ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ; ಬಿಜೆಪಿ ವಾಗ್ದಾಳಿ

ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಆರ್‌ಸಿಬಿ ವಿಜಯೋತ್ಸವ ಆಯೋಜನೆ ವೇಳೆ ಈ ದುರಂತ ನಡೆದಿದೆ. ಈ ಘಟನೆಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಬಿಜೆಪಿ

Profile Ramesh B Jun 4, 2025 8:03 PM

ಬೆಂಗಳೂರು: 18 ವರ್ಷಗಳ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಐಪಿಎಲ್‌ ಕಪ್‌ ಗೆದ್ದು ತವರಿಗೆ ಮರಳಿದೆ. ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಆಯೋಜಿಸಿದ್ದ ವಿಜಯೋತ್ಸವ ಭಾರಿ ದುರಂತಕ್ಕೆ ಕಾರಣವಾಗಿದೆ. ಸ್ಟೇಡಿಯಂ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ನೆರೆದಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಬಿಜೆಪಿ (BJP) ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದೆ (Bengaluru Stampede). ಜತೆಗೆ ಈ ದುರಂತಕ್ಕೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಅವ್ಯವಸ್ಥೆಯೇ ಕಾರಣ ಎಂದೂ ದೂರಿದೆ.

ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅವರು ಕಾಲ್ತುಳಿತಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜನದಟ್ಟಣೆ ತಡೆಯಲು ಕಾಂಗ್ರೆಸ್ ಸರ್ಕಾರ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರ ಎಕ್ಸ್‌ ಪೋಸ್ಟ್‌:



ಈ ಸುದ್ದಿಯನ್ನೂ ಓದಿ: Bengaluru Stampede: 18 ವರ್ಷದ ಬಳಿಕ ಐಪಿಎಲ್‌ ಕಪ್‌ ಗೆದ್ದರೂ ಆರ್‌ಸಿಬಿಗಿಲ್ಲ ಸಂಭ್ರಮ; ಬೆಂಗಳೂರು ಕಾಲ್ತುಳಿತಕ್ಕೆ ಕಾರಣವೇನು?

"ಚಿನ್ನಸ್ವಾಮಿ ಮೈದಾನದ ಬಳಿ ನಡೆದ ದುರಂತದಿಂದ ಆಘಾತಕ್ಕೊಳಗಾಗಿದ್ದೇನೆ. ಸಂಭ್ರಮದ ಬದಲು ನೋವು ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಆರ್‌ಸಿಬಿಯ ಗೆಲುವಿನಲ್ಲಿ ತನ್ನ ಪಾತ್ರವಿದೆ ಎನ್ನುವುದನ್ನು ಬಿಂಬಿಸುವ ಪ್ರಯತ್ನದಲ್ಲಿ ನಿರತವಾಗಿದೆ. ಮುಖ್ಯಮಂತ್ರಿ ವಿಜಯೋತ್ಸವಕ್ಕೆ ಮುಕ್ತ ಆಹ್ವಾನ ನೀಡಿದ್ದರೂ, ಮೈದಾನದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿರಲಿಲ್ಲ" ಎಂದು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ʼʼಸರ್ಕಾರವು ಸೂಕ್ತ ವ್ಯವಸ್ಥೆ ಕಲ್ಪಿಸಲು ವಿಫಲವಾಗಿದೆ. ಕೊನೆಯ ನಿಮಿಷದಲ್ಲಿ ಅತಿರೇಕದ ನಿರ್ಧಾರ ತೆಗೆದುಕೊಂಡಿದೆ" ಎಂದು ಹೇಳಿದ್ದಾರೆ.

ನಾರಾಯಣಸ್ವಾಮಿ ಅವರ ಪೋಸ್ಟ್‌:



ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಕೂಡ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ʼʼಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಮಗು ಸೇರಿದಂತೆ 8ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದು ಕೇವಲ ಅಪಘಾತವಲ್ಲ – ಇದು ಜನಸಂದಣಿ ನಿಯಂತ್ರಣ ಹಾಗೂ ಭದ್ರತಾ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯದ ಪರಿಣಾಮ. ಸಮರ್ಪಕ ಮುಂಜಾಗ್ರತೆ ಮತ್ತು ಭದ್ರತೆಯ ಕೊರತೆಯೇ ಈ ದುರಂತಕ್ಕೆ ಕಾರಣ. ಶೋಕದಲ್ಲಿ ಮುಳುಗಿದ ಈ ಸಂಭ್ರಮ, ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆʼʼ ಎಂದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಕಾರಣವೇನು?

ವರದಿಗಳ ಪ್ರಕಾರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸಾರ್ವಜನಿಕರಿಗೆ ಮಾಡಿರುವ ವ್ಯವಸ್ಥೆಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವುದೇ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಮೈದಾನದ ಪ್ರವೇಶಕ್ಕೆ ಟಿಕೆಟ್‌ ತೆಗೆದುಕೊಳ್ಳಬೇಕಾ ಅಥವಾ ಉಚಿತವಾ ಎನ್ನುವ ಬಗ್ಗೆ ಗೊಂದಲ ಕಾಡಿತ್ತು. ಈ ಮಧ್ಯೆ ಕ್ರೀಡಾಂಗಣದ ಗೇಟ್‌ ತೆರೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರಿ ಲಾಠಿ ಚಾರ್ಚ್‌ ನಡೆದಿದ್ದು ಕಾಲ್ತುಳಿಕ್ಕೆ ಕಾರಣ ಎನ್ನಲಾಗಿದೆ.