ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

BJP worker Death: ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಚೀಟಿ ನಡೆಸುತ್ತಿದ್ದರು. ಆದರೆ 7 ಜನ ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರು. ಇದೇ ಸಮಯದಲ್ಲಿ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ವೆಂಕಟೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಯುವ ಮುನ್ನ ವಿಡಿಯೋ ಮಾಡಿಟ್ಟು, ಹಣಕಾಸು ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ.

ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ವೆಂಕಟೇಶ್ -

ಹರೀಶ್‌ ಕೇರ
ಹರೀಶ್‌ ಕೇರ Nov 13, 2025 2:43 PM

ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್‌ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌ (Tours And Travels) ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಮೃತದೇಹವನ್ನ ಬೌರಿಂಗ್‌ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಶ್ವಥ್‌ ನಾರಾಯಣ್‌ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಮತ್ತೊಂದು ಕಡೆ ವೆಂಕಟೇಶ್‌ ಕಳೆದ 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ ಅಂತ ಹೇಳಲಾಗ್ತಿದೆ. ಹಣಕಾಸು ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಪ್ತ ಮೂಲಗಳು ಪೊಲೀಸರಿಗೆ ತಿಳಿಸಿವೆ.

ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಚೀಟಿ ನಡೆಸುತ್ತಿದ್ದರು. ಆದರೆ 7 ಜನ ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರು. ಇದೇ ಸಮಯದಲ್ಲಿ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ವೆಂಕಟೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಯುವ ಮುನ್ನ ವಿಡಿಯೋ ಮಾಡಿಟ್ಟು, ಹಣಕಾಸು ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಜೊತೆಗೆ ಜೀವನದಲ್ಲಿ ಏನಾದರೂ ಆಗಿ ಚೀಟಿ ಏಜೆಂಟ್ ಆಗಬೇಡಿ ಅಂತಲೂ ಅಲವತ್ತುಕೊಂಡಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Bhopal Model Death: ಭೋಪಾಲ್ ರೂಪದರ್ಶಿ ನಿಗೂಢ ಸಾವು- ಮರಣೋತ್ತರ ವರದಿಯಲ್ಲಿ ಬಯಲಾಯ್ತು ಶಾಕಿಂಗ್‌ ಸಂಗತಿ