ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru News: ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ

ಹಿರಿಯ ಭರತನಾಟ್ಯ ಗುರು ರಾಧಾ ಶ್ರೀಧರ್ ಅವರು 1969ರಲ್ಲಿ ಸ್ಥಾಪನೆ ಮಾಡಿದ ವೆಂಕಟೇಶ ನಾಟ್ಯ ಮಂದಿರ 56ವರ್ಷಗಳಿಂದ ನಿರಂತರ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಶಾಂತಲಾ ನಾಟ್ಯ ಪ್ರಶಸ್ತಿಗೆ ಭಾಜನವಾಗಿರುವ ರಾಧಾ ಶ್ರೀಧರ್ 87ರ ಹರೆಯದಲ್ಲೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಅವರ ಜೀವನೋತ್ಸಾಹ ಕುಂದಿಲ್ಲ

ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ

-

Ashok Nayak
Ashok Nayak Jan 20, 2026 12:08 PM

ಬೆಂಗಳೂರು: ವೆಂಕಟೇಷ ನಾಟ್ಯ ಮಂದಿರದಿಂದ ರವಿಂದ್ರ ಕಲಾಕ್ಷೇತ್ರ ಹಾಗೂ ಎಡಿಎ ರಂಗ ಮಂದಿರದಲ್ಲಿ ಜ.16 ರಿಂದ ಮೂರು ದಿನಗಳ ವೈಭವದ ಅವಳಿ ಸಹೋದರಿಯರ ಭರತ ನಾಟ್ಯ ರಸ ಸಂಜೆ ಉತ್ಸವ ನಡೆಯಿತು. ಜ.16 ರಂದು ರವೀಂದ್ರ ಕಲಾಕ್ಷೇತ್ರ, 17 ಮತ್ತು 18 ರಂದು ಎಡಿಎ ರಂಗ ಮಂದಿರದಲ್ಲಿ ಕಲಾವಿದರು ರಸದೌತಣ ಉಣ ಬಡಿಸಿದರು.

ಇದನ್ನೂ ಓದಿ: Bangalore News: ವೆಂಕಟೇಶ ನಾಟ್ಯ ಮಂದಿರದಿಂದ ಜ.16 ರಿಂದ ಮೂರು ದಿನಗಳ ನಾಟ್ಯ ರಸ ಸಂಜೆ ಕಾರ್ಯಕ್ರಮ: ದಿಗ್ಗಜ ಕಲಾವಿದರಿಂದ ಪ್ರದರ್ಶನಕ್ಕೆ ವೇದಿಕೆ ಸಜ್ಜು

ಹನ್ನೊಂದು ಕಲಾವಿದರು ಉತ್ಸವದಲ್ಲಿ ಭಾಗಿಯಾಗಿದ್ದರು. ಅವಳಿ ಸಹೋದರಿಯರಾದ ಅರ್ಚನಾ-ಚೇತನಾ, ನಿವೇದಿತಾ ಭಾರದ್ವಾಜ್, ಡಾ.ಸಂಜಯ್, ಶಾಂತಾರಾಂ ಅವರ ಶಿವಪ್ರಿಯ ನೃತ್ಯಶಾಲೆ, ಚೆನ್ನೈನಿಂದ ಬರುತ್ತಿರುವ ಷಣ್ಮುಗಂ ಸುಂದರ್, ಅನೌಷ್ಕಾ ಪ್ರಭು (ಕಥಕ್), ಪೃಥ್ವಿ ಪಾರ್ಥಸಾರಥಿ, ಅವಿಜಿತ್ ಕುಂದು, ಅರ್ಚನಾ ಹೆಚ್.ಆರ್., ಶುಭಾ ಧನಂಜಯ್, ಮುದ್ರಾ ಧನಂಜಯ್, ದೀಪ್ತಿ, ಸತ್ಯಪ್ರಕಾಶ್, ವಂದ್ಯಾ ಶ್ರೀನಾಥ್ ಅವರ ಶಿಷ್ಯರ ಸಮೂಹ ಪ್ರದರ್ಶನ ಗಮನ ಸೆಳೆಯಿತು.

Female Dancs 3

ಹಿರಿಯ ಭರತನಾಟ್ಯ ಗುರು ರಾಧಾ ಶ್ರೀಧರ್ ಅವರು 1969ರಲ್ಲಿ ಸ್ಥಾಪನೆ ಮಾಡಿದ ವೆಂಕಟೇಶ ನಾಟ್ಯ ಮಂದಿರ 56ವರ್ಷಗಳಿಂದ ನಿರಂತರ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಶಾಂತಲಾ ನಾಟ್ಯ ಪ್ರಶಸ್ತಿಗೆ ಭಾಜನ ವಾಗಿರುವ ರಾಧಾ ಶ್ರೀಧರ್ 87ರ ಹರೆಯದಲ್ಲೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಅವರ ಜೀವನೋತ್ಸಾಹ ಕುಂದಿಲ್ಲ.

Female dancs 2

ವಿಸ್ತಾರವಾಗಿ ಬೆಳೆಯುತ್ತಿರುವ ಶಾಸ್ತ್ರೀಯ ನೃತ್ಯ ಕ್ಷೇತ್ರದ ಕಲಾವಿದರಿಗೆ ಒಂದು ಪ್ರತಿಷ್ಟೆಯ ವೇದಿಕೆ ಒದಗಿಸುವುದು ಅವರ ಆಶಯವಾಗಿದೆ. ಪ್ರತಿವರ್ಷ ಜನವರಿ ತಿಂಗಳಲ್ಲಿ ಮೂರು ದಿನಗಳ ಕಾಲ ಈ ಉತ್ಸವವನ್ನು ಆಯೋಜಿಸಿ, ಹಲವು ಕಲಾವಿದರನ್ನು ಪ್ರದರ್ಶನಕ್ಕೆ ಆಹ್ವಾನಿಸುತ್ತಾರೆ. ನೃತ್ಯ ಕ್ಷೇತ್ರ ದಲ್ಲಿ 'ರಸ ಸಂಜೆ' ಉತ್ಸವ ಒಂದು ಘನತೆಯ ಸ್ಥಾನವನ್ನು ರೂಪಿಸಿಕೊಂಡಿದೆ.