಾಗೂ ದೀಪ್ತಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ನನ್ನ ಕಡೆಯಿಂದ ಅವರಿಗೆ ಬೆಸ್ಟ್ ವಿಷಸ್. ಪೋಸ್ಟರ್ನಲ್ಲಿ ನಮ್ಮ ಬಾಸ್ ಅಪ್ಪು ಇದ್ದಾರೆ. ಅವರು ಎಲ್ಲಿ ಇರ್ತಾರೋ ಅಲ್ಲಿ ಪವರ್ ಇರುತ್ತದೆ. ಇಲ್ಲಿ ಬಂದು ಕಲಿಯುವ ಮಗು ಅಪ್ಪು ಅವರಂತಹ ಗುಣಗಳನ್ನು, ಒಳ್ಳೆ ವಿದ್ಯೆ ಕಲಿತು ದೊಡ್ಡ ಹೆಸರು ಮಾಡಲಿʼʼ ಎಂದು ಅನುಶ್ರಿ ಶುಭ ಹಾರೈಸಿದರು.
ಶಿಕ್ಷಣ ಕ್ಷೇತ್ರದ ಬಗ್ಗೆ ಪುನೀತ್ ರಾಜ್ಕುಮಾರ್ ಅಪಾರ ಕನಸು ಹೊಂದಿದ್ದರು. ಈಗ ಅಪ್ಪು ಕನಸು ನನಸು ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಆರಂಭಿಸಿದ್ದಾರೆ. ಅಶ್ವಿನಿ ಅವರ ಜತೆ ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಫೂರ್ತಿ ವಿಶ್ವಾಸ್, ಸುನೀತಾ ಗೌಡ ಮತ್ತು ಶೃತಿ ಕಿರಣ್ ಕೈ ಜೋಡಿಸಿದ್ದಾರೆ. ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲೂ ಇದೆ.
ಅಶ್ವಿನಿ ಪುನೀತ್ ರಾಜ್ಕುಮಾರ್, ಖ್ಯಾತ ಶಿಕ್ಷಣ ತಜ್ಞೆ ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್ ಹಾಗೂ ಶ್ರುತಿ ಕಿರಣ್ ಸಂಸ್ಥಾಪಿಸಿರುವ ಈ ಶಾಲೆ ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮದೊಂದಿಗೆ ಜೂನ್ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಲಿದೆ.
ಜೂನಿಯರ್ ಟೋಸ್ ಕಲಿಕಾ ಕೇಂದ್ರದಲ್ಲಿ ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಮತ್ತು ನವೀನ ಪಠ್ಯಕ್ರಮ ಇರಲಿವೆ. ಈ ಕೇಂದ್ರಗಳು ಕೇವಲ ಶಾಲೆಗಳಷ್ಟೇ ಅಲ್ಲ, ಅವು ಮಕ್ಕಳಿಗೆ ಸೃಜನಶೀಲವಾಗಿ ಚಿಂತಿಸಲು, ಆತ್ಮವಿಶ್ವಾಸದಿಂದ ನಡೆದುಕೊಳ್ಳಲು ಮತ್ತು ನಾಯಕತ್ವಕ್ಕೆ ಪ್ರೇರಣೆ ನೀಡುವ ಸ್ಥಳಗಳಾಗಿ ರೂಪುಗೊಳ್ಳಲಿವೆ.