ಬೆಂಗಳೂರು, ನ.12: 66/11 ಕೆ.ವಿ. ಬಾಣಸವಾಡಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ (Bengaluru News) ಹಲವೆಡೆ ನ.13ರಂದು ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅದೇ ರೀತಿ ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, ಎಂ.ಎಂ. ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್ಶಿಪ್, ಮಲ್ಲಪ್ಪ ಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್ ಲೇಔಟ್, ಸಮೃದ್ಧಿ ಲೇಔಟ್, ವಾಟರ್ ಟ್ಯಾಂಕ್, ಕಲ್ಕೆರೆ, ಜಯಂತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Eye Makeup Tips 2025: ಸಂದರ್ಭಕ್ಕೆ ತಕ್ಕಂತಿರಲಿ ನಿಮ್ಮ ಐ ಮೇಕಪ್
Bescom Helpline: ವಿದ್ಯುತ್ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್ ಆ್ಯಪ್ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ
ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.
ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.
ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021
ಈ ಸುದ್ದಿಯನ್ನೂ ಓದಿ | Electricity Meter: ಕೈಗೆಟಕುವ ಸ್ಥಳದಲ್ಲಿ ವಿದ್ಯುತ್ ಮೀಟರ್ ಅಳವಡಿಸಲು ಬೆಸ್ಕಾಂ ಮನವಿ
ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.