ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.10ರಂದು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Dec 9, 2025 5:33 PM

ಬೆಂಗಳೂರು, ಡಿ.9: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.10ರಂದು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗುಂಡಾಂಜನೇಯ ದೇವಸ್ಥಾನ, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಐನೋರದೊಡ್ಡಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಾಲಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ತಾಸುದೇವರಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯ, ನಲ್ಲಕನದೊಡ್ಡಿ. CRPF ಕ್ಯಾಂಪ್ ಗೇಟ್ 1&82, ಎಡಿಫೈ ಸ್ಕೂಲ್ ಸೋಮನಹಳ್ಳಿ, ಕೆರೆಚೂದರ್ನಹಳ್ಳಿ, ಸಾಧನಪಾಳ್ಯ. ಹೊಸದೊಡ್ಡಿ, ನೆಲಗುಳಿ, ಲಿಂಗಪ್ಪರನದೊಡ್ಡಿ, ಯೋಗವನ ಬೇಟ, ಬೋಳಾರೆ, ವೀರಸಾಂದ್ರ, ಜಟ್ಟಿಪಾಳ್ಯ, ಗೊಲ್ಲರಪಾಳ್ಯ, 1912 ತಿಟ್ಟಹಳ್ಳಿ. ಗಂಗಕನಗೊಡ್ಡಿ, ಬೋಕಿಪುರ, ತೋಕತಿಮ್ಮನದೊಡ್ಡಿ, ಏಡುಮಾಡು, ಅವಸರಲ ಫ್ಯಾಕ್ಟರ್, ರಾವರದೊಡ್ಡಿ, ತಾತಗುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು, ಮುನಿನಗರ, ಕಗ್ಗಲೀಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗಾವಿಯಲ್ಲಿ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

Bescom Helpline: ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.

ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.

ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021

ರೈಲ್ವೆ ನೇಮಕಾತಿ ಮಂಡಳಿಯಿಂದ 8,860 ಹುದ್ದೆಗಳಿಗೆ ನೇಮಕಾತಿ

ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.